AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ ಎಂದು ರೋಹಿತ್​ ಶರ್ಮಾ ಮಾತು ಆರಂಭಿಸಿದ್ದಾರೆ.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು
ರೋಹಿತ್​ ಶರ್ಮಾ
ರಾಜೇಶ್ ದುಗ್ಗುಮನೆ
| Updated By: Digi Tech Desk|

Updated on:Feb 22, 2021 | 1:42 PM

Share

ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಗೆದ್ದಿತ್ತು. ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದ ಇಂಗ್ಲೆಂಡ್​​ ಆಟಗಾರರು ಪಿಚ್​ ಅನ್ನು ದೂರಿದ್ದರು. ಚೆನ್ನೈ ಸ್ಟೇಡಿಯಂ ಐದು ದಿನದ ಟೆಸ್ಟ್​​ ಆಡಲು ಸರಿಯಾದ ಪಿಚ್​ ಅಲ್ಲ ಎಂದು ಹೇಳಿದ್ದರು. ಅಲ್ಲದೆ, ಈ ಪಿಚ್​ ಟೀಂ ಇಂಡಿಯಾಗೆ ಸಹಕಾರಿಯಾಗುವ ರೀತಿಯಲ್ಲಿದೆ ಎಂದೂ ಹೇಳಿದ್ದರು. ಇದಕ್ಕೆ ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಿರುಗೇಟು ನೀಡಿದ್ದು, ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ. ಭಾರತದಲ್ಲಿ ಪಿಚ್‌ಗಳನ್ನು ಹಲವು ವರ್ಷಗಳಿಂದ ಒಂದೇ ರೀತಿಯಲ್ಲಿ ತಯಾರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಬದಲಾವಣೆಗಳಾಗಿವೆ ಎಂದು ನಾನು ಭಾವಿಸುವುದಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದ ವಿಡಿಯೋದಲ್ಲಿ ರೋಹಿತ್ ಹೇಳಿದ್ದಾರೆ.

ಪ್ರತಿ ತಂಡವೂ ಹೋಂ ಪಿಚ್​ ಅನುಕೂಲವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತದೆ. ನಾವು ವಿದೇಶಕ್ಕೆ ಆಡಲು ಹೋದಾಗ ಅಲ್ಲಿಯೂ ನಮಗೆ ಇದೇ ರೀತಿ ಆಗುತ್ತದೆ. ಅವರಿಗೆ ಹೋಂ ಪಿಚ್​ ಅನುಕೂಲ ಸಿಗುತ್ತದೆ. ಅವರು ನಮ್ಮ ಬಗ್ಗೆ ಯೋಚಿಸುವುದಿಲ್ಲ. ಹೀಗಿರುವಾಗ ನಾವೇಕೆ ಅವರ ಬಗ್ಗೆ ಯೋಚಿಸಬೇಕು. ನಾವು ಏನು ಇಷ್ಟಪಡುತ್ತೇವೆ ಮತ್ತು ನಮ್ಮ ತಂಡದ ಆದ್ಯತೆ ಏನು ಎಂಬುದನ್ನು ತಿಳಿದುಕೊಂಡು ಅದನ್ನೇ ಮಾಡಬೇಕು. ಪಿಚ್ ಸಿದ್ಧಪಡಿಸುವ​ ಬಗ್ಗೆ ಐಸಿಸಿ ನಿಯಮವನ್ನು ಮಾಡಲು ಹೇಳಿ ಎಂದು ಹೇಳುವ ಮೂಲಕ ಇಂಗ್ಲೆಂಡ್​ಗೆ ಬಿಸಿ ಮುಟ್ಟಿಸಿದ್ದಾರೆ.

ಪಿಚ್​ ಬಗ್ಗೆ ದೂರುವುದನ್ನು ಬಿಟ್ಟು, ಯಾವ ಆಟಗಾರ ಹೇಗೆ ಬೌಲಿಂಗ್​ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿ. ಕೊನೆಯಲ್ಲಿ ಯಾವ ತಂಡ ಉತ್ತಮವಾಗಿ ಆಡುತ್ತೆದೆಯೋ ಅವರೇ ಗೆಲ್ಲುತ್ತಾರೆ ಎಂದು ರೋಹಿತ್​ ಹೇಳಿದ್ದಾರೆ.

ಇದನ್ನೂ ಓದಿ: India vs England: ಕುಣಿಲಾಗದವರು ನೆಲ ಡೊಂಕು ಎಂದರು.. ಚೆನ್ನೈ ಪಿಚ್ ಟೀಕಿಸಿದವರ ವಿರುದ್ಧ ಗಾವಸ್ಕರ್​ ಗರಂ

Published On - 10:10 pm, Sun, 21 February 21

ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್​​ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸಂಸತ್ ಮೇಲಿನ ದಾಳಿ, ಅಫ್ಜಲ್​ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ