AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್​

Ravichandran Ashwin withdraws from IPL: ಕೊರೊನಾ ಕಾಟ: ​ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್​. ಈ ಮಧ್ಯೆ, ಇಡೀ ದೇಶವೇ ಕೊರೊನಾದಿಂದ ನಲುಗುತ್ತಿರುವಾಗ ಐಪಿಎಲ್ ನಗುತ್ತಿರುವುದರ ಬಗ್ಗೆ ಕ್ರಿಕೆಟ್​ ಪ್ರೇಮಿಗಳೂ ಸೇರಿದಂತೆ ಎಲ್ಲೆಡೆಯೂ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಕೊರೊನಾದಿಂದಾಗಿ ಹಾಲಿ ಟೂರ್ನಿಯನ್ನು ಇಲ್ಲಿಗೇ ನಿಲ್ಲಿಸಿ ಎಂದು ಜನ ಕೇಳತೊಡಗಿದ್ದಾರೆ. ಹಾಲಿ ಐಪಿಎಲ್ ಟೂರ್ನಿ ಮೇ 30 ರವರೆಗೂ ನಡೆಯಲಿದೆ.

ಕೊರೊನಾ ಕಾಟ: ​ಐಪಿಎಲ್ ಟೂರ್ನಿಯಿಂದ ದೂರ ಸರಿದ ಕೆಚ್ಚೆದೆಯ ಆಟಗಾರ ಆರ್​ ಅಶ್ವಿನ್, ಆರ್​ಸಿಬಿ ತಂಡಕ್ಕೂ ಬರೆ; ಇಬ್ಬರು ಸ್ವದೇಶಕ್ಕೆ ವಾಪಸ್​
ಆರ್​. ಅಶ್ವಿನ್​
ಸಾಧು ಶ್ರೀನಾಥ್​
|

Updated on:Apr 26, 2021 | 1:01 PM

Share

ಕೆಚ್ಚೆದೆಯ ಆಟಗಾರ ಎಂದೇ ಕ್ರಿಕೆಟ್​ ಪ್ರೇಮಿಗಳಿಂದ ಗುರುತಿಸಲ್ಪಟ್ಟಿರುವ ಆರ್​ ಅಶ್ವಿನ್​ ಅವರು ಈ ಬಾರಿಯ ಐಪಿಎಲ್ 2021 ಗೆ ಗುಡ್​ ಬೈ ಹೇಳಿದ್ದಾರೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಪ್ರಸಕ್ತ ​ಐಪಿಎಲ್ ಟೂರ್ನಿಯ ಉಳಿದ ಪಂದ್ಯಗಳಿಂದ ತಾವು ದೂರ ಸರಿಯುತ್ತಿರುವುದಾಗಿ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಪರ ಆಡುವ ಸ್ಪಿನ್ನರ್ ತಮ್ಮ ನಿರ್ಧಾರ ಘೋಷಿಸಿದ್ದಾರೆ. ಇದಕ್ಕೆ ಮುಖ್ಯ ಕಾರಣ.. ಕೊರೊನಾ ಕಾಟ ಎಂಬುದಾಗಿ ಅವರು ಹೇಳಿದ್ದಾರೆ. ಕೊರೊನಾ ಸೋಂಕಿನಿಂದ ತಮ್ಮ ಕುಟುಂಬಸ್ಥರು ಬಳಲುತ್ತಿದ್ದಾರೆ. ಹಾಗಾಗಿ, ಈ ಪರಿಸ್ಥಿತಿಯಲ್ಲಿ ನಾನು ಅವರ ಜೊತೆಗೆ ಇರಬೇಕಾಗಿದೆ. ಹಾಗಾಗಿ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಟ್ವೀಟ್​ ಮಾಡಿ ಅಶ್ವಿನ್ ತಿಳಿಸಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಕ್ಯಾಪ್ಟನ್​ ಅಶ್ವಿನ್​ ಅವರ ಈ ನಿರ್ಧಾರವನ್ನು ಸ್ವಾಗತಿಸಿ, ಟ್ವೀಟ್​ ಮಾಡಿದ್ದಾರೆ.

ಕೆಚ್ಚೆದೆಯ ಆಟಗಾರ 34 ವರ್ಷದ ಆರ್​ ಅಶ್ವಿನ್​ ಐಪಿಎಲ್ ಟೂರ್ನಿಯಿಂದ ದೂರ ಸರಿದಿರುವುದರಿಂದ ತಾವು ಆಡುವ ತಂಡ ಡೆಲ್ಲಿ ಕ್ಯಾಪಿಟಲ್ಸ್​ಗೆ ಭಾರಿ ಹೊಡೆತ ಬಿದ್ದಂತಾಗಿದೆ. ಜೊತೆಗೆ ಐಪಿಎಲ್ ಟೂರ್ನಿಗೂ ಇದು ನುಂಗಲಾರದ ತುತ್ತಾಗಿದೆ. ಆದರೆ ಕೊರೊನಾ ಮಾರಿ ದಿನೇದಿನೆ ದೇಶದಲ್ಲಿ ತನ್ನ ಕದಂಬಬಾಹುಗಳನ್ನು ಚಾಚುತ್ತಿರುವಾಗ ಪರಿಸ್ಥಿತಿ ಭೀಕರವೆನಿಸುತ್ತಿದೆ. 77 ಟೆಸ್ಟ್​ ಪಂದ್ಯಗಳನ್ನು ಆಡಿರುವ ಅಶ್ವಿನ್​ ರವಿಚಂದ್ರನ್, 111 ODIs, 46 T20 Internationals ಪಂದ್ಯಗಳನ್ನು ಆಡಿದ್ದಾರೆ.

ಈ ಮಧ್ಯೆ, ಇಡೀ ದೇಶವೇ ಕೊರೊನಾದಿಂದ ನಲುಗುತ್ತಿರುವಾಗ ಐಪಿಎಲ್ ನಗುತ್ತಿರುವುದರ ಬಗ್ಗೆ ಕ್ರಿಕೆಟ್​ ಪ್ರೇಮಿಗಳೂ ಸೇರಿದಂತೆ ಎಲ್ಲೆಡೆಯೂ ವ್ಯಾಪಕ ಟೀಕೆಗಳು ಕೇಳಿಬರುತ್ತಿವೆ. ಕೊರೊನಾದಿಂದಾಗಿ ಹಾಲಿ ಟೂರ್ನಿಯನ್ನು ಇಲ್ಲಿಗೇ ನಿಲ್ಲಿಸಿ ಎಂದು ಜನ ಕೇಳತೊಡಗಿದ್ದಾರೆ. ಹಾಲಿ ಐಪಿಎಲ್ ಟೂರ್ನಿ ಮೇ 30 ರವರೆಗೂ ನಡೆಯಲಿದೆ.

(Delhi Capitals spinner Ravichandran Ashwin withdraws from IPL to support family over COVID-19)

ಕೊರೊನಾ ಕಾಟವು ಆರ್​ಸಿಬಿ ತಂಡಕ್ಕೂ ಬರೆ ಹಾಕಿದೆ. ತಂಢದ ಪರ ಆಡುತ್ತಿದ್ದ ಆಸ್ಟ್ರೇಲಿಯಾದ ಇಬ್ಬರು ಆಟಗಾರರು ಸ್ವದೇಶಕ್ಕೆ ವಾಪಸ್​ ಆಗಿದ್ದಾರೆ. ಆರ್​ಸಿಬಿ ತಂಡದ ಪರ ಆಡುತ್ತಿದ್ದ ಆಸ್ಟ್ರೇಲಿಯಾದ ಕೇನ್ ರಿಚರ್ಡ್​ಸನ್ ಮತ್ತು ಅಡಂ ಜಂಪಾ ಅವರಿಬ್ಬರೂ ಕೊರೊನಾ ಸೋಂಕಿನ ಪ್ರಮಾಣ ಮಾರಣಾಂತಿಕವಾಗಿ ಹೆಚ್ಚುತ್ತಿರುವುದರಿಂದ ಸ್ವದೇಶಕ್ಕೆ ಮರಳಿದ್ದಾರೆ.

Published On - 10:15 am, Mon, 26 April 21

Follow Us
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಮಕ್ಕಳಿಗೆ ಬಾಲಗ್ರಹ ಮಂತ್ರಗಳನ್ನ ಹೇಳುವುದರ ಹಿಂದಿನ ರಹಸ್ಯವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!
ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ