AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ

ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು.

ಇಂಗ್ಲೆಂಡ್-ಶ್ರೀಲಂಕಾ ಸರಣಿಯ ಮ್ಯಾಚ್ ರೆಫರಿಗೆ ಕೊರೊನಾ ಸೋಂಕು! ಪಂದ್ಯಕ್ಕೆ ಸಂಬಂಧಿಸಿದ 7 ಜನರಿಗೆ ಹೆಚ್ಚಿದ ಆತಂಕ
ಫಿಲ್ ವೈಟ್‌ಕೆಸ್
ಪೃಥ್ವಿಶಂಕರ
| Edited By: |

Updated on: Jun 28, 2021 | 9:33 AM

Share

ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಟಿ 20 ಸರಣಿಯ ಮ್ಯಾಚ್ ರೆಫರಿ ಫಿಲ್ ವೈಟ್‌ಕೆಸ್ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಈ ಸರಣಿಯ ಎಲ್ಲಾ ಮೂರು ಪಂದ್ಯಗಳಲ್ಲಿ ಅವರು ತೀರ್ಪುಗಾರರ ಪಾತ್ರವನ್ನು ನಿರ್ವಹಿಸಬೇಕಿತ್ತು. 56 ವರ್ಷದ ಫಿಲ್ ವೈಟ್‌ಕೆಸ್​ಗೆ ಕೊರೊನಾದ ಯಾವುದೇ ಲಕ್ಷಣಗಳಿರಲಿಲ್ಲ. ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಈ ವಿಷಯವನ್ನು ಖಚಿತಪಡಿಸಿದೆ. ವೈಟ್‌ಕೇಸ್ ಸುಮಾರು 10 ದಿನಗಳವರೆಗೆ ಪ್ರತ್ಯೇಕವಾಗಿ ಉಳಿಯಲಿದ್ದಾರೆ ಎಂದು ಅವರ ಪರವಾಗಿ ಹೇಳಲಾಗಿದೆ.

10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ ಸುಮಾರು ಏಳು ಪಂದ್ಯದ ಅಧಿಕಾರಿಗಳು ಮತ್ತು ಭ್ರಷ್ಟಾಚಾರ ನಿಗ್ರಹ ಘಟಕದ ಸದಸ್ಯರು ಅವರ ಸಂಪರ್ಕದಲ್ಲಿದ್ದರು ಎಂಬುದು ತಿಳಿದುಬಂದಿದೆ. ಈ ಐವರು ಸದಸ್ಯರು ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕೆಲಸ ಮಾಡಬೇಕಿತ್ತು. ಈ ಎಲ್ಲ ಜನರು ಈಗ 10 ದಿನಗಳ ಕಾಲ ಪ್ರತ್ಯೇಕವಾಗಿರುತ್ತಾರೆ. ಏಕದಿನ ಸರಣಿಗಾಗಿ, ಇಂಗ್ಲೆಂಡ್ ಮಂಡಳಿಯು ಈಗ ಹೊಸ ಪಂದ್ಯದ ತೀರ್ಪುಗಾರರಿಗೆ ಮತ್ತು ಉಳಿದ ಬದಲಿಗಳಿಗೆ ವ್ಯವಸ್ಥೆ ಮಾಡುತ್ತದೆ.

ಮೊದಲ ಏಕದಿನ ಪಂದ್ಯ ಜೂನ್ 29 ರಂದು ಡರ್ಹಾಮ್‌ನಲ್ಲಿ ನಡೆಯಲಿದೆ. ಆದಾಗ್ಯೂ, ಆಟಗಾರರಿಗೆ ಯಾವುದೇ ಆತಂಕವಿಲ್ಲ. ಅವರು ಸಂಪೂರ್ಣವಾಗಿ ಸುರಕ್ಷಿತರಾಗಿದ್ದಾರೆ. ಮೂರು ಪಂದ್ಯಗಳ ಟಿ 20 ಐ ಸರಣಿಯಲ್ಲಿ ಇಂಗ್ಲೆಂಡ್ 3-0 ಅಂತರದಿಂದ ಶ್ರೀಲಂಕಾವನ್ನು ಸೋಲಿಸಿತು. ಈ ಸರಣಿಯ ಕೊನೆಯ ಪಂದ್ಯವನ್ನು ಜೂನ್ 26 ರಂದು ಆಡಲಾಯಿತು. ಈಗ ಉಭಯ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿವೆ. ಇದರ ನಂತರ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಮೂರು ಟಿ 20 ಪಂದ್ಯಗಳನ್ನು ಆಡಬೇಕಾಗುತ್ತದೆ.

ಇದನ್ನೂ ಓದಿ: WTC Final: ಉತ್ತಮ ಜೊತೆಯಾಟದ ಕೊರತೆಯಿಂದಾಗಿ ಭಾರತ ಡಬ್ಲ್ಯೂಟಿಸಿ ಫೈನಲ್​ ಸೋಲಬೇಕಾಯ್ತು; ಸಚಿನ್ ತೆಂಡೂಲ್ಕರ್

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು