AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ರುದ್ರಪ್ರಯಾಗದಲ್ಲಿ ಕ್ರಿಕೆಟ್ ಕ್ರೀಡಾಂಗಣ ಎಂದು AI ರಚಿತ ಸುಳ್ಳು ಫೋಟೋ ವೈರಲ್

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ಫೋಟೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ನಾವು ತನಿಖೆ ನಡೆಸಿದಾಗ ರುದ್ರಪ್ರಯಾಗದಲ್ಲಿ ಅಂತಹ ಯಾವುದೇ ಕ್ರೀಡಾಂಗಣವಿಲ್ಲ ಎಂದು ತಿಳಿದುಬಂದಿದೆ. ಸದ್ಯ ಅಲ್ಲಿ ಅಗಸ್ಟ್‌ಮುನಿ ಸ್ಟೇಡಿಯಂ ನಿರ್ಮಾಣ ಕಾರ್ಯ ನಡೆಯುತ್ತಿದೆಯಷ್ಟೆ.

Fact Check: ರುದ್ರಪ್ರಯಾಗದಲ್ಲಿ ಕ್ರಿಕೆಟ್ ಕ್ರೀಡಾಂಗಣ ಎಂದು AI ರಚಿತ ಸುಳ್ಳು ಫೋಟೋ ವೈರಲ್
ವೈರಲ್​​ ಫೋಟೋ
ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 11:46 AM

Share

ಸಾಮಾಜಿಕ ಮಾಧ್ಯಮದಲ್ಲಿ ಫೋಟೋ ಒಂದು ವೈರಲ್ ಆಗುತ್ತಿದ್ದು, ಇದರಲ್ಲಿ ದೊಡ್ಡ ಕ್ರೀಡಾಂಗಣವನ್ನು ಕಾಣಬಹುದು. ಕೆಲವರು ಈ ಪೋಸ್ಟ್ ಅನ್ನು ಶೇರ್ ಮಾಡುತ್ತಿದ್ದು, ಇದು ಉತ್ತರಾಖಂಡ್​ನ ರುದ್ರಪ್ರಯಾಗದಲ್ಲಿ ನಿರ್ಮಿಸಲಾದ ಕ್ರಿಕೆಟ್ ಕ್ರೀಡಾಂಗಣದ ಫೋಟೋ ಎಂದು ಹೇಳುತ್ತಿದ್ದಾರೆ. ನೋಡಲು ಸುಂದರವಾಗಿ ಕಾಣುವ ಈ ಕ್ರೀಡಾಂಗಣದ ಫೋಟೋವನ್ನು ಅನೇಕ ಬಳಕೆದಾರರು ನಿಜವೆಂದು ಪರಿಗಣಿಸಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾದರೆ, ನಿಜಕ್ಕೂ ರುದ್ರಪ್ರಯಾಗದಲ್ಲಿ ಈ ಕ್ರೀಡಾಂಗಣ ನಿರ್ಮಾನ ಆಗಿದೆಯೇ?. ಈ ವೈರಲ್ ಫೋಟೋದ ಸತ್ಯಾಂಶ ಏನು ತಿಳಿದುಕೊಳ್ಳೋಣ.

ವೈರಲ್ ಪೋಸ್ಟ್‌ನಲ್ಲಿ ಏನಿದೆ?:

ವೈರಲ್ ಫೋಟೋವನ್ನು ಹಂಚಿಕೊಳ್ಳುವಾಗ, ಫೇಸ್‌ಬುಕ್ ಬಳಕೆದಾರರೊಬ್ಬರು ‘‘ರುದ್ರಪ್ರಯಾಗ್ ಸ್ಟೇಡಿಯಂ ಸಿದ್ಧವಾಗಿದೆ. ಈಗ ಏಕ್ತಾ ಬಿಶ್ತ್, ರಿಷಭ್ ಪಂತ್, ಆಯುಷ್ ಬದೋನಿ ಮತ್ತು ಅನುಜ್ ರಾವತ್ ಅವರಂತಹ ಕ್ರಿಕೆಟಿಗರು ರುದ್ರಪ್ರಯಾಗ್ ಕ್ರಿಕೆಟ್ ಪ್ರೇಮಿಗಳಾಗಿ ಹೊರಹೊಮ್ಮುತ್ತಾರೆ’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ಫೋಟೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ನಾವು ತನಿಖೆ ನಡೆಸಿದಾಗ ರುದ್ರಪ್ರಯಾಗದಲ್ಲಿ ಅಂತಹ ಯಾವುದೇ ಕ್ರೀಡಾಂಗಣವಿಲ್ಲ ಎಂದು ತಿಳಿದುಬಂದಿದೆ. ಸದ್ಯ ಅಲ್ಲಿ ಅಗಸ್ಟ್‌ಮುನಿ ಸ್ಟೇಡಿಯಂ ನಿರ್ಮಾಣ ಕಾರ್ಯ ನಡೆಯುತ್ತಿದೆಯಷ್ಟೆ.

ವೈರಲ್ ಫೋಟೋ ನಿಜಾಂಶ ಕಂಡುಹಿಡಿಯಲು ನಾವು ಗೂಗಲ್ ಲೆನ್ಸ್ ಅನ್ನು ಬಳಸಿದ್ದೇವೆ. ಆಗ ದೇವಭೂಮಿ ಉತ್ತರಾಖಂಡ್ ಎಂಬ ಹೆಸರಿನ ಫೇಸ್‌ಬುಕ್ ಪುಟದಲ್ಲಿ ನಾವು ಈ ಫೋಟೋವನ್ನು ಕಂಡುಕೊಂಡಿದ್ದೇವೆ. ಡಿಸೆಂಬರ್ 17, 2024 ರಂದು ಹಂಚಿಕೊಂಡ ಪೋಸ್ಟ್‌ನ ಶೀರ್ಷಿಕೆ ಹೀಗಿದೆ, ‘‘ಈ ಫೋಟೋ ಉತ್ತರಾಖಂಡದಲ್ಲಿ ವೈರಲ್ ಆಗಿದೆ! ಈ ಕ್ರಿಕೆಟ್ ಸ್ಟೇಡಿಯಂ ರುದ್ರಪ್ರಯಾಗದಲ್ಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳು, ಇಂತಹ ಕ್ರೀಡಾಂಗಣ ಉತ್ತರಾಖಂಡದಲ್ಲಿ ಎಲ್ಲಿಯೂ ಇಲ್ಲ. ಈ ಸುಳ್ಳು ಚಿತ್ರವನ್ನು AI ಸಹಾಯದಿಂದ ರಚಿಸಲಾಗಿದೆ ಮತ್ತು ಇದು ಉತ್ತರಾಖಂಡದ ರುದ್ರಪ್ರಯಾಗ್ ಕ್ರಿಕೆಟ್ ಸ್ಟೇಡಿಯಂ ಎಂದು ವೈರಲ್ ಆಗಿದೆ.’’ ಎಂದು ಬರೆಯಲಾಗಿದೆ.

ಹಾಗೆಯೆ ಹಿಮಾಲಯನ್ ಹಿಂದೂ ಹೆಸರಿನ ಅಧಿಕೃತ ಎಕ್ಸ್​ ಹ್ಯಾಂಡಲ್‌ನಲ್ಲಿ ಕೂಡ ಇದೇ ವೈರಲ್ ಫೋಟೋವನ್ನು ನಾವು ಕಂಡುಕೊಂಡಿದ್ದೇವೆ. ಡಿಸೆಂಬರ್ 15, 2024 ರಂದು ಮಾಡಿದ ಪೋಸ್ಟ್‌ನಲ್ಲಿ, ‘‘ಈ ಫೋಟೋ ಉತ್ತರಾಖಂಡದಲ್ಲಿ ವೈರಲ್ ಆಗಿದೆ! ಈ ಕ್ರಿಕೆಟ್ ಸ್ಟೇಡಿಯಂ ರುದ್ರಪ್ರಯಾಗದಲ್ಲಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಸುಳ್ಳು, ಇಂತಹ ಕ್ರೀಡಾಂಗಣ ಉತ್ತರಾಖಂಡದಲ್ಲಿ ಎಲ್ಲಿಯೂ ಇಲ್ಲ. ಈ ಸುಳ್ಳು ಚಿತ್ರವನ್ನು AI ಸಹಾಯದಿಂದ ರಚಿಸಲಾಗಿದೆ ಮತ್ತು ಇದು ಉತ್ತರಾಖಂಡದಿಂದ ವೈರಲ್ ಆಗಿದೆ” ಎಂದು ಬರೆಯಲಾಗಿದೆ.

ಇನ್ನಷ್ಟು ಖಚಿತ ಮಾಹಿತಿಗಾಗಿ ನಾವು AI ಫೋಟೋವನ್ನು ಕಂಡುಹಿಡಿಯುವ ಮಲ್ಟಿಮೀಡಿಯಾ ಸ್ಕ್ಯಾನಿಂಗ್ ಉಪಕರಣಗಳ ಸಹಾಯದಿಂದ ಫೋಟೋಗಳನ್ನು ಹುಡುಕಿದೆವು. ಇದಕ್ಕಾಗಿ decopy.ai ಉಪಕರಣಕ್ಕೆ ಅಪ್‌ಲೋಡ್ ಮಾಡಿದ್ದೇವೆ. ಈ ಉಪಕರಣವು ಫೋಟೋವು AI ರಚಿತವಾಗಿರುವ ಸಾಧ್ಯತೆ ಶೇಕಡಾ 99.9 ರಷ್ಟಿದೆ ಎಂದು ಹೇಳಿದೆ.

ಹೀಗಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ನಿರ್ಮಿಸಲಾದ ಕ್ರೀಡಾಂಗಣದಿಂದ ಎಂದು ಹೇಳುವ ಪೋಸ್ಟ್ ನಕಲಿ ಎಂದು ನಾವು ಖಚಿತವಾಗಿ ಹೇಲುತ್ತೇವೆ. ರುದ್ರಪ್ರಯಾಗದಲ್ಲಿ ಸದ್ಯಕ್ಕೆ ಯಾವುದೇ ಕ್ರೀಡಾಂಗಣವಿಲ್ಲ ಎಂದು ತನಿಖೆಯಿಂದ ತಿಳಿದುಬಂದಿದೆ. ಅಗಸ್ಟ್ಮುನಿ ಕ್ರಿಕೆಟ್ ಸ್ಟೇಡಿಯಂನ ಕಾಮಗಾರಿ ನಡೆಯುತ್ತಿದೆಯಷ್ಟೆ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ