AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!

ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಅವರು ಈ ಮೊದಲು ಅತಿ ಕಡಿಮೆ ಇನ್ನಿಂಗ್ಸ್​ ಅಂದರೆ, 300 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ಕಲೆ ಹಾಕಿದ್ದರು. ಆದರೆ, ವಿರಾಟ್​ ಕೊಹ್ಲಿ ಕೇವಲ 242 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ತಲುಪಿದ್ದಾರೆ.

ಸಚಿನ್​ ತೆಂಡೂಲ್ಕರ್​​ ದಾಖಲೆಯನ್ನು ಹಿಂದಿಕ್ಕಿದ ವಿರಾಟ್​ ಕೊಹ್ಲಿ!
ವಿರಾಟ್ ಕೊಹ್ಲಿ
shruti hegde
| Edited By: |

Updated on: Dec 02, 2020 | 1:24 PM

Share

ಭಾರತ ಕ್ರಿಕೆಟ್​ ತಂಡದ ನಾಯಕ ವಿರಾಟ್​ ಕೊಹ್ಲಿ ಹೊಸ ದಾಖಲೆಗಳನ್ನು ಬರೆಯುತ್ತಲೇ ಇದ್ದಾರೆ. ಇಂದು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ಹೊಸ ದಾಖಲೆ ಸೃಷ್ಟಿಸಿದ್ದಾರೆ. ಏಕದಿನ ಪಂದ್ಯಗಳಲ್ಲಿ ಅತಿ ಕಡಿಮೆ ಇನ್ನಿಂಗ್ಸ್​ನಲ್ಲಿ 12 ಸಾವಿರ ರನ್​ ಗಳಿಕೆ ಮಾಡಿದ ಮೊದಲ ಕ್ರಿಕೆಟಿಗ ಎನ್ನುವ ಖ್ಯಾತಿಗೆ ಕೊಹ್ಲಿ ಪಾತ್ರರಾಗಿದ್ದಾರೆ.

ಮಾಸ್ಟರ್​ ಬ್ಲಾಸ್ಟರ್​ ಸಚಿನ್​ ತೆಂಡೂಲ್ಕರ್​ ಈ ಮೊದಲು ಅತಿ ಕಡಿಮೆ ಇನ್ನಿಂಗ್ಸ್​ ಅಂದರೆ, 300 ಏಕದಿನ ಮ್ಯಾಚ್​ಗಳಲ್ಲಿ 12 ಸಾವಿರ ರನ್​ ಕಲೆ ಹಾಕಿದ್ದರು. ವಿರಾಟ್​ ಕೇವಲ 242 ಮ್ಯಾಚ್​ಗಳಲ್ಲಿ 12 ಸಾವಿರ ರನ್​ ತಲುಪಿದ್ದಾರೆ. ಈ ಮೂಲಕ 12 ಸಾವಿರ ರನ್​ಗಳನ್ನು ಕಡಿಮೆ ಇನ್ನಿಂಗ್ಸ್​ನಲ್ಲಿ ತಲುಪಿದ ಮೊದಲ ಆಟಗಾರ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ. ಉಳಿದಂತೆ, ಆಸ್ಟ್ರೇಲಿಯಾದ ಮಾಜಿ ಆಟಗಾರ ರಿಕಿ ಪಾಂಟಿಂಗ್​ (314), ಕುಮಾರ್​ ಸಂಗಕಾರ (336), ಸನತ್​ ಜಯಸೂರ್ಯ (379), ಹಾಗೂ ಮಹೇಲಾ ಜಯವರ್ಧನೆ (399) ಕಡಿಮೆ ಇನ್ಸಿಂಗ್ಸ್​​ನಲ್ಲಿ 12 ಸಾವಿರ ರನ್​ ತಲುಪಿದ ಆಟಗಾರರ ಸಾಲಿನಲ್ಲಿದ್ದಾರೆ.

ಇದಲ್ಲದೆ, ವಿರಾಟ್​ ಕೊಹ್ಲಿ ಇನ್ನೂ ಅನೇಕ ದಾಖಲೆಗಳನ್ನು ತಮ್ಮ ಹೆಸರಿನಲ್ಲಿಟ್ಟುಕೊಂಡಿದ್ದಾರೆ. ಏಕದಿನ ಪಂದ್ಯಗಳಲ್ಲಿ 8,000, 9,000, 10,1000 ಹಾಗೂ 11,000 ಸಾವಿರ ರನ್​ಗಳನ್ನು ಕಡಿಮೆ ಇನ್ನಿಂಗ್ಸ್​ನಲ್ಲಿ ಅವರು ತಲುಪಿದ್ದಾರೆ. 242 ಏಕದಿನ ಪಂದ್ಯಗಳಲ್ಲಿ ವಿರಾಟ್​ ಸರಾಸರಿ ರನ್​ರೇಟ್​ 59.29 ಇದೆ. ಟಿ20 ಹಾಗೂ ಟೆಸ್ಟ್​ನಲ್ಲೂ ವಿರಾಟ್ ಅದ್ಭುತ ಪ್ರದರ್ಶನ ನೀಡಿದ್ದಾರೆ. 145 ಟೆಸ್ಟ್ ಇನ್ನಿಂಗ್ಸ್​ನಲ್ಲಿ 7,240 ರನ್​ ಕಲೆ ಹಾಕಿರುವ ಅವರು 27 ಶತಕ ಸಿಡಿಸಿದ್ದಾರೆ. ಟಿ20ಮ್ಯಾಚ್​ನಲ್ಲಿ ವಿರಾಟ್​ 2,794 ರನ್​ ಗಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ವಿರಾಟ್​ ಕೊಹ್ಲಿ ಮತ್ತಷ್ಟು ದಾಖಲೆ ಬರೆಯಲಿದ್ದಾರೆ ಎಂದು ಟ್ವಿಟರ್​ನಲ್ಲಿ ಅಭಿಮಾನಿಗಳು ವಿರಾಟ್​ ಸಾಧನೆಯನ್ನು ಕೊಂಡಾಡಿದ್ದಾರೆ.

ಪತ್ನಿ ಅನುಷ್ಕಾ ಗರ್ಭಿಣಿ ಹಿನ್ನೆಲೆ, ವಿರಾಟ್ ಕೊಹ್ಲಿ ಆಸಿಸ್ ಟೂರ್​ಗೆ ಬ್ರೇಕ್

Follow Us
shruti hegde
shruti hegde
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?