AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲ್ಡೀವ್ಸ್​ನಲ್ಲಿ ಆಸಿಸ್​ ಆಟಗಾರರ ರಂಪಾಟ; ಬಾರ್​ನಲ್ಲಿ ಪರಸ್ಪರ ಹೊಡೆದಾಡಿಕೊಂಡ ವಾರ್ನರ್-ಸ್ಲೆಟರ್?

ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಮತ್ತು ಐಪಿಎಲ್ನಲ್ಲಿ ಕಾಮಂಟೇಟರ್ ಆಗಿದ್ದ ಮಾಜಿ ಕ್ರಿಕೆಟಿಗ ಮೈಕಲ್ ಸ್ಲೆಟರ್ ಪರಸ್ಪರ ಜಗಳ ಮಾಡಿ ಕೊಂಡಿದ್ದಾರೆ.

ಮಾಲ್ಡೀವ್ಸ್​ನಲ್ಲಿ ಆಸಿಸ್​ ಆಟಗಾರರ ರಂಪಾಟ; ಬಾರ್​ನಲ್ಲಿ ಪರಸ್ಪರ ಹೊಡೆದಾಡಿಕೊಂಡ ವಾರ್ನರ್-ಸ್ಲೆಟರ್?
ಡೇವಿಡ್ ವಾರ್ನರ್ , ಮೈಕಲ್ ಸ್ಲೆಟರ್
ಪೃಥ್ವಿಶಂಕರ
|

Updated on: May 10, 2021 | 4:29 PM

Share

ಆಸ್ಟ್ರೇಲಿಯಾ ಕ್ರಿಕೆಟಿಗರಿಬ್ಬರು ಕುಡಿದ ಮತ್ತಿನಲ್ಲಿ ಜಗಳ ಮಾಡಿಕೊಂಡಿದ್ದಾರೆ. ಹಾಗಾದ್ರೆ ಅದ್ಯಾವ ವಿಚಾರಕ್ಕೆ ಜಗಳ ಮಾಡಿಕೊಂಡಿದ್ದಾರೆ. ಐಪಿಎಲ್ ಅರ್ಧಕ್ಕೆ ಮೊಟಕುಗೊಂಡಿರೋದ್ರಿಂದ ವಿದೇಶಿ ಕ್ರಿಕೆಟಿಗರೆಲ್ಲಾ, ತಮ್ಮ ತಮ್ಮ ತವರಿಗೆ ವಾಪಸ್ ಆಗಿದ್ದಾರೆ. ಮೇ 15ರವರೆಗೆ ಆಸ್ಟ್ರೇಲಿಯಾ ಭಾರತದ ವಿಮಾನಗಳಿಗೆ ನಿರ್ಬಂಧ ಹೇರಿದೆ. ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟಿಗರು ಮಾತ್ರ ತಮ್ಮ ತವರಿಗೆ ತೆರಳೋಕಾಗದೇ ಮಾಲ್ಡೀವ್ಸ್ನಲ್ಲಿದ್ದಾರೆ.

ಆಸ್ಟ್ರೇಲಿಯಾ ಕ್ರಿಕೆಟಿಗರು ಮಾಲ್ಡೀವ್ಸ್ನಲ್ಲಿದ್ರೆ ಸುದ್ದಿಯಾಗ್ತಾ ಇರಲಿಲ್ಲ. ಆದ್ರೆ ಮಾಲ್ಡೀವ್ಸ್ನಲ್ಲಿ ಆಸ್ಟ್ರೇಲಿಯಾ ಕ್ರಿಕೆಟಿಗರಿಬ್ಬರು ಹೊಡೆದಾಡಿಕೊಂಡಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ ಮತ್ತು ಐಪಿಎಲ್ನಲ್ಲಿ ಕಾಮಂಟೇಟರ್ ಆಗಿದ್ದ ಮಾಜಿ ಕ್ರಿಕೆಟಿಗ ಮೈಕಲ್ ಸ್ಲೆಟರ್ ಪರಸ್ಪರ ಜಗಳ ಮಾಡಿ ಕೊಂಡಿದ್ದಾರೆ.

ಬಾರ್ನಲ್ಲಿ ಹೊಡೆದಾಡಿಕೊಂಡ ವಾರ್ನರ್-ಸ್ಲೆಟರ್? ಹೇಗೋ ತವರಿಗೆ ಹೋಗ್ತೀವಿ ಅನ್ನೋ ಖುಷಿಯಲ್ಲಿದ್ದ ಆಸಿಸ್ ಕ್ರಿಕೆಟಿಗರು ರಿಲ್ಯಾಕ್ಸ್ ಆಗೋಕೆ ಬಾರ್ಗೆ ತೆರಳಿದ್ದಾರೆ. ಈ ವೇಳೆ ವಾರ್ನರ್ ಮತ್ತು ಸ್ಲೆಟರ್ ನಡುವೆ ಮಾತಿನ ಚಕಮಕಿ ನಡೆದಿದೆ. ಮಾತಿನ ಚಕಮಕಿ ಜೋರಾಗಿ ಇಬ್ಬರು ಕೈ ಕೈ ಮಿಲಾಯಿಸುವಷ್ಟರ ಮಟ್ಟಿಗೆ ವಾಗ್ವಾದ ಉಂಟಾಗಿ, ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಅಲ್ಲೇ ಇದ್ದ ಇತರೆ ಆಟಗಾರರು ಇಬ್ಬರ ಜಗಳವನ್ನ ಬಿಡಿಸಿದ್ದಾರೆ.

ಇಬ್ಬರು ಈ ಸುದ್ದಿಯನ್ನ ನಿರಾಕರಿಸಿದ್ದಾರೆ ವಾರ್ನರ್ ಮತ್ತು ಸ್ಲೆಟರ್ ಮಾಲ್ಡೀವ್ಸ್ನ ಬಾರ್ನಲ್ಲಿ ಜಗಳ ಮಾಡಿಕೊಂಡಿರುವ ಸುದ್ದಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಆದ್ರೆ ಡೇವಿಡ್ ವಾರ್ನರ್ ಮತ್ತು ಮೈಕಲ್ ಸ್ಲೆಟರ್ ಇಬ್ಬರು ಈ ಸುದ್ದಿಯನ್ನ ನಿರಾಕರಿಸಿದ್ದಾರೆ. ನಾವಿಬ್ಬರು ದೀರ್ಘಕಾಲದ ಸ್ನೇಹಿತರು ನಮ್ಮಿಬ್ಬರ ನಡುವೆ ಯಾವುದೇ ಜಗಳವಾಗಿಲ್ಲ ಎಂದಿದ್ದಾರೆ.

ಒಂದು ಪಂದ್ಯದ ನಿಷೇಧದ ಶಿಕ್ಷೆಗೆ ಗುರಿಯಾಗಿದ್ರು ಇಲ್ಲಿ ವಾರ್ನರ್ ಮಾತನ್ನ ನಂಬೋ ಹಾಗಿಲ್ಲ.. ಯಾಕಂದ್ರೆ 2013ರಲ್ಲಿ ವಾರ್ನರ್ ಕುಡಿದ ಮತ್ತಿನಲ್ಲಿ ಇಂಗ್ಲೆಂಡ್ ತಂಡದ ಜೋ ರೂಟ್ ಜೊತೆ ಜಗಳವಾಡಿ, ಒಂದು ಪಂದ್ಯದ ನಿಷೇಧದ ಶಿಕ್ಷೆಗೆ ಗುರಿಯಾಗಿದ್ರು. ಹೀಗಾಗಿ ಕುಡಿದ ಮತ್ತಿನಲ್ಲಿ ಕಿರಿಕ್ ತಗೆಯೋ ವಾರ್ನರ್ ಸ್ಲೆಟರ್ ಜೊತೆ ಜಗಳವಾಡಿರೋ ವಿಚಾರವನ್ನ, ಸುಲಭವಾಗಿ ಅಲ್ಲಗೆಳೆಯುವಂತಿಲ್ಲ.

ಇದನ್ನೂ ಓದಿ:IPL 2021: ಪ್ಲೀಸ್ ಡ್ಯಾಡಿ, ಬೇಗ ಮನೆಗೆ ಬನ್ನಿ.. ಮಗಳ ಭಾವನಾತ್ಮಾಕ ಸಂದೇಶ ಹಂಚಿಕೊಂಡ ಡೇವಿಡ್ ವಾರ್ನರ್

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!