AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!

ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!
ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Mar 09, 2021 | 7:53 PM

Share

ಅಭಿಮಾನಕ್ಕೋಸ್ಕರ ಫ್ಯಾನ್ಸ್​ಗಳು ಏನು ಬೇಕಾದರೂ ಮಾಡುತ್ತಾರೆ. ಸಾವಿರಾರು ಕಿ.ಮೀ ಚಲಿಸಿ ತಮ್ಮಿಷ್ಟದ ನಟ-ನಟಿ ಅಥವಾ ಕ್ರೀಡಾಪಟುಗಳನ್ನು ಭೇಟಿ ಮಾಡುತ್ತಾರೆ. ಕನ್ನಡದ ಸ್ಟಾರ್​ ನಟ ಯಶ್​ ಅವರನ್ನು ಭೇಟಿ ಮಾಡಲು ಫಿಲಿಫೈನ್​ ದೇಶದಿಂದ ಬೆಂಗಳೂರಿಗೆ ಅಭಿಮಾನಿಯೋರ್ವ ಬಂದಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅದೇ ರೀತಿ, ಈಗ ವಿರಾಟ್​ ಕೊಹ್ಲಿ ಅವರನ್ನು ಭೇಟಿ ಮಾಡಲೆಂದು ಅಭಿಮಾನಿಯೋರ್ವ 1800 ಕಿ.ಮೀ ಪ್ರಯಾಣ ಬೆಳೆಸಿದ್ದಾನೆ.

ಇಂಗ್ಲೆಡ್​ ವಿರುದ್ಧ ನಾಲ್ಕು ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ 3 ಮ್ಯಾಚ್​​ಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿತ್ತು. ಆದರೆ, ನಾಯಕ ವಿರಾಟ್​ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಅವರ ಬ್ಯಾಟ್​ನಿಂದ ಶತಕ ಸಿಡಿಯದೇ 500 ದಿನಗಳ ಮೇಲಾಗಿದೆ. ಹೀಗಾಗಿ, ಟೆಸ್ಟ್​ ಪಂದ್ಯದಲ್ಲಿ ಅವರು ಶತಕ ಬಾರಿಸೋದು ಖಚಿತ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಎರಡು ಬಾರಿ ಡಕ್​ಗೆ ಔಟ್​ ಆಗಿದ್ದರು. ಇದು ಭಾರೀ ನಿರಾಸೆ ಮೂಡಿಸಿತ್ತು.

ಈಗ ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ. ಟಿ-20ಯಲ್ಲಿಯಾದರೂ ವಿರಾಟ್​ ಕೊಹ್ಲಿ ಅಬ್ಬರದ ಆಟ ಪ್ರದರ್ಶನ ಮಾಡಲಿದ್ದಾರೆಯೇ ಎನ್ನುವ ಕುತೂಹಲ ಅಭಿಮಾನಿಗಳದ್ದು.

ಇದೇ ನಂಬಿಕೆ ಇಟ್ಟುಕೊಂಡು ವಿರಾಟ್​ ಕೊಹ್ಲಿ ಅಭಿಮಾನಿಯೋರ್ವ ಚೆನ್ನೈನಿಂದ ಗುಜರಾತ್​ಗೆ ತೆರಳಿದ್ದಾನೆ. ಮಾರ್ಚ್​ 14ರಂದು ನಡೆಯಲಿರುವ ಎರಡನೇ ಟಿ-20 ಪಂದ್ಯಕ್ಕೆ ತಮಿಳುನಾಡಿನ ಅಭಿಮಾನಿಯೋರ್ವ ಟಿಕೆಟ್​ ಖರೀದಿ ಮಾಡಿದ್ದಾನೆ. ಅಷ್ಟೇ ಅಲ್ಲ, ಈ ಬಗ್ಗೆ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾನೆ.

ವಿರಾಟ್​ ಕೊಹ್ಲಿಯನ್ನು ನೋಡಲು 1839 ಕಿ.ಮೀ ಚಲಿಸುತ್ತಿದ್ದೇನೆ. ನಿರಾಸೆ ಮಾಡಬೇಡಿ ಎಂದು ಧನುಷ್​ ಎಂಬ ಅಭಿಮಾನಿ ಬರೆದುಕೊಂಡಿದ್ದಾನೆ. ಇದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರಾಟ್​ ಕೊಹ್ಲಿ ಡಕ್​ ಬೀಳುವುದನ್ನು ನೋಡಲು ಅಲ್ಲಿವರೆಗೆ ಏಕೆ ತೆರಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್

Published On - 7:48 pm, Tue, 9 March 21

Follow Us
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!