AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು
ಸೌರವ್​ ಗಂಗೂಲಿ
Lakshmi Hegde
|

Updated on: Jan 03, 2021 | 1:41 PM

Share

ಕೋಲ್ಕತ್ತ: ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್​ ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌರವ್​ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟ್​ ಮಾಡಲಾಗಿದ್ದು, ಐಸಿಯುನಲ್ಲಿ ಇದ್ದಾರೆ. ಇನ್ನು ಗಂಗೂಲಿಗೆ ಕೊವಿಡ್​-19 ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್​ ಬಂದಿದೆ.

ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ, ಕ್ರಿಕೆಟ್​ ವಲಯದ ಹಲವರು ಹಾರೈಸಿದ್ದಾರೆ.

ಗಂಗೂಲಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ: ಜಯ್ ಶಾ

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ