AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವರು ಯಾವ ರೀತಿಯ ಪ್ರವಾಸ ಆಯೋಜಿಸಿದ್ದಾರೆ; ಬಿಸಿಸಿಐ ಮೇಲೆ ಕಿಡಿಕಾರಿದ ದಿಲೀಪ್ ವೆಂಗ್‍ಸಾರ್ಕರ್

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದ ನಂತರ ಒಂದೂವರೆ ತಿಂಗಳವರೆಗೆ ಭಾರತೀಯ ತಂಡ ಅಲ್ಲಿ ಏನು ಮಾಡುತ್ತದೆ?

ಇವರು ಯಾವ ರೀತಿಯ ಪ್ರವಾಸ ಆಯೋಜಿಸಿದ್ದಾರೆ; ಬಿಸಿಸಿಐ ಮೇಲೆ ಕಿಡಿಕಾರಿದ ದಿಲೀಪ್ ವೆಂಗ್‍ಸಾರ್ಕರ್
ಜೋ ರೂಟ್, ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on: May 31, 2021 | 8:58 PM

Share

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ ಫೈನಲ್) ಫೈನಲ್ ಪಂದ್ಯವನ್ನು ಆಡಲು ಭಾರತೀಯ ಕ್ರಿಕೆಟ್ ತಂಡ ಜೂನ್ 2 ರಂದು ಇಂಗ್ಲೆಂಡ್‌ಗೆ ತೆರಳಲಿದೆ. ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಜೂನ್ 18 ರಂದು ನಡೆಯುವ ಫೈನಲ್ ಪಂದ್ಯದ ನಂತರ ಆಗಸ್ಟ್ 4 ರಿಂದ ಆರಂಭವಾಗಲಿದೆ. ಏತನ್ಮಧ್ಯೆ, ಭಾರತದ ಮಾಜಿ ನಾಯಕ ದಿಲೀಪ್ ವೆಂಗ್ಸಾರ್ಕರ್ ಎರಡು ಸರಣಿಗಳ ನಡುವೆ ಒಂದೂವರೆ ತಿಂಗಳ ಅಂತರದ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ಡಬ್ಲ್ಯೂಟಿಸಿ ಫೈನಲ್ ನಂತರ ಒಂದೂವರೆ ತಿಂಗಳವರೆಗೆ ಭಾರತ ತಂಡವು ಇಂಗ್ಲೆಂಡ್ನಲ್ಲಿ ಏನು ಮಾಡುತ್ತದೆ? ಆದ್ದರಿಂದ ಪ್ರವಾಸವನ್ನು ಸರಿಯಾಗಿ ಯೋಜಿಸಬೇಕು ಎಂದು ವೆಂಗ್‌ಸಾರ್ಕರ್ ಹೇಳಿದರು.

ಕ್ರಿಕೆಟ್ ನೆಕ್ಸ್ಟ್ ಗೆ ನೀಡಿದ ಸಂದರ್ಶನದಲ್ಲಿ ದಿಲೀಪ್ ವೆಂಗ್ಸರ್ಕರ್, “ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯದ ನಂತರ ಒಂದೂವರೆ ತಿಂಗಳವರೆಗೆ ಭಾರತೀಯ ತಂಡ ಅಲ್ಲಿ ಏನು ಮಾಡುತ್ತದೆ? ಇಂಗ್ಲೆಂಡ್ ಮತ್ತು ಭಾರತ ನಡುವಿನ ಪಂದ್ಯಗಳ ವೇಳಾಪಟ್ಟಿಯನ್ನು ನೋಡಿ ನಾನು ತುಂಬಾ ಅಸಮಾದಾನಗೊಂಡಿದ್ದೇನೆ. ಯಾವ ರೀತಿಯ ಪ್ರವಾಸವನ್ನು ಇವರು ಆಯೋಜಿಸಿದ್ದಾರೆ? ನೀವು ಒಂದು ಪಂದ್ಯವನ್ನು ಆಡಿ ನಂತರ ಮತ್ತೊಂದು ಪಂದ್ಯಕ್ಕಾಗಿ ಒಂದೂವರೆ ತಿಂಗಳು ಕಾಯಬೇಕಾಗಿರುವುದು ಹೇಗೆ? ಪಾಕಿಸ್ತಾನ ಮತ್ತು ಶ್ರೀಲಂಕಾ ಜುಲೈನಲ್ಲಿ ಇಂಗ್ಲೆಂಡ್ ವಿರುದ್ಧ ಆಡಬೇಕಾದರೆ, ಭಾರತ ಮತ್ತು ಇಂಗ್ಲೆಂಡ್ ಪಂದ್ಯಗಳನ್ನು ತಕ್ಷಣ ಆಡಬೇಕು ಎಂದಿದ್ದಾರೆ

ಇಂಗ್ಲೆಂಡ್ ಪ್ರವಾಸದ ಮಾಹಿತಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪಂದ್ಯವು ಜೂನ್ 18 ರಿಂದ 22 ರವರೆಗೆ ನಡೆಯಲಿದೆ. ಅದರ ನಂತರ ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಟೆಸ್ಟ್ ಪಂದ್ಯಗಳು ನಡೆಯಲಿವೆ. ಮೊದಲ ಪಂದ್ಯವನ್ನು ಆಗಸ್ಟ್ 4 ರಿಂದ 8 ರವರೆಗೆ ನಾಟಿಂಗ್ಹ್ಯಾಮ್ನಲ್ಲಿ ಆಡಲಾಗುತ್ತದೆ. ಎರಡನೇ ಪಂದ್ಯವನ್ನು ಆಗಸ್ಟ್ 12 ರಿಂದ ಲಂಡನ್‌ನಲ್ಲಿ ಮತ್ತು ಮೂರನೇ ಪಂದ್ಯವನ್ನು ಆಗಸ್ಟ್ 25 ರಿಂದ ಲೀಡ್ಸ್ನಲ್ಲಿ ಆಡಲಾಗುತ್ತದೆ. ಐದನೇ ಮತ್ತು ಅಂತಿಮ ಪಂದ್ಯ ಸೆಪ್ಟೆಂಬರ್ 2 ರಿಂದ 6 ರವರೆಗೆ ಲಂಡನ್‌ನಲ್ಲಿ ನಾಲ್ಕನೇ ಪಂದ್ಯದ ನಂತರ ಸೆಪ್ಟೆಂಬರ್ 10 ರಿಂದ 14 ರವರೆಗೆ ಮ್ಯಾಂಚೆಸ್ಟರ್‌ನಲ್ಲಿ ನಡೆಯಲಿದೆ.

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ