AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ಕದನ! ಯಾರು ಗೆಲ್ತಾರೆ?

ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 27, 2021 | 1:43 PM

Share

ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ನಡುವೆ ಬಿಗ್ ಫೈಟ್​ ನಡೆಯಲಿದೆ. ಉಭಯ ತಂಡಗಳು ಐದು ಪಂದ್ಯಗಳಿಂದ ನಾಲ್ಕು ಗೆಲುವು ಸಾಧಿಸಿವೆ, ರಿಷಭ್ ಪಂತ್ ಅವರ ಡಿಸಿ 0.096 ಕ್ಕೆ ಉತ್ತಮ ನಿವ್ವಳ ರನ್​ರೇಟ್  ಹೊಂದಿದೆ. ತಮ್ಮ ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡವನ್ನು ಸೋಲಿಸಿತು. ಮತ್ತೊಂದೆಡೆ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ […]

ಇಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ದೆಹಲಿ ಕ್ಯಾಪಿಟಲ್ಸ್ (ಡಿಸಿ) ನಡುವೆ ಬಿಗ್ ಫೈಟ್​ ನಡೆಯಲಿದೆ. ಉಭಯ ತಂಡಗಳು ಐದು ಪಂದ್ಯಗಳಿಂದ ನಾಲ್ಕು ಗೆಲುವು ಸಾಧಿಸಿವೆ, ರಿಷಭ್ ಪಂತ್ ಅವರ ಡಿಸಿ 0.096 ಕ್ಕೆ ಉತ್ತಮ ನಿವ್ವಳ ರನ್​ರೇಟ್  ಹೊಂದಿದೆ. ತಮ್ಮ ಹಿಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೂಪರ್ ಓವರ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ (ಎಸ್‌ಆರ್‌ಹೆಚ್) ತಂಡವನ್ನು ಸೋಲಿಸಿತು. ಮತ್ತೊಂದೆಡೆ, ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 69 ರನ್​ಗಳಿಂದ ಸೋತ ನಂತರ ರಾಯಲ್​ ಚಾಲೆಂಜರ್ಸ್ ಗೆಲುವಿನ ಹಾದಿಗೆ ಮರಳಲು ಉತ್ಸುಕರಾಗಿದ್ದಾರೆ.

ಈ ಮಧ್ಯೆ, ಆರ್‌ಸಿಬಿಯ ಕೇನ್ ರಿಚರ್ಡ್‌ಸನ್ ಮತ್ತು ಆಡಮ್ ಜಂಪಾ ಆಸ್ಟ್ರೇಲಿಯಾಕ್ಕೆ ಮರಳಿದ್ದಾರೆ ಮತ್ತು ಉಳಿದ ಪಂದ್ಯಾವಳಿಗಳಿಗೆ ಲಭ್ಯವಿರುವುದಿಲ್ಲ. ಚಾಲೆಂಜರ್ಸ್ ಮತ್ತು ಕ್ಯಾಪಿಟಲ್ಸ್​ ಇಬ್ಬರೂ ತಮ್ಮ ಮುಂದಿನ ಮುಖಾಮುಖಿಯಲ್ಲಿ ಗೆಲುವಿನೊಂದಿಗೆ ಪಾಯಿಂಟ್ ಟೇಬಲ್‌ನ ಅಗ್ರಸ್ಥಾನಕ್ಕೆ ಹೋಗಲು ನೋಡುತ್ತಿದ್ದಾರೆ.

ಪಿಚ್ ವರದಿ: ಅಹಮದಾಬಾದ್‌ನಲ್ಲಿನ ಪಿಚ್ ಬ್ಯಾಟಿಂಗ್‌ಗೆ ಉತ್ತಮವಾಗಿದೆ, ವಿಶೇಷವಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಲ್ಲಿ ಬೃಹತ್​ ರನ್ ಮಳೆಯೇ ಹರಿದಿತ್ತು. ಈ ಹಿಂದಿನ ಆಟಗಳನ್ನು ಗಮನದಲ್ಲಿಟ್ಟುಕೊಂಡರೆ ಚೇಸ್ ಮಾಡುವವರಿಗೆ ಉತ್ತಮ ಅವಕಾಶ. ಇಲ್ಲಿ 38 ಡಿಗ್ರಿ ಸೆಲ್ಸಿಯಸ್ ತಾಪಮಾನವಿರಲಿದೆ.
(Delhi Capitals vs Royal Challengers Bangalore DC vs RCB ipl 2021)

Published on: Apr 27, 2021 01:43 PM

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು