AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FIFA ವಿಶ್ವಕಪ್ ಫುಟ್‌ಬಾಲ್ ಪಂದ್ಯ ವರದಿ ಮಾಡುತ್ತಿದ್ದಾಗ ಹ್ಯಾಂಡ್ ಬ್ಯಾಗ್ ಕಳವು; ದೂರು ನೀಡಿದಾಗ ಕತಾರ್ ಪೊಲೀಸರ ಪ್ರತಿಕ್ರಿಯೆ ಕೇಳಿ ದಂಗಾದ ಪತ್ರಕರ್ತೆ

ಮಹಿಳಾ ಪೊಲೀಸೊಬ್ಬರು ನನ್ನಲ್ಲಿ 'ನಾವು ಎಲ್ಲೆಡೆ ಹೈಟೆಕ್ ಕ್ಯಾಮೆರಾಗಳನ್ನು ಹೊಂದಿದ್ದೇವೆ. ನಾವು ಅವನನ್ನು (ಕಳ್ಳನನ್ನು) ಫೇಸ್ ಡಿಟೆಕ್ಷನ್ ಮೂಲಕ ಪತ್ತೆ ಮಾಡಲಿದ್ದೇವೆ.

FIFA ವಿಶ್ವಕಪ್ ಫುಟ್‌ಬಾಲ್ ಪಂದ್ಯ ವರದಿ ಮಾಡುತ್ತಿದ್ದಾಗ ಹ್ಯಾಂಡ್ ಬ್ಯಾಗ್ ಕಳವು; ದೂರು ನೀಡಿದಾಗ ಕತಾರ್ ಪೊಲೀಸರ ಪ್ರತಿಕ್ರಿಯೆ ಕೇಳಿ ದಂಗಾದ ಪತ್ರಕರ್ತೆ
ಅರ್ಜೆಂಟೀನಾದ ಪತ್ರಕರ್ತೆ ಡೊಮಿನಿಕ್ ಮೆಟ್ಜರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Nov 21, 2022 | 6:00 PM

Share

2022 ಫಿಫಾ ವಿಶ್ವಕಪ್‌ ಫುಟ್‌ಬಾಲ್ (FIFA World Cup) ಆರಂಭವಾಗುತ್ತಿದ್ದಂತೆ ಪತ್ರಕರ್ತೆಯೊಬ್ಬರ ಹ್ಯಾಂಡ್ ಬಾಗ್ ನಿಂದ ವಸ್ತುಗಳು ಕಳವಾದ ಘಟನೆ ನಡೆದಿದೆ. ಈ ಬಗ್ಗೆ ಕತಾರಿ ಪೊಲೀಸರಿಗೆ(Qatari police) ದೂರು ನೀಡಿದಾಗ ಅಲ್ಲಿಂದ ಸಿಕ್ಕಿದ ಪ್ರತಿಕ್ರಿಯೆಯಿಂದ ನಾನು ದಂಗಾದೆ ಎಂದು ಅರ್ಜೆಂಟೀನಾದ ಟಿವಿ ವರದಿಗಾರ್ತಿ ಹೇಳಿದ್ದಾರೆ. ಮೊದಲ ಪಂದ್ಯದಲ್ಲಿ ಕತಾರ್ ಈಕ್ವೆಡಾರ್ ತಂಡವನ್ನು ಎದುರಿಸುವ ಮೂಲಕ ಭಾನುವಾರ ಸಂಜೆ ಪಂದ್ಯಾವಳಿ ಪ್ರಾರಂಭವಾಯಿತು. ಆರಂಭಿಕ ಪಂದ್ಯದ ವೇಳೆ ಅರ್ಜೆಂಟೀನಾದ ಪತ್ರಕರ್ತೆ ಡೊಮಿನಿಕ್ ಮೆಟ್ಜರ್ ಅವರು ನೇರ ಪ್ರಸಾರ ಮಾಡುತ್ತಿದ್ದಾಗ ಅವರ ಹ್ಯಾಂಡ್ ಬ್ಯಾಗ್ ನಿಂದ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ದಿ ಮಿರರ್ ವರದಿ ಮಾಡಿದೆ. ಸ್ಥಳೀಯ ಪೋಲೀಸ್ ಅಧಿಕಾರಿಗಳಿಗೆ ಕಳ್ಳತನ ಬಗ್ಗೆ ಪತ್ರಕರ್ತೆ ದೂರು ನೀಡಿದಾಗ ಕಳ್ಳನಿಗೆ ಯಾವ ಶಿಕ್ಷೆಯನ್ನು ವಿಧಿಸಲು ಬಯಸುತ್ತೀರಿ ಎಂದು ಅವರು ಕೇಳಿದ್ದಾರೆ.

“ನಾನು ಪೊಲೀಸ್ ಠಾಣೆಗೆ ಹೋದೆ. ಅಲ್ಲಿ ಸಾಂಸ್ಕೃತಿಕ ಭಿನ್ನತೆ ಕಂಡು ಬಂತು. ಮಹಿಳಾ ಪೊಲೀಸೊಬ್ಬರು ನನ್ನಲ್ಲಿ ‘ನಾವು ಎಲ್ಲೆಡೆ ಹೈಟೆಕ್ ಕ್ಯಾಮೆರಾಗಳನ್ನು ಹೊಂದಿದ್ದೇವೆ. ನಾವು ಅವನನ್ನು (ಕಳ್ಳನನ್ನು) ಫೇಸ್ ಡಿಟೆಕ್ಷನ್ ಮೂಲಕ ಪತ್ತೆ ಮಾಡಲಿದ್ದೇವೆ. ನಾವು ಅವನನ್ನು ಪತ್ತೆ ಮಾಡಿದ ನಂತರ ಅವನಿಗೆ ಯಾವ ಶಿಕ್ಷೆ ನೀಡಬೇಕೆಂದು ನೀವು ಬಯಸುತ್ತೀರಿ? ಎಂದು ಕೇಳಿದರು.

ಈ ಪ್ರಶ್ನೆಯಿಂದ ನಾನು ಗಲಿಬಿಲಿಗೊಳಗಾದೆ.

“ನಿಮಗೆ ಯಾವ ನ್ಯಾಯ ಬೇಕು? ನಾವು ಅವನಿಗೆ ಯಾವ ಶಿಕ್ಷೆಯನ್ನು ನೀಡಬೇಕೆಂದು ನೀವು ಬಯಸುತ್ತೀರಿ? ಅವನಿಗೆ ಐದು ವರ್ಷ ಜೈಲು ಶಿಕ್ಷೆಯಾಗಬೇಕೆಂದು ನೀವು ಬಯಸುತ್ತೀರಾ? ಅವನನ್ನು ಗಡೀಪಾರು ಮಾಡಬೇಕೆಂದು ನೀವು ಬಯಸುತ್ತೀರಾ? ಎಂದು ಪೊಲೀಸ್ ನನ್ನಲ್ಲಿ ಕೇಳಿದರು ಎಂದು ಪತ್ರಕರ್ತೆ ಹೇಳಿದ್ದಾರೆ.

Published On - 5:57 pm, Mon, 21 November 22

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!