AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ತಂಡಕ್ಕೆ ಜ್ಯಾಕ್ ಕ್ಯಾಲಿಸ್ ಬ್ಯಾಟಿಂಗ್ ಸಲಹೆ

ಆಲ್​ರೌಂಡರ್ ಆಗಿದ್ದರೂ ತಮ್ಮ ಸಮಕಾಲೀನ ಶ್ರೇಷ್ಠ ಬ್ಯಾಟ್ಸ್​ಮನ್​ಗಳಿಗಿಂತ ಉತ್ತಮ ಬ್ಯಾಟಿಂಗ್ ಸರಾಸರಿಯನ್ನು ಹೊಂದಿರುವ ದಕ್ಷಿಣ ಆಫ್ರಿಕಾದ ಜ್ಯಾಕ್ ಕ್ಯಾಲಿಸ್ ಅವರನ್ನು ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಇಂಗ್ಲೆಂಡ್ ಟೀಮಿನ ಬ್ಯಾಟಿಂಗ್ ಕನ್ಸ್​ಲ್ಟಂಟ್ ಆಗಿ ನೇಮಕ ಮಾಡಿಕೊಳ್ಳಲಾಗಿದೆ.

ಶ್ರೀಲಂಕಾ ಪ್ರವಾಸ: ಇಂಗ್ಲೆಂಡ್ ತಂಡಕ್ಕೆ ಜ್ಯಾಕ್ ಕ್ಯಾಲಿಸ್ ಬ್ಯಾಟಿಂಗ್ ಸಲಹೆ
ಜ್ಯಾಕ್ ಕ್ಯಾಲಿಸ್
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on: Dec 21, 2020 | 9:47 PM

Share

ಭಾರತ ಉಪಖಂಡದ ಪಿಚ್​ಗಳಲ್ಲಿ ಉತ್ಕೃಷ್ಟ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ದಕ್ಷಿಣ ಆಫ್ರಿಕಾದ ಮಾಜಿ ಆಲ್​ರೌಂಡರ್ ಜ್ಯಾಕ್ ಕ್ಯಾಲಿಸ್ ಅವರನ್ನು ಜನವರಿ 14ರಿಂದ ಆರಂಭಗೊಳ್ಳಲಿರುವ ಶ್ರೀಲಂಕಾ ಪ್ರವಾಸಕ್ಕೆ ಇಂಗ್ಲೆಂಡ್ ಟೀಮಿನ ಬ್ಯಾಟಿಂಗ್ ಕನ್ಸಲ್​​ಟಂಟ್​  ಆಗಿ ನೇಮಕ ಮಾಡಿಕೊಳ್ಳಲಾಗಿದೆಯೆಂದು ಇಂಗ್ಲೆಂಡ್ ಮತ್ತು ವೇಲ್ಸ್​ ಕ್ರಿಕೆಟ್ ಬೋರ್ಡ್ (ಇಸಿಬಿ)ಸೋಮವಾರ ಬಿಡುಗಡೆ ಮಾಡಿರುವ ಪ್ರಕಟಣೆಯೊಂದರಲ್ಲಿ ತಿಳಿಸಿದೆ.

ಕ್ರಿಕೆಟ್​ ಇತಿಹಾಸದ ಸರ್ವಶ್ರೇಷ್ಠ ಆಲ್​ರೌಂಡರ್​ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಡುವ ಕ್ಯಾಲಿಸ್ ಅವರನ್ನು ಇಸಿಬಿ ಆಯ್ಕೆ ಮಾಡಿರುವುದಕ್ಕೆ ಕ್ರಿಕೆಟ್ ವಲಯಗಳಲ್ಲಿ ಆಶ್ಚರ್ಯ ವ್ಯಕ್ತವಾಗುತ್ತಿದೆ. ಇಂಗ್ಲೆಂಡ್​ ಮಾಜಿ ಆಟಗಾರರಾಗಿರುವ ಜೊನಾಥನ್ ಟ್ರಾಟ್ ಮತ್ತು ಮಾರ್ಕಸ್ ಟ್ರೆಸ್ಕೋಥಿಕ್ ಕಳೆದ 12-ತಿಂಗಳ ಅವಧಿಯಲ್ಲಿ ಈ ಹುದ್ದೆಯನ್ನು ಅಲಂಕರಿಸಿದ್ದರು.

ವಿಶ್ವದ ಶ್ರೇಷ್ಠ ಬ್ಯಾಟ್ಸ್​ಮನ್​ಗಳಲ್ಲೂ ಒಬ್ಬರಾಗಿದ್ದ 45 ವರ್ಷ ವಯಸ್ಸಿನ ಕ್ಯಾಲಿಸ್ ಟೆಸ್ಟ್​ಗಳಲ್ಲಿ 55.37 ಸರಾಸರಿಯೊಂದಿಗೆ 13,206 ರನ್ ಗಳಿಸಿ ನಿವೃತ್ತರಾದರು. ಉಪಖಂಡದ ಪಿಚ್​ಗಳ ಮೇಲೆ ಅವರು 8 ಶತಕಗಳನ್ನು ಬಾರಿಸಿದ್ದು 55.82 ಸರಾಸರಿ ಹೊಂದಿದ್ದಾರೆ.

ಕ್ಯಾಲಿಸ್ ಬ್ಯಾಟಿಂಗ್ ಶೈಲಿ

ಪ್ರಾಯಶಃ ಇದೇ ಕಾರಣಕ್ಕೆ ಅವರನ್ನು ಇಸಿಬಿ ಅಯ್ಕೆ ಮಾಡಿಕೊಂಡಿರಬಹುದು. ಶ್ರೀಲಂಕಾದಲ್ಲಿ ಎರಡು ಟೆಸ್ಟ್​ಗಳನ್ನಾಡಲಿರುವ ಇಂಗ್ಲೆಂಡ್ ನಂತರ ಭಾರತ ಪ್ರವಾಸ ಕೈಗೊಳ್ಳಲಿದೆ. ಆದರೆ, ಕ್ಯಾಲಿಸ್ ಸೇವೆಯನ್ನು ಭಾರತದ ಪ್ರವಾಸಕ್ಕೂ ವಿಸ್ತರಿಸುವ ಬಗ್ಗೆ ಇಸಿಬಿ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.

ಟೀಮಿನ ಸಹಾಯಕ ಕೋಚ್ ಆಗಿರುವ ಮಾಜಿ ಆಟಗಾರ ಗ್ರಹಾಂ ಥೋರ್ಪ್​ ಅವರಿಗೆ ವಿಶ್ರಾಂತಿ ನೀಡಲಾಗಿದ್ದು ಅವರ ಸ್ಥಾನದಲ್ಲಿ ಮತ್ತೊಬ್ಬ ಮಾಜಿ ಆಟಗಾರ ಪಾಲ್ ಕಾಲಿಂಗ್​ವುಡ್​ಗೆ ಜವಾಬ್ದಾರಿ ವಹಿಸಲಾಗಿದೆ.

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ