AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ ಎಂದು ರೋಹಿತ್​ ಶರ್ಮಾ ಮಾತು ಆರಂಭಿಸಿದ್ದಾರೆ.

ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಬೇಕು? ಇಂಗ್ಲೆಂಡ್​ಗೆ ರೋಹಿತ್​ ಶರ್ಮಾ ತಿರುಗೇಟು
ರೋಹಿತ್​ ಶರ್ಮಾ
ರಾಜೇಶ್ ದುಗ್ಗುಮನೆ
| Edited By: |

Updated on:Feb 22, 2021 | 1:42 PM

Share

ಇಂಗ್ಲೆಂಡ್​ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿ ಗೆದ್ದಿತ್ತು. ಸೋಲನ್ನು ಒಪ್ಪಿಕೊಳ್ಳಲು ಸಿದ್ಧವಿಲ್ಲದ ಇಂಗ್ಲೆಂಡ್​​ ಆಟಗಾರರು ಪಿಚ್​ ಅನ್ನು ದೂರಿದ್ದರು. ಚೆನ್ನೈ ಸ್ಟೇಡಿಯಂ ಐದು ದಿನದ ಟೆಸ್ಟ್​​ ಆಡಲು ಸರಿಯಾದ ಪಿಚ್​ ಅಲ್ಲ ಎಂದು ಹೇಳಿದ್ದರು. ಅಲ್ಲದೆ, ಈ ಪಿಚ್​ ಟೀಂ ಇಂಡಿಯಾಗೆ ಸಹಕಾರಿಯಾಗುವ ರೀತಿಯಲ್ಲಿದೆ ಎಂದೂ ಹೇಳಿದ್ದರು. ಇದಕ್ಕೆ ಟೀಂ ಇಂಡಿಯಾ ಓಪನರ್​ ರೋಹಿತ್​ ಶರ್ಮಾ ತಿರುಗೇಟು ನೀಡಿದ್ದು, ಅವರು ನಮ್ಮ ಬಗ್ಗೆ ಯೋಚಿಸಲ್ಲ, ನಾವೇಕೆ ಅವರ ಬಗ್ಗೆ ಯೋಚಿಸಲಿ ಎಂದು ಪ್ರಶ್ನೆ ಮಾಡಿದ್ದಾರೆ.

ಮೈದಾನ ಎರಡೂ ತಂಡಗಳಿಗೆ ಒಂದೇ ಆಗಿರುತ್ತದೆ. ಈ ಚರ್ಚೆ ಏಕೆ ಆರಂಭವಾಯಿತು ಎಂದು ನನಗೆ ತಿಳಿಯುತ್ತಿಲ್ಲ. ಭಾರತದಲ್ಲಿ ಪಿಚ್‌ಗಳನ್ನು ಹಲವು ವರ್ಷಗಳಿಂದ ಒಂದೇ ರೀತಿಯಲ್ಲಿ ತಯಾರಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಯಾವುದೇ ಬದಲಾವಣೆಗಳಾಗಿವೆ ಎಂದು ನಾನು ಭಾವಿಸುವುದಿಲ್ಲ ಎಂದು ಬಿಸಿಸಿಐ ಟ್ವೀಟ್ ಮಾಡಿದ ವಿಡಿಯೋದಲ್ಲಿ ರೋಹಿತ್ ಹೇಳಿದ್ದಾರೆ.

ಪ್ರತಿ ತಂಡವೂ ಹೋಂ ಪಿಚ್​ ಅನುಕೂಲವನ್ನು ಸಂಪೂರ್ಣವಾಗಿ ಬಳಸಿಕೊಳ್ಳುತ್ತದೆ. ನಾವು ವಿದೇಶಕ್ಕೆ ಆಡಲು ಹೋದಾಗ ಅಲ್ಲಿಯೂ ನಮಗೆ ಇದೇ ರೀತಿ ಆಗುತ್ತದೆ. ಅವರಿಗೆ ಹೋಂ ಪಿಚ್​ ಅನುಕೂಲ ಸಿಗುತ್ತದೆ. ಅವರು ನಮ್ಮ ಬಗ್ಗೆ ಯೋಚಿಸುವುದಿಲ್ಲ. ಹೀಗಿರುವಾಗ ನಾವೇಕೆ ಅವರ ಬಗ್ಗೆ ಯೋಚಿಸಬೇಕು. ನಾವು ಏನು ಇಷ್ಟಪಡುತ್ತೇವೆ ಮತ್ತು ನಮ್ಮ ತಂಡದ ಆದ್ಯತೆ ಏನು ಎಂಬುದನ್ನು ತಿಳಿದುಕೊಂಡು ಅದನ್ನೇ ಮಾಡಬೇಕು. ಪಿಚ್ ಸಿದ್ಧಪಡಿಸುವ​ ಬಗ್ಗೆ ಐಸಿಸಿ ನಿಯಮವನ್ನು ಮಾಡಲು ಹೇಳಿ ಎಂದು ಹೇಳುವ ಮೂಲಕ ಇಂಗ್ಲೆಂಡ್​ಗೆ ಬಿಸಿ ಮುಟ್ಟಿಸಿದ್ದಾರೆ.

ಪಿಚ್​ ಬಗ್ಗೆ ದೂರುವುದನ್ನು ಬಿಟ್ಟು, ಯಾವ ಆಟಗಾರ ಹೇಗೆ ಬೌಲಿಂಗ್​ ಮಾಡುತ್ತಿದ್ದಾರೆ ಎಂಬುದನ್ನು ಗಮನಿಸಿ. ಕೊನೆಯಲ್ಲಿ ಯಾವ ತಂಡ ಉತ್ತಮವಾಗಿ ಆಡುತ್ತೆದೆಯೋ ಅವರೇ ಗೆಲ್ಲುತ್ತಾರೆ ಎಂದು ರೋಹಿತ್​ ಹೇಳಿದ್ದಾರೆ.

ಇದನ್ನೂ ಓದಿ: India vs England: ಕುಣಿಲಾಗದವರು ನೆಲ ಡೊಂಕು ಎಂದರು.. ಚೆನ್ನೈ ಪಿಚ್ ಟೀಕಿಸಿದವರ ವಿರುದ್ಧ ಗಾವಸ್ಕರ್​ ಗರಂ

Published On - 10:10 pm, Sun, 21 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್