AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆ; ಜ್ವರ ಕಡಿಮೆಯಾಗಿದೆ, ನಿಗಾ ವಹಿಸಿದ್ದೇವೆ ಎಂದ ವೈದ್ಯರು
ಸೌರವ್​ ಗಂಗೂಲಿ
Lakshmi Hegde
|

Updated on: Jan 03, 2021 | 1:41 PM

Share

ಕೋಲ್ಕತ್ತ: ಲಘು ಹೃದಯಾಘಾತಕ್ಕೆ ಒಳಗಾಗಿ ವುಡ್​ ಲ್ಯಾಂಡ್​ ಆಸ್ಪತ್ರೆಗೆ ದಾಖಲಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ ಆರೋಗ್ಯದಲ್ಲಿ ಸುಧಾರಣೆಯಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಸದ್ಯ ಗಂಗೂಲಿಯವರಲ್ಲಿ ಜ್ವರ ಕಡಿಮೆಯಾಗಿದೆ. ಎಚ್ಚರವಾಗಿದ್ದು, ಮಾತನಾಡುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ವೈದ್ಯರ ತಂಡ ನಿಗಾ ವಹಿಸಿದೆ. ಕಾಲಕಾಲಕ್ಕೆ ಅಗತ್ಯ ಚಿಕಿತ್ಸೆಗಳನ್ನು ನೀಡಲಾಗುತ್ತಿದೆ ಎಂದು ಹೆಲ್ತ್​ ಬುಲೆಟಿನ್​ನಲ್ಲಿ ತಿಳಿಸಲಾಗಿದೆ.

ಸೌರವ್​ ಗಂಗೂಲಿಗೆ ನಿನ್ನೆ ಬೆಳಗ್ಗೆ 11 ಗಂಟೆಗೆ ಜಿಮ್​ ಮಾಡುತ್ತಿದ್ದಾಗ ಎದೆನೋವು ಕಾಣಿಸಿಕೊಂಡಿತ್ತು. ಮಧ್ಯಾಹ್ನ 1 ಗಂಟೆ ಹೊತ್ತಿಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೌರವ್​ ಗಂಗೂಲಿಯವರಿಗೆ ಆ್ಯಂಜಿಯೋಪ್ಲಾಸ್ಟ್​ ಮಾಡಲಾಗಿದ್ದು, ಐಸಿಯುನಲ್ಲಿ ಇದ್ದಾರೆ. ಇನ್ನು ಗಂಗೂಲಿಗೆ ಕೊವಿಡ್​-19 ಟೆಸ್ಟ್ ಕೂಡ ಮಾಡಲಾಗಿದ್ದು, ವರದಿ ನೆಗೆಟಿವ್​ ಬಂದಿದೆ.

ಸೌರವ್ ಗಂಗೂಲಿ ಬೇಗ ಗುಣಮುಖರಾಗಲಿ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ, ಕ್ರಿಕೆಟ್​ ವಲಯದ ಹಲವರು ಹಾರೈಸಿದ್ದಾರೆ.

ಗಂಗೂಲಿ ಆರೋಗ್ಯ ಸ್ಥಿರವಾಗಿದೆ, ಚಿಕಿತ್ಸೆಗೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ: ಜಯ್ ಶಾ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ