AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!

ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!
ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Mar 09, 2021 | 7:53 PM

Share

ಅಭಿಮಾನಕ್ಕೋಸ್ಕರ ಫ್ಯಾನ್ಸ್​ಗಳು ಏನು ಬೇಕಾದರೂ ಮಾಡುತ್ತಾರೆ. ಸಾವಿರಾರು ಕಿ.ಮೀ ಚಲಿಸಿ ತಮ್ಮಿಷ್ಟದ ನಟ-ನಟಿ ಅಥವಾ ಕ್ರೀಡಾಪಟುಗಳನ್ನು ಭೇಟಿ ಮಾಡುತ್ತಾರೆ. ಕನ್ನಡದ ಸ್ಟಾರ್​ ನಟ ಯಶ್​ ಅವರನ್ನು ಭೇಟಿ ಮಾಡಲು ಫಿಲಿಫೈನ್​ ದೇಶದಿಂದ ಬೆಂಗಳೂರಿಗೆ ಅಭಿಮಾನಿಯೋರ್ವ ಬಂದಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅದೇ ರೀತಿ, ಈಗ ವಿರಾಟ್​ ಕೊಹ್ಲಿ ಅವರನ್ನು ಭೇಟಿ ಮಾಡಲೆಂದು ಅಭಿಮಾನಿಯೋರ್ವ 1800 ಕಿ.ಮೀ ಪ್ರಯಾಣ ಬೆಳೆಸಿದ್ದಾನೆ.

ಇಂಗ್ಲೆಡ್​ ವಿರುದ್ಧ ನಾಲ್ಕು ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ 3 ಮ್ಯಾಚ್​​ಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿತ್ತು. ಆದರೆ, ನಾಯಕ ವಿರಾಟ್​ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಅವರ ಬ್ಯಾಟ್​ನಿಂದ ಶತಕ ಸಿಡಿಯದೇ 500 ದಿನಗಳ ಮೇಲಾಗಿದೆ. ಹೀಗಾಗಿ, ಟೆಸ್ಟ್​ ಪಂದ್ಯದಲ್ಲಿ ಅವರು ಶತಕ ಬಾರಿಸೋದು ಖಚಿತ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಎರಡು ಬಾರಿ ಡಕ್​ಗೆ ಔಟ್​ ಆಗಿದ್ದರು. ಇದು ಭಾರೀ ನಿರಾಸೆ ಮೂಡಿಸಿತ್ತು.

ಈಗ ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ. ಟಿ-20ಯಲ್ಲಿಯಾದರೂ ವಿರಾಟ್​ ಕೊಹ್ಲಿ ಅಬ್ಬರದ ಆಟ ಪ್ರದರ್ಶನ ಮಾಡಲಿದ್ದಾರೆಯೇ ಎನ್ನುವ ಕುತೂಹಲ ಅಭಿಮಾನಿಗಳದ್ದು.

ಇದೇ ನಂಬಿಕೆ ಇಟ್ಟುಕೊಂಡು ವಿರಾಟ್​ ಕೊಹ್ಲಿ ಅಭಿಮಾನಿಯೋರ್ವ ಚೆನ್ನೈನಿಂದ ಗುಜರಾತ್​ಗೆ ತೆರಳಿದ್ದಾನೆ. ಮಾರ್ಚ್​ 14ರಂದು ನಡೆಯಲಿರುವ ಎರಡನೇ ಟಿ-20 ಪಂದ್ಯಕ್ಕೆ ತಮಿಳುನಾಡಿನ ಅಭಿಮಾನಿಯೋರ್ವ ಟಿಕೆಟ್​ ಖರೀದಿ ಮಾಡಿದ್ದಾನೆ. ಅಷ್ಟೇ ಅಲ್ಲ, ಈ ಬಗ್ಗೆ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾನೆ.

ವಿರಾಟ್​ ಕೊಹ್ಲಿಯನ್ನು ನೋಡಲು 1839 ಕಿ.ಮೀ ಚಲಿಸುತ್ತಿದ್ದೇನೆ. ನಿರಾಸೆ ಮಾಡಬೇಡಿ ಎಂದು ಧನುಷ್​ ಎಂಬ ಅಭಿಮಾನಿ ಬರೆದುಕೊಂಡಿದ್ದಾನೆ. ಇದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರಾಟ್​ ಕೊಹ್ಲಿ ಡಕ್​ ಬೀಳುವುದನ್ನು ನೋಡಲು ಅಲ್ಲಿವರೆಗೆ ಏಕೆ ತೆರಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್

Published On - 7:48 pm, Tue, 9 March 21

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು