EURO 2020 Final: ರೋಚಕ ಪೆನಾಲ್ಟಿ ಶೂಟೌಟ್​ನಲ್ಲಿ ಗೆದ್ದು 53 ವರ್ಷಗಳ ಬಳಿಕ ಯುರೋ ಕಪ್ ಗೆದ್ದ ಇಟಲಿ

ದ್ವಿತೀಯಾರ್ಧದ 67ನೇ ನಿಮಿಷದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲ್ ಬಾರಿಸಿ ಫಲಿತಾಂಶವನ್ನು 1-1ರಿಂದ ಸಮಗೊಳಿಸಿ ಟೈ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

EURO 2020 Final: ರೋಚಕ ಪೆನಾಲ್ಟಿ ಶೂಟೌಟ್​ನಲ್ಲಿ ಗೆದ್ದು 53 ವರ್ಷಗಳ ಬಳಿಕ ಯುರೋ ಕಪ್ ಗೆದ್ದ ಇಟಲಿ
EURO 2020 Final
Follow us
| Updated By: Vinay Bhat

Updated on: Jul 12, 2021 | 11:02 AM

ಇಂಗ್ಲೆಂಡ್​ನ ವೆಂಬ್ಲಿ ಕ್ರೀಡಂಗಣದಲ್ಲಿ ನಡೆದ ಯೂನಿಯನ್ ಆಫ್ ಯುರೋಪಿಯನ್ ಫುಟ್ಬಾಲ್ ಅಸೋಸಿಯೇಶನ್ (UEFA) ಯುರೋ 2020 ಫೈನಲ್ ಪಂದ್ಯದಲ್ಲಿ ಪೆನಾಲ್ಟಿ ಶೂಟೌಟ್ ಮೂಲಕ ಅದ್ಭುತ ಪ್ರದರ್ಶನ ತೋರಿದ ಇಟಲಿ ತಂಡ 3-2 ಅಂತರದಿಂದ ಇಂಗ್ಲೆಂಡ್ ಅನ್ನು ಸೋಲಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ವಿಶೇಷ ಎಂದರೆ 1968ರ ಬಳಿಕ ಇಟಲಿ ಇದೇ ಮೊದಲ ಬಾರಿಗೆ ಯುರೋಪಿಯನ್ ಚಾಂಪಿಯನ್​ಷಿಪ್ ಕಿರೀಟ ಮುಡಿಗೇರಿಸಿಕೊಂಡಿದೆ.

ಸಾಕಷ್ಟು ರೋಚಕತೆ ಸೃಷ್ಟಿಸಿದ್ದ ಪ್ರಶಸ್ತಿ ಸುತ್ತಿನ ಪಂದ್ಯದ ನಿಗದಿತ ಸಮಯದಲ್ಲಿ ಉಭಯ ತಂಡಗಳು 1-1 ಸಮಬಲ ಸಾಧಿಸಿದ್ದವು. ಹೀಗಾಗಿ ಹೆಚ್ಚುವರಿ ಸಮಯ ನೀಡಲಾಯಿತು. ಆದರೆ ಇಲ್ಲಿಯೂ ಫಲಿತಾಂಶ ಹೊರ ಬಾರದ ಕಾರಣ ಪೆನಾಲ್ಟಿ ಶೂಟೌಟ್‌ ಮಾಡಬೇಕಾಯಿತು. ಈ ವೇಳೆ ಗೋಲ್‌ ಕೀಪರ್‌ ಜಿಯಾನ್ಲುಯಿಗಿ ಡೊನರುಮಾ, ಇಂಗ್ಲೆಂಡ್‌ ತಂಡದ ಎರಡು ಪೆನಾಲ್ಟಿ ಗೋಲ್‌ಗಳನ್ನು ಸೇವ್‌ ಮಾಡುವ ಮೂಲಕ ಇಟಲಿಗೆ ಐತಿಹಾಸಿಕ ಜಯ ತಂದಿತ್ತರು.

ಪಂದ್ಯ ಶುರುವಾದ 2ನೇ ನಿಮಿಷದಲ್ಲೇ ಇಂಗ್ಲೆಂಡ್‌ನ ಲೂಕ್ ಶಾ ಮೊದಲನೇ ಗೋಲ್‌ ಬಾರಿಸಿದರು. ಅದಾಗಿ ಪ್ರಥಮಾರ್ಧದಲ್ಲಿ ಉಭಯ ತಂಡಗಳಿಗೆ ಯಾವುದೇ ಗೋಲ್ ದಾಖಲಾಗಲಿಲ್ಲ. ಆದರೆ ದ್ವಿತೀಯಾರ್ಧದ 67ನೇ ನಿಮಿಷದಲ್ಲಿ ಇಟಲಿಯ ಲಿಯೊನಾರ್ಡೊ ಬೊನುಸಿ ಗೋಲ್ ಬಾರಿಸಿ ಫಲಿತಾಂಶವನ್ನು 1-1ರಿಂದ ಸಮಗೊಳಿಸಿ ಟೈ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದರು.

ಈ ಸಂದರ್ಭ ವಿಜೇತರನ್ನು ಘೋಷಿಸುವುದಕ್ಕಾಗಿ ಪೆನಾಲ್ಟಿ ಶೂಟೌಟ್ ನಡೆಸಲಾಯಿತು. ಇದರಲ್ಲಿ ಇಟಲಿ 3 ಗೋಲ್ ದಾಖಲಿಸಿದರೆ, ಇಂಗ್ಲೆಂಡ್ 2 ಗೋಲ್ ಬಾರಿಸಿತು. ಇಂಗ್ಲೆಂಡ್‌ ತಂಡದ ಪರ ಪೆನಾಲ್ಟಿ ಶೂಟೌಟ್‌ನಲ್ಲಿ ಹ್ಯಾರಿ ಕೇನ್‌, ಮಗ್ಯೂರಿ ಮಾತ್ರ ಗೋಲು ದಾಖಲಿಸುವಲ್ಲಿ ಯಶಸ್ವಿಯಾದರು. ಆದರೆ, ರ್ಯಾಷ್‌ಪರ್ಡ್‌, ಜೆ ಸ್ಯಾಂಚೊ ಹಾಗೂ ಬಿ ಸಾಕಾ ಗೋಲು ಗಳಿಸುವಲ್ಲಿ ವಿಫಲರಾದರು.

ಇಟಲಿ ಪರ, ಬೆಲೊಟ್ಟಿ ಹಾಗೂ ಜೊರ್ಗಿನ್ಹೋ ಗೋಲು ಗಳಿಸುವಲ್ಲಿ ವಿಫಲರಾದರೂ ಬೆನಾರ್ಡಿ, ಬೆನುಸ್ಸಿ ಹಾಗೂ ಬೆನಾರ್ಡಿಸ್ಕೀ ಅವರು ಗಳಿಸಿದ ಮೂರು ಗೋಲುಗಳಿಂದ ಇಟಲಿ ಗೆದ್ದು ಸಂಭ್ರಮಿಸಿತು. ಈ ಮೂಲಕ ಬರೋಬ್ಬರಿ 53 ವರ್ಷಗಳ ಬಳಿಕ ಇಟಲಿ ಯೂರೋ ಕಪ್‌ ತನ್ನದಾಗಿಸಿತು.

(VIDEO) IND vs SL: ಅಭ್ಯಾಸ ಪಂದ್ಯದಲ್ಲಿ ಸ್ಫೋಟಕ ಆಟ: ಟೀಮ್ ಇಂಡಿಯಾಕ್ಕೆ ಹೊಸ ಓಪನರ್ ಫಿಕ್ಸ್

129 ರನ್​ಗಳ ಟಾರ್ಗೆಟ್; ಬೆನ್ನಟ್ಟಿದ ಎದುರಾಳಿ ತಂಡ 125 ರನ್​ಗಳಿಗೆ ಆಲ್​ಔಟ್ ಆದರೂ ಕೂಡ ಜಯ ಗಳಿಸಿತು! ಹೇಗೆ ಗೊತ್ತಾ?

ತಾಜಾ ಸುದ್ದಿ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಅವೈಜ್ಞಾನಿಕ ಕಾಮಗಾರಿಯಿಂದ ಅಡಕೆ ತೋಟಗಳಿಗೆ ನೀರು ನುಗ್ಗಿ ಬೆಳೆಗಾರರಿಗೆ ನಷ್ಟ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬಿಜೆಪಿ ಕೋಮುವಾದಿ ಅಲ್ಲವೆಂದು ದೇವೇಗೌಡರಿಗೆ ತಡವಾಗಿ ಗೊತ್ತಾಯಿತು: ಆರ್ ಅಶೋಕ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಹೊಸ ಅತಿಥಿ; ಮರಿ ಆನೆ ತುಂಟಾಟ ನೋಡಿ
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಡ್ರೋನ್​ ಕಣ್ಣಲ್ಲಿ ವಿಶ್ವದ ಅತಿ ದೊಡ್ಡ ಪುರಿ ಜಗನ್ನಾಥ ರಥಯಾತ್ರೆ: ವಿಡಿಯೋ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ