AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!

ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ.

Virat Kohli: ವಿರಾಟ್​ ಕೊಹ್ಲಿಯನ್ನು ನೋಡಲು 1800 ಕಿ.ಮೀ. ಪ್ರಯಾಣಿಸಿದ ಅಭಿಮಾನಿ!
ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ
ರಾಜೇಶ್ ದುಗ್ಗುಮನೆ
|

Updated on:Mar 09, 2021 | 7:53 PM

Share

ಅಭಿಮಾನಕ್ಕೋಸ್ಕರ ಫ್ಯಾನ್ಸ್​ಗಳು ಏನು ಬೇಕಾದರೂ ಮಾಡುತ್ತಾರೆ. ಸಾವಿರಾರು ಕಿ.ಮೀ ಚಲಿಸಿ ತಮ್ಮಿಷ್ಟದ ನಟ-ನಟಿ ಅಥವಾ ಕ್ರೀಡಾಪಟುಗಳನ್ನು ಭೇಟಿ ಮಾಡುತ್ತಾರೆ. ಕನ್ನಡದ ಸ್ಟಾರ್​ ನಟ ಯಶ್​ ಅವರನ್ನು ಭೇಟಿ ಮಾಡಲು ಫಿಲಿಫೈನ್​ ದೇಶದಿಂದ ಬೆಂಗಳೂರಿಗೆ ಅಭಿಮಾನಿಯೋರ್ವ ಬಂದಿದ್ದ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಅದೇ ರೀತಿ, ಈಗ ವಿರಾಟ್​ ಕೊಹ್ಲಿ ಅವರನ್ನು ಭೇಟಿ ಮಾಡಲೆಂದು ಅಭಿಮಾನಿಯೋರ್ವ 1800 ಕಿ.ಮೀ ಪ್ರಯಾಣ ಬೆಳೆಸಿದ್ದಾನೆ.

ಇಂಗ್ಲೆಡ್​ ವಿರುದ್ಧ ನಾಲ್ಕು ಟೆಸ್ಟ್​ ಸರಣಿಯಲ್ಲಿ ಟೀಂ ಇಂಡಿಯಾ 3 ಮ್ಯಾಚ್​​ಗಳನ್ನು ಗೆದ್ದು ಸರಣಿ ತನ್ನದಾಗಿಸಿಕೊಂಡಿತ್ತು. ಆದರೆ, ನಾಯಕ ವಿರಾಟ್​ ಕೊಹ್ಲಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರ ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಅವರ ಬ್ಯಾಟ್​ನಿಂದ ಶತಕ ಸಿಡಿಯದೇ 500 ದಿನಗಳ ಮೇಲಾಗಿದೆ. ಹೀಗಾಗಿ, ಟೆಸ್ಟ್​ ಪಂದ್ಯದಲ್ಲಿ ಅವರು ಶತಕ ಬಾರಿಸೋದು ಖಚಿತ ಎಂದು ಹೇಳಲಾಗುತ್ತಿತ್ತು. ಆದರೆ, ಅವರು ಎರಡು ಬಾರಿ ಡಕ್​ಗೆ ಔಟ್​ ಆಗಿದ್ದರು. ಇದು ಭಾರೀ ನಿರಾಸೆ ಮೂಡಿಸಿತ್ತು.

ಈಗ ಮಾರ್ಚ್​ 12ರಿಂದ ಟಿ20 ಪಂದ್ಯ ಆರಂಭವಾಗಲಿದೆ. ಐದೂ ಮ್ಯಾಚ್​ಗಳು ಗುಜರಾತ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲೇ ಏರ್ಪಡುತ್ತಿವೆ. ಟಿ-20ಯಲ್ಲಿಯಾದರೂ ವಿರಾಟ್​ ಕೊಹ್ಲಿ ಅಬ್ಬರದ ಆಟ ಪ್ರದರ್ಶನ ಮಾಡಲಿದ್ದಾರೆಯೇ ಎನ್ನುವ ಕುತೂಹಲ ಅಭಿಮಾನಿಗಳದ್ದು.

ಇದೇ ನಂಬಿಕೆ ಇಟ್ಟುಕೊಂಡು ವಿರಾಟ್​ ಕೊಹ್ಲಿ ಅಭಿಮಾನಿಯೋರ್ವ ಚೆನ್ನೈನಿಂದ ಗುಜರಾತ್​ಗೆ ತೆರಳಿದ್ದಾನೆ. ಮಾರ್ಚ್​ 14ರಂದು ನಡೆಯಲಿರುವ ಎರಡನೇ ಟಿ-20 ಪಂದ್ಯಕ್ಕೆ ತಮಿಳುನಾಡಿನ ಅಭಿಮಾನಿಯೋರ್ವ ಟಿಕೆಟ್​ ಖರೀದಿ ಮಾಡಿದ್ದಾನೆ. ಅಷ್ಟೇ ಅಲ್ಲ, ಈ ಬಗ್ಗೆ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾನೆ.

ವಿರಾಟ್​ ಕೊಹ್ಲಿಯನ್ನು ನೋಡಲು 1839 ಕಿ.ಮೀ ಚಲಿಸುತ್ತಿದ್ದೇನೆ. ನಿರಾಸೆ ಮಾಡಬೇಡಿ ಎಂದು ಧನುಷ್​ ಎಂಬ ಅಭಿಮಾನಿ ಬರೆದುಕೊಂಡಿದ್ದಾನೆ. ಇದಕ್ಕೆ ಅನೇಕರು ಖುಷಿ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ವಿರಾಟ್​ ಕೊಹ್ಲಿ ಡಕ್​ ಬೀಳುವುದನ್ನು ನೋಡಲು ಅಲ್ಲಿವರೆಗೆ ಏಕೆ ತೆರಳುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: India vs England: ಶೂನ್ಯಕ್ಕೆ ಔಟಾದ ಕೊಹ್ಲಿ! ಈ ಕೆಟ್ಟ ದಾಖಲೆಯಲ್ಲೂ ಧೋನಿಯನ್ನ ಸರಿಗಟ್ಟಿದ ಶೂನ್ಯ ಸಂಪಾದಕ ವಿರಾಟ್

Published On - 7:48 pm, Tue, 9 March 21

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ