ಕಾಮನ್‌ವೆಲ್ತ್ ಗೇಮ್ಸ್​ ತಯಾರಿಯಲ್ಲಿರುವ ಭಾರತ ಹಾಕಿ ಅಭ್ಯಾಸ ಶಿಬಿರದಲ್ಲಿ ಕೊರೊನಾ ಹಾವಳಿ; ಐವರಿಗೆ ಸೋಂಕು..!

Commonwealth Games 2022: ತಂಡದ ಸ್ಟ್ರೈಕರ್ ಗುರ್ಜಂತ್ ಸಿಂಗ್ ಮತ್ತು ಮುಖ್ಯ ಕೋಚ್ ಗ್ರಹಾಂ ರೀಡ್ ಸೇರಿದಂತೆ ಐವರು ಆಟಗಾರರು ವೈರಸ್‌ಗೆ ತುತ್ತಾಗಿದ್ದಾರೆ. ಬುಧವಾರ ಬೆಳಗ್ಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಲಾಗಿದ್ದು, ಸೋಂಕಿತರು ಕೊರೊನಾದ ಸೌಮ್ಯ ರೋಗಲಕ್ಷಣಗಳಿಂದ ಬಳಲುತ್ತಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್​ ತಯಾರಿಯಲ್ಲಿರುವ ಭಾರತ ಹಾಕಿ ಅಭ್ಯಾಸ ಶಿಬಿರದಲ್ಲಿ ಕೊರೊನಾ ಹಾವಳಿ; ಐವರಿಗೆ ಸೋಂಕು..!
ಭಾರತ ಹಾಕಿ ತಂಡ
Follow us
| Updated By: ಪೃಥ್ವಿಶಂಕರ

Updated on:Jun 30, 2022 | 3:36 PM

ಕಾಮನ್‌ವೆಲ್ತ್ ಗೇಮ್ಸ್ 2022ಕ್ಕೆ ತಯಾರಿ ನಡೆಸುತ್ತಿರುವ ಭಾರತೀಯ ಪುರುಷರ ಹಾಕಿ ತಂಡದ ತಯಾರಿ ಶಿಬಿರದ ಮೇಲೆ ಕೊರೊನಾ ದಾಳಿ ಮಾಡಿದೆ. ತಂಡದ ಸ್ಟ್ರೈಕರ್ ಗುರ್ಜಂತ್ ಸಿಂಗ್ ಮತ್ತು ಮುಖ್ಯ ಕೋಚ್ ಗ್ರಹಾಂ ರೀಡ್ ಸೇರಿದಂತೆ ಐವರು ಆಟಗಾರರು ವೈರಸ್‌ಗೆ ತುತ್ತಾಗಿದ್ದಾರೆ. ಬುಧವಾರ ಬೆಳಗ್ಗೆ ಆರ್‌ಟಿ-ಪಿಸಿಆರ್‌ ಪರೀಕ್ಷೆ ನಡೆಸಲಾಗಿದ್ದು, ಸೋಂಕಿತರು ಕೊರೊನಾದ ಸೌಮ್ಯ ರೋಗಲಕ್ಷಣಗಳಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಯಾರನ್ನೂ ಹೆಸರಿಸದೆ ಮಾಧ್ಯಮ ಪ್ರಕಟಣೆಯಲ್ಲಿ ಹಾಕಿ ಇಂಡಿಯಾ, ‘ಕಾಮನ್‌ವೆಲ್ತ್ ಗೇಮ್ಸ್ 2022 ಕ್ಕೆ ತಯಾರಿ ನಡೆಸುತ್ತಿರುವ ಭಾರತೀಯ ಪುರುಷರ ಹಾಕಿ ತಂಡದ ಇಬ್ಬರು ಆಟಗಾರರು ಮತ್ತು ಮೂವರು ಸಹಾಯಕ ಸಿಬ್ಬಂದಿಗೆ ಕೋವಿಡ್ -19 ಪಾಸಿಟಿವ್ ಇರುವುದು ಕಂಡುಬಂದಿದೆ ಎಂದು ತಿಳಿಸಿದೆ.

ಹಾಕಿ ಅಭ್ಯಾಸ ಶಿಬಿರದಲ್ಲಿ ಕೊರೊನಾ ಹಾವಳಿ

ತಂಡದ ಮೂಲವೊಂದು ಪಿಟಿಐಗೆ ತಿಳಿಸಿದ್ದು, ಗುರ್ಜಂತ್ ಮತ್ತು ಗ್ರಹಾಂ ರೀಡ್ ಸೋಂಕಿಗೆ ಒಳಗಾಗಿದ್ದಾರೆ. ತಂಡದ ವಿಡಿಯೋ ವಿಶ್ಲೇಷಕ ಅಶೋಕ್ ಕುಮಾರ್ ಚಿನ್ನಸ್ವಾಮಿ ಅವರಿಗೂ ಪಾಸಿಟಿವ್ ಬಂದಿದೆ. ಗುರ್ಜಂತ್ ಹೊರತಾಗಿ, ಪಾಸಿಟಿವ್ ಕಂಡುಬಂದಿರುವ ಆಟಗಾರ ಆಶಿಶ್ ಕುಮಾರ್ ಟಾಪ್ನೋ ಆಗಿದ್ದಾರೆ. ಪಿಆರ್ ಶ್ರೀಜೇಶ್, ಮನ್‌ಪ್ರೀತ್ ಸಿಂಗ್, ಪವನ್, ಲಲಿತ್ ಕುಮಾರ್ ಉಪಾಧ್ಯಾಯ, ಹರ್ಮನ್‌ಪ್ರೀತ್ ಸಿಂಗ್, ವರುಣ್ ಕುಮಾರ್ ಮತ್ತು ಅಮಿತ್ ರೋಹಿದಾಸ್ ಸೇರಿದಂತೆ 31 ಆಟಗಾರರು ಭಾರತೀಯ ಕ್ರೀಡಾ ಪ್ರಾಧಿಕಾರ (ಎಸ್‌ಎಐ) ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಶಿಬಿರದಲ್ಲಿ ಭಾಗವಹಿಸುತ್ತಿದ್ದಾರೆ. ಎಫ್‌ಐಎಚ್ ಹಾಕಿ ಪ್ರೊ ಲೀಗ್‌ನಲ್ಲಿ ಬೆಲ್ಜಿಯಂ ಮತ್ತು ನೆದರ್ಲೆಂಡ್ಸ್ ವಿರುದ್ಧ ಆಡಿದ ನಂತರ ಆಟಗಾರರು ಶಿಬಿರಕ್ಕೆ ಆಗಮಿಸಿದರು. ಶಿಬಿರವು ಜುಲೈ 23 ರಂದು ಕೊನೆಗೊಳ್ಳಲಿದ್ದು, ನಂತರ ತಂಡವು ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟಕ್ಕೆ ತೆರಳಲಿದೆ.

ಇದನ್ನೂ ಓದಿ
Image
Russia Ukraine War: ರಷ್ಯಾ ಕ್ಷಿಪಣಿ ದಾಳಿಗೆ ಉಕ್ರೇನ್​ನ ಫುಟ್ಬಾಲ್ ಸ್ಟೇಡಿಯಂನಲ್ಲಿ ಬಿತ್ತು 5 ಮೀ. ಆಳದ ಕುಳಿ
Image
MS Dhoni: ಯಾರಿಂದಲೂ ಗುಣವಾಗಿಲ್ಲ, ಕೊನೆಗೆ ಹಳ್ಳಿ ವೈದ್ಯರ ಮೊರೆ ಹೋದ ಧೋನಿ..!

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 18,819 ಹೊಸ ಕೊರೊನಾ ವೈರಸ್ ಪ್ರಕರಣಗಳು ವರದಿಯಾಗಿವೆ. ಈಗ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಒಂದು ಲಕ್ಷದ ನಾಲ್ಕು ಸಾವಿರದ 555. ದೇಶದಲ್ಲಿ 39 ಹೊಸ ಸಾವುಗಳೊಂದಿಗೆ, ಸೋಂಕಿನಿಂದ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಐದು ಲಕ್ಷದ 25 ಸಾವಿರದ 116 ಕ್ಕೆ ಏರಿದೆ.

ಭಾರತ ಅತ್ಯಂತ ಬಲಿಷ್ಠ ತಂಡವನ್ನು ಆಯ್ಕೆ ಮಾಡಿದೆ

ಕಾಮನ್‌ವೆಲ್ತ್ ಗೇಮ್ಸ್‌ಗೆ ಬಲಿಷ್ಠ ಹಾಕಿ ತಂಡವನ್ನು ಆಯ್ಕೆ ಮಾಡಲಾಗಿದೆ. ತಂಡದ ಕಮಾಂಡ್ ಮನ್ ಪ್ರೀತ್ ಸಿಂಗ್ ಅವರದ್ದಾಗಿದೆ. ಅದೇ ಸಮಯದಲ್ಲಿ ಪಿಆರ್ ಶ್ರೀಜೇಶ್ ಕೂಡ ತಂಡದ ಭಾಗವಾಗಿದ್ದಾರೆ. 2018ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ತಂಡ ನಾಲ್ಕನೇ ಸ್ಥಾನ ಪಡೆದಿದ್ದು, ಈ ಬಾರಿ ಪದಕ ತರುವುದು ಇದರ ಗುರಿಯಾಗಿದೆ.

ಭಾರತೀಯ ಹಾಕಿ ತಂಡ

ಮಿಡ್‌ಫೀಲ್ಡರ್‌ಗಳು: ಮನ್‌ಪ್ರೀತ್ ಸಿಂಗ್ (ನಾಯಕ), ವಿವೇಕ್ ಸಾಗರ್ ಪ್ರಸಾದ್, ಶಂಶೇರ್ ಸಿಂಗ್, ಹಾರ್ದಿಕ್ ಸಿಂಗ್, ಆಕಾಶದೀಪ್ ಸಿಂಗ್, ನೀಲಕಾಂತ್ ಶರ್ಮಾ.

ಗೋಲ್‌ಕೀಪರ್‌ಗಳು: ಪಿಆರ್ ಶ್ರೀಜೇಶ್ ಮತ್ತು ಕೃಷ್ಣ ಬಹದ್ದೂರ್ ಪಾಠಕ್

ಡಿಫೆಂಡರ್ಸ್: ವರುಣ್ ಕುಮಾರ್, ಸುರೇಂದ್ರ ಕುಮಾರ್, ಹರ್ಮನ್ಪ್ರೀತ್ ಸಿಂಗ್, ಜುಗ್ರಾಜ್ ಸಿಂಗ್, ಅಮಿತ್ ರೋಹಿದಾಸ್, ಮತ್ತು ಜರ್ಮನ್ಪ್ರೀತ್ ಸಿಂಗ್.

Published On - 3:36 pm, Thu, 30 June 22

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ