AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

CSK vs DC, IPL 2021: ಇಂದಿನ ಪಂದ್ಯದ ಬಗ್ಗೆ ಹೆಚ್ಚು ಕುತೂಹಲ ಮೂಡಲು ಕಾರಣ ತಿಳಿಸಿದ ರವಿ ಶಾಸ್ತ್ರಿ

ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಎದುರಾಳಿಗಳಾಗಿದ್ದಾರೆ. ಇಬ್ಬರೂ ಕೂಡ ಉಭಯ ತಂಡದ ನಾಯಕರು ಹಾಗೂ ವಿಕೆಟ್ ಕೀಪರ್​ಗಳೂ ಆಗಿರುವುದು ವಿಶೇಷವಾಗಿದೆ.

CSK vs DC, IPL 2021: ಇಂದಿನ ಪಂದ್ಯದ ಬಗ್ಗೆ ಹೆಚ್ಚು ಕುತೂಹಲ ಮೂಡಲು ಕಾರಣ ತಿಳಿಸಿದ ರವಿ ಶಾಸ್ತ್ರಿ
ರಿಷಭ್ ಪಂತ್ ಹಾಗೂ ಮಹೇಂದ್ರ ಸಿಂಗ್ ಧೋನಿ (ಚಿತ್ರ: ಡೆಲ್ಲಿ ಕ್ಯಾಪಿಟಲ್ಸ್ ಟ್ವಿಟರ್ ಹ್ಯಾಂಡಲ್)
TV9 Web
| Edited By: |

Updated on:Apr 05, 2022 | 12:41 PM

Share

ಐಪಿಎಲ್ 2021ರ ಎರಡನೇ ಪಂದ್ಯಾಟ ಇಂದು ಮುಂಬೈನ ವಾಂಖೆಡೆ ಮೈದಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆಯಲಿದೆ. ಕಳೆದ ಬಾರಿ ಕಳಪೆ ಪ್ರದರ್ಶನ ತೋರಿದ್ದ ಚೆನ್ನೈ, ಯುವಕರ ಎನರ್ಜಿಟಿಕ್ ತಂಡ ಡೆಲ್ಲಿ ಕ್ಯಾಪಿಟಲ್ಸ್​ನ್ನು ಎದುರಿಸಲಿದೆ. ಮೂರು ಬಾರಿ ಕಪ್ ಗೆದ್ದಿರುವ ಸಿಎಸ್​ಕೆ ನಾವು ಕಮ್ಮಿಯೇನೂ ಇಲ್ಲ ಎಂದು ಮತ್ತೆ ಆಡಿ ತೋರಿಸಲು ತಯಾರಾಗಿದೆ.

ನಿನ್ನೆ ಆರಂಭವಾದ ಐಪಿಎಲ್​ಗೆ ರಾಯಲ್ ಚಾಲೆಂಜರ್ಸ್ ಹಾಗೂ ಮುಂಬೈ ಇಂಡಿಯನ್ಸ್ ತಂಡಗಳು ಆರಂಭ ನೀಡಿದ್ದವು. ಇಂದು ಸೀಸನ್​ನ ಮೊದಲ ವೀಕೆಂಡ್ ಪಂದ್ಯಾಟ ನಡೆಯಲಿದ್ದು, ಚೆನ್ನೈಗೆ ಡೆಲ್ಲಿ ಸವಾಲೊಡ್ಡಿದೆ. ಈ ಪಂದ್ಯದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ರಿಷಭ್ ಪಂತ್ ಎದುರಾಳಿಗಳಾಗಿರುವುದು ಮತ್ತೊಂದು ವಿಶೇಷ. ಇಬ್ಬರೂ ಕೂಡ ಉಭಯ ತಂಡದ ನಾಯಕರು ಹಾಗೂ ವಿಕೆಟ್ ಕೀಪರ್​ಗಳೂ ಆಗಿದ್ದಾರೆ.

ಈ ಕುರಿತು ರವಿ ಶಾಸ್ತ್ರಿ ಕೂಡ ಟ್ವೀಟ್ ಮಾಡಿದ್ದಾರೆ. ಇಂದಿನ ಪಂದ್ಯವನ್ನು ಗುರು ವರ್ಸಸ್ ಚೇಲಾ ಎಂದು ಅವರು ಕರೆದಿದ್ದಾರೆ. ಇಂದಿನ ಪಂದ್ಯ ಬಹಳಷ್ಟು ಮಜವಾಗಿರಲಿದೆ. ಸ್ಟಂಪ್ ಮೈಕ್ ಕಡೆಗೆ ಇರಿಸಿಕೊಳ್ಳಿ. ಡು ಲಿಸನ್ ಟು ಸ್ಟಂಪ್ ಮೈಕ್ ಎಂದು ಕೇಳಿಕೊಂಡಿದ್ದಾರೆ. ವಿಕೆಟ್ ಕೀಪರ್ ಹಾಗೂ ಕ್ರೀಸ್​ನಲ್ಲಿ ಬ್ಯಾಟಿಂಗ್ ಮಾಡುವ ವೇಳೆ, ಧೋನಿ ಮತ್ತು ಪಂತ್ ನಡುವೆ ಏನು ಮಾತುಕತೆ ನಡೆಯಬಹುದು ಎಂಬ ಕುತೂಹಲ ಹೆಚ್ಚಿಸಿದ್ದಾರೆ.

ಈ ಟ್ವೀಟ್​ನಲ್ಲಿ ಅವರು ಮಹೇಂದ್ರ ಸಿಂಗ್ ಧೋನಿಯನ್ನು ಗುರು ಎಂದು ಹಾಗೂ ಪಂತ್ ಅವರನ್ನು ಚೇಲಾ (ಹಿಂಬಾಲಕ) ಎಂದು ಕರೆದಿದ್ದಾರೆ. ಅವರಿಬ್ಬರು ಆಟದ ವೇಳೆ ಏನು ಮಾತಾಡುತ್ತಾರೆ ಕೇಳಿಕೊಳ್ಳಿ ಎಂದು ಹೇಳಿ, ಪಂದ್ಯದ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಪಂತ್ ಹಾಗೂ ಧೋನಿ ಇಬ್ಬರೂ ಸಾಧಾರಣವಾಗಿ ತಮ್ಮ ತಂಡದ ಸದಸ್ಯರೊಂದಿಗೆ ಮಾತನಾಡಿಕೊಂಡಿರುತ್ತಾರೆ. ಬೌಲಿಂಗ್ ವೇಳೆ ಬೌಲರ್​ಗಳಿಗೆ ಸಲಹೆ ನೀಡುತ್ತಿರುತ್ತಾರೆ. ಹಾಗಾಗಿ, ಸ್ಟಂಪ್​ನ ಹಿಂಬಾಗದ ಮಾತುಗಳಿಗೆ ಇಂದು ಹೆಚ್ಚೇ ಕುತೂಹಲ ಮೂಡಿಸಿದೆ.

ನಾಯಕನಾಗಿ ನನ್ನ ಮೊದಲ ಪಂದ್ಯ ಮಾಹಿ ಭಾಯ್ (ಮಹೇಂದ್ರ ಸಿಂಗ್ ಧೋನಿ) ವಿರುದ್ಧ ನಡೆಯುತ್ತಿರುವುದು ಖುಷಿ ಇದೆ. ಇದೊಂದು ಒಳ್ಳೆಯ ಅನುಭವ ಆಗಿರಲಿದೆ. ಅವರಿಂದ ನಾನು ಬಹಳಷ್ಟು ಕಲಿತಿದ್ದೇನೆ. ನನ್ನ ಸ್ವ ಅನುಭವ ಹಾಗೂ ಧೊನಿಯಿಂದ ಕಲಿತಿದ್ದನ್ನೂ ಅಳವಡಿಸಿ ಆಡುತ್ತೇನೆ ಎಂದು ಡೆಲ್ಲಿ ತಂಡದ ಪ್ರೆಸ್ ರಿಲೀಸ್​ನಲ್ಲಿ ಪಂತ್ ಹೇಳಿದ್ದರು.

ಇದನ್ನೂ ಓದಿ: CSK vs DC Predicted Playing 11: ಡೆಲ್ಲಿ ಕ್ಯಾಪಿಟಲ್ಸ್​ಗೆ ಸೂಪರ್ ಕಿಂಗ್ಸ್ ಸವಾಲ್; ಇಂದಿನ ಪಂದ್ಯದ ಸಂಭಾವ್ಯ ಆಟಗಾರರು ಇವರು

ಇದನ್ನೂ ಓದಿ: MS Dhoni: ಮಹೇಂದ್ರ ಸಿಂಗ್ ಧೋನಿ ಮುಂದಿವೆ ಮೂರು ದಾಖಲೆಗಳು; ಐಪಿಎಲ್ 2021ರಲ್ಲೂ ಮಾಡ್ತಾರಾ ಧೋನಿ ಧಮಾಕ?

Published On - 4:24 pm, Sat, 10 April 21

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ