AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!

ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!
ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Mar 09, 2021 | 7:53 PM

Share

ಅಭಿಮಾನಕ್ಕೋಸ್ಕರ ಫ್ಯಾನ್ಸ್​ಗಳು ಏನು ಬೇಕಾದರೂ ಮಾಡುತ್ತಾರೆ. ಸಾವಿರಾರು ಕಿ.ಮೀ ಚಲಿಸಿ ತಮ್ಮಿಷ್ಟದ ನಟ-ನಟಿ ಅಥವಾ ಕ್ರೀಡಾಪಟುಗಳನ್ನು ಭೇಟಿ ಮಾಡುತ್ತಾರೆ. ಕನ್ನಡದ ಸ್ಟಾರ್​ ನಟ ಯಶ್​ ಅವರನ್ನು ಭೇಟಿ ಮಾಡಲು ಫಿಲಿಫೈನ್​ ದೇಶದಿಂದ ಬೆಂಗಳೂರಿಗೆ ಅಭಿಮಾನಿಯೋರ್ವ ಬಂದಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅದೇ ರೀತಿ, ಈಗ ವಿರಾಟ್​ ಕೊಹ್ಲಿ ಅವರನ್ನು ಭೇಟಿ ಮಾಡಲೆಂದು ಅಭಿಮಾನಿಯೋರ್ವ 1800 ಕಿ.ಮೀ ಪ್ರಯಾಣ ಬೆಳೆಸಿದ್ದಾನೆ.

ಇಂಗ್ಲೆಡ್​ ವಿರುದ್ಧ ನಾಲ್ಕು ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ 3 ಮ್ಯಾಚ್​​ಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿತ್ತು. ಆದರೆ, ನಾಯಕ ವಿರಾಟ್​ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಅವರ ಬ್ಯಾಟ್​ನಿಂದ ಶತಕ ಸಿಡಿಯದೇ 500 ದಿನಗಳ ಮೇಲಾಗಿದೆ. ಹೀಗಾಗಿ, ಟೆಸ್ಟ್​ ಪಂದ್ಯದಲ್ಲಿ ಅವರು ಶತಕ ಬಾರಿಸೋದು ಖಚಿತ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಎರಡು ಬಾರಿ ಡಕ್​ಗೆ ಔಟ್​ ಆಗಿದ್ದರು. ಇದು ಭಾರೀ ನಿರಾಸೆ ಮೂಡಿಸಿತ್ತು.

ಈಗ ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ. ಟಿ-20ಯಲ್ಲಿಯಾದರೂ ವಿರಾಟ್​ ಕೊಹ್ಲಿ ಅಬ್ಬರದ ಆಟ ಪ್ರದರ್ಶನ ಮಾಡಲಿದ್ದಾರೆಯೇ ಎನ್ನುವ ಕುತೂಹಲ ಅಭಿಮಾನಿಗಳದ್ದು.

ಇದೇ ನಂಬಿಕೆ ಇಟ್ಟುಕೊಂಡು ವಿರಾಟ್​ ಕೊಹ್ಲಿ ಅಭಿಮಾನಿಯೋರ್ವ ಚೆನ್ನೈನಿಂದ ಗುಜರಾತ್​ಗೆ ತೆರಳಿದ್ದಾನೆ. ಮಾರ್ಚ್​ 14ರಂದು ನಡೆಯಲಿರುವ ಎರಡನೇ ಟಿ-20 ಪಂದ್ಯಕ್ಕೆ ತಮಿಳುನಾಡಿನ ಅಭಿಮಾನಿಯೋರ್ವ ಟಿಕೆಟ್​ ಖರೀದಿ ಮಾಡಿದ್ದಾನೆ. ಅಷ್ಟೇ ಅಲ್ಲ, ಈ ಬಗ್ಗೆ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾನೆ.

ವಿರಾಟ್​ ಕೊಹ್ಲಿಯನ್ನು ನೋಡಲು 1839 ಕಿ.ಮೀ ಚಲಿಸುತ್ತಿದ್ದೇನೆ. ನಿರಾಸೆ ಮಾಡಬೇಡಿ ಎಂದು ಧನುಷ್​ ಎಂಬ ಅಭಿಮಾನಿ ಬರೆದುಕೊಂಡಿದ್ದಾನೆ. ಇದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರಾಟ್​ ಕೊಹ್ಲಿ ಡಕ್​ ಬೀಳುವುದನ್ನು ನೋಡಲು ಅಲ್ಲಿವರೆಗೆ ಏಕೆ ತೆರಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್

Published On - 7:48 pm, Tue, 9 March 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ