AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ ಎಂದು ರೋಹಿತ್​ ಶರ್ಮಾ ಮಾತು ಆರಂಭಿಸಿದ್ದಾರೆ.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು
ರೋಹಿತ್​ ಶರ್ಮಾ
ರಾಜೇಶ್ ದುಗ್ಗುಮನೆ
| Edited By: |

Updated on:Feb 22, 2021 | 1:42 PM

Share

ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಗೆದ್ದಿತ್ತು. ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದ ಇಂಗ್ಲೆಂಡ್​​ ಆಟಗಾರರು ಪಿಚ್​ ಅನ್ನು ದೂರಿದ್ದರು. ಚೆನ್ನೈ ಸ್ಟೇಡಿಯಂ ಐದು ದಿನದ ಟೆಸ್ಟ್​​ ಆಡಲು ಸರಿಯಾದ ಪಿಚ್​ ಅಲ್ಲ ಎಂದು ಹೇಳಿದ್ದರು. ಅಲ್ಲದೆ, ಈ ಪಿಚ್​ ಟೀಂ ಇಂಡಿಯಾಗೆ ಸಹಕಾರಿಯಾಗುವ ರೀತಿಯಲ್ಲಿದೆ ಎಂದೂ ಹೇಳಿದ್ದರು. ಇದಕ್ಕೆ ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಿರುಗೇಟು ನೀಡಿದ್ದು, ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ. ಭಾರತದಲ್ಲಿ ಪಿಚ್‌ಗಳನ್ನು ಹಲವು ವರ್ಷಗಳಿಂದ ಒಂದೇ ರೀತಿಯಲ್ಲಿ ತಯಾರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಬದಲಾವಣೆಗಳಾಗಿವೆ ಎಂದು ನಾನು ಭಾವಿಸುವುದಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದ ವಿಡಿಯೋದಲ್ಲಿ ರೋಹಿತ್ ಹೇಳಿದ್ದಾರೆ.

ಪ್ರತಿ ತಂಡವೂ ಹೋಂ ಪಿಚ್​ ಅನುಕೂಲವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತದೆ. ನಾವು ವಿದೇಶಕ್ಕೆ ಆಡಲು ಹೋದಾಗ ಅಲ್ಲಿಯೂ ನಮಗೆ ಇದೇ ರೀತಿ ಆಗುತ್ತದೆ. ಅವರಿಗೆ ಹೋಂ ಪಿಚ್​ ಅನುಕೂಲ ಸಿಗುತ್ತದೆ. ಅವರು ನಮ್ಮ ಬಗ್ಗೆ ಯೋಚಿಸುವುದಿಲ್ಲ. ಹೀಗಿರುವಾಗ ನಾವೇಕೆ ಅವರ ಬಗ್ಗೆ ಯೋಚಿಸಬೇಕು. ನಾವು ಏನು ಇಷ್ಟಪಡುತ್ತೇವೆ ಮತ್ತು ನಮ್ಮ ತಂಡದ ಆದ್ಯತೆ ಏನು ಎಂಬುದನ್ನು ತಿಳಿದುಕೊಂಡು ಅದನ್ನೇ ಮಾಡಬೇಕು. ಪಿಚ್ ಸಿದ್ಧಪಡಿಸುವ​ ಬಗ್ಗೆ ಐಸಿಸಿ ನಿಯಮವನ್ನು ಮಾಡಲು ಹೇಳಿ ಎಂದು ಹೇಳುವ ಮೂಲಕ ಇಂಗ್ಲೆಂಡ್​ಗೆ ಬಿಸಿ ಮುಟ್ಟಿಸಿದ್ದಾರೆ.

ಪಿಚ್​ ಬಗ್ಗೆ ದೂರುವುದನ್ನು ಬಿಟ್ಟು, ಯಾವ ಆಟಗಾರ ಹೇಗೆ ಬೌಲಿಂಗ್​ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿ. ಕೊನೆಯಲ್ಲಿ ಯಾವ ತಂಡ ಉತ್ತಮವಾಗಿ ಆಡುತ್ತೆದೆಯೋ ಅವರೇ ಗೆಲ್ಲುತ್ತಾರೆ ಎಂದು ರೋಹಿತ್​ ಹೇಳಿದ್ದಾರೆ.

ಇದನ್ನೂ ಓದಿ: India vs England: ಕುಣಿಲಾಗದವರು ನೆಲ ಡೊಂಕು ಎಂದರು.. ಚೆನ್ನೈ ಪಿಚ್ ಟೀಕಿಸಿದವರ ವಿರುದ್ಧ ಗಾವಸ್ಕರ್​ ಗರಂ

Published On - 10:10 pm, Sun, 21 February 21

ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್
ಬೆಂಗಳೂರು ಹೊಸೂರು ಹೆದ್ದಾರಿಯಲ್ಲಿ ಕಿಮೀಗಟ್ಟಲೆ ಟ್ರಾಫಿಕ್ ಜಾಮ್