AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs England | ಮಧ್ಯಮ ಕ್ರಮಾಂಕವನ್ನು ಅಂತಿಮಗೊಳಿಸುವುದು ಭಾರತಕ್ಕೆ ಜಟಿಲವಾಗಲಿದೆ: ಆಕಾಶ್ ಚೋಪ್ರಾ

ಭಾರತದ ಮಾಜಿ ಆರಂಭ ಅಟಗಾರ ಮತ್ತು ಕ್ರಿಕೆಟ್ ಅನಾಲಿಸ್ಟ್ ಆಕಾಶ್ ಚೋಪ್ರಾ, ಮೊದಲ ಪಂದ್ಯಕ್ಕೆ ಮಧ್ಯಮ ಕ್ರಮಾಂಕವನ್ನು ಅಂತಿಮಗೊಳಿಸುವುದು ಗೊಂದಲ ಹುಟ್ಟಿಸಲಿದೆ ಎಂದು ಹೇಳಿದ್ದಾರೆ.

India vs England | ಮಧ್ಯಮ ಕ್ರಮಾಂಕವನ್ನು ಅಂತಿಮಗೊಳಿಸುವುದು ಭಾರತಕ್ಕೆ ಜಟಿಲವಾಗಲಿದೆ: ಆಕಾಶ್ ಚೋಪ್ರಾ
ಕೆ ಎಲ್ ರಾಹುಲ್
ಅರುಣ್​ ಕುಮಾರ್​ ಬೆಳ್ಳಿ
|

Updated on: Mar 22, 2021 | 11:23 PM

Share

ಪುಣೆ: ತೀವ್ರ ಸ್ವರೂಪದ ಜಿದ್ದಾಜಿದ್ದಿನ ನಂತರ ಪ್ರವಾಸಿ ಇಂಗ್ಲೆಂಡ್​ ಟೀಮನ್ನು 3-2 ಅಂತರದಿಂದ ಸೋಲಿಸಿ ಟಿ20ಐ ಸರಣಿಯನ್ನು ತನ್ನದಾಗಿಸಿಕೊಂಡ ಭಾರತ ನಾಳೆ ಪುಂಣೆಯಲ್ಲಿ ಆರಂಭವಾಗಲಿರುವ ಮೂರು ಒಂದು ದಿನದ ಪಂದ್ಯಗಳ ಸರಣಿಯಲ್ಲಿ ಗೆಲುವಿನ ಓಟವನ್ನು ಮುಂದುವರಿಸುವ ನಿರೀಕ್ಷೆಯನ್ನು ಭಾರತದ ಕ್ರಿಕೆಟ್ ಪ್ರೇಮಿ ಇಟ್ಟುಕೊಂಡಿದ್ದಾನೆ. ಭಾರತ ಇನ್ನಿಂಗ್​ ಇನ್-ಫಾರ್ಮ್ ರೊಹಿತ್ ಶರ್ಮ ಮತ್ತು ಶಿಖರ್ ಧವನ್ ಆರಂಭಿಸಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಹೇಳಿದ್ದಾರೆ, ಅದೆನೋ ಸರಿ, ಟೀಮಿನ ಮಧ್ಯಮ ಕ್ರಮಾಂಕವನ್ನು ಅಂತಿಮಗೊಳಿಸುವುದು ಟೀಮ್ ಮ್ಯಾನೇಜ್ಮೆಂಟ್​ಗೆ ಜಟಿಲವಾಗಲಿದೆ.

ಭಾರತದ ಮಾಜಿ ಆರಂಭ ಅಟಗಾರ ಮತ್ತು ಕ್ರಿಕೆಟ್ ಅನಾಲಿಸ್ಟ್ ಆಕಾಶ್ ಚೋಪ್ರಾ, ಮೊದಲ ಪಂದ್ಯಕ್ಕೆ ಮಧ್ಯಮ ಕ್ರಮಾಂಕವನ್ನು ಅಂತಿಮಗೊಳಿಸುವುದು ಗೊಂದಲ ಹುಟ್ಟಿಸಲಿದೆ ಎಂದು ಹೇಳಿದ್ದಾರೆ. ಸ್ಟಾರ್ ಸ್ಪೋರ್ಟ್ಸ್​ ನೆಟ್​ವರ್ಕ್ ನಡೆಸುವ ಕ್ರಿಕೆಟ್​ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಆಕಾಶ್, ಕೆ ಎಲ್ ರಾಹುಲ್ ಮತ್ತು ರಿಷಭ್ ಪಂತ್ ಅವರನ್ನು ಒಟ್ಟಿಗೆ ಆಡಿಸುವುದು ಟೀಮ್ ಇಂಡಿಯಾಗೆ ಕಷ್ಟವಾಗಲಿದೆ ಎಂದು ಹೇಳಿದ್ದಾರೆ.

‘ಶ್ರೇಯಸ್ ಅಯ್ಯರ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಹಾಗಾದರೆ, ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಕೆ ಎಲ್ ರಾಹುಲ್ ಮತ್ತು ರಿಷಭ್ ಪಂತ್ ಅವರನ್ನು ಯಾವ ಕ್ರಮಾಂಕದಲ್ಲಿ ಫಿಟ್ ಮಾಡಲಿದೆ? ಅದು ಸಾಧ್ಯವಿದ್ದರೆ ಮಾಡಲಿ, ನಾನು ಆ ಕುರಿತು ಹೆಚ್ಚು ಮಾತಾಡಲಾರೆ, ನನ್ನ ಏಕಮಾತ್ರ ಆಸೆಯೆಂದರೆ ಎಂದರೆ ಭಾರತ ಈ ಸರಣಿಯನ್ನೂ ಗೆಲ್ಲಬೇಕು,’ ಎಂದು ಆಕಾಶ್ ಹೇಳಿದರು.

Akash Chopra

ಆಕಾಶ್ ಚೋಪ್ರಾ

ಅಕಾಶ್ ಚೋಪ್ರಾ ಅವರಂತೆ ಬೇರೆ ಕ್ರಿಕೆಟ್ ಪರಿಣಿತರು ಸಹ ಭಾರತದ ಮಧ್ಯಮ ಕ್ರಮಾಂಕದಲ್ಲಿ ರಾಹುಲ್ ಮತ್ತು ಪಂತ್ ಇಬ್ಬರನ್ನು ಆಡಿಸಲು ಸಾಧ್ಯವಾಗಬಹುದೇ ಅಂತ ಪ್ರಶ್ನೆಯೆತ್ತಿದ್ದಾರೆ. ಕೆಲವರು ರಾಹುಲ್ ಅವರನ್ನು ವಿಕೆಟ್​-ಕೀಪರ್ ಬ್ಯಾಟ್ಸ್​ಮನ್ ಆಗಿ ಆಡಿಸುವುದು ಸೂಕ್ತ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು, ಕನ್ನಡಿಗ ಫಾರ್ಮ್​ನಲ್ಲಿ ಇಲ್ಲದಿರುವುದರಿಂದ ಅವರನ್ನು ಆಡಿಸಿ ರಿಸ್ಕ್ ತೆಗೆದುಕೊಳ್ಳುವ ಬದಲು ಉತ್ತಮ ಸ್ಪರ್ಶದಲ್ಲಿರುವ ಪಂತ್ ಅವರನ್ನು ಆಡಿಸುವುದು ಬೆಟರ್ ಆಪ್ಷನ್  ಎಂದಿದ್ದಾರೆ.

ಧವನ್ ಅವರನ್ನು ಆರಂಭ ಆಟಗಾರನಾಗಿ ಆಡಿಸುವ ನಿರ್ಧಾರಕ್ಕೆ ಆಕಾಶ್ ಬೆಂಬಲ ಸೂಚಿಸಿದ್ದಾರೆ. ಅವರು ವಿಫಲರಾದರೂ ಎಲ್ಲ 3ಪಂದ್ಯಗಳಲ್ಲಿ ಆಡಿಸಬೇಕು ಎಂದು ಅವರು ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಆಡಿ ರನ್ ಗಳಿಸಲು ವಿಫಲರಾದ ಧವನ್​ ಅವರನ್ನು ಮಿಕ್ಕಿದ 4 ಪಂದ್ಯಗಳಿಗೆ ಕೈಬಿಡಲಾಗಿತ್ತು.

‘ನನ್ನ ಅಭಿಪ್ರಾಯ ಕೇಳುವುದಾದರೆ ಶಿಖರ್ ಧವನ್ ಎಲ್ಲ ಮೂರು ಪಂದ್ಯಗಳಲ್ಲೂ ಇನ್ನಿಂಗ್ಸ್ ಆರಂಭಿಸಬೇಕು. ಯಾಕೆಂದರೆ ಅವರೀಗ ಈಗ ಕೇವಲ ಸೀಮಿತ ಓವರ್​ಗಳ ಕ್ರಿಕೆಟ್ ಮಾತ್ರ ಆಡುತ್ತಿದ್ದಾರೆ. ಹಾಗಾಗಿ ಆರಂಭ ಆಟಗಾರನಾಗಿ ಆಡುವ ಅವಕಾಶವನ್ನು ಅವರಿಗೆ ನೀಡಬೇಕು,’ ಎಂದು ಆಕಾಶ್ ಹೇಳಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಒಂದು ದಿನದ ಪಂದ್ಯಗಳ ಸರಣಿ ಮಂಗಳವಾರದಿಂದ ಪುಣೆಯಲ್ಲಿ ಆರಂಭವಾಗಲಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಮತ್ತೆ ಭಾರಿ ಪ್ರಮಾಣದಲದಲಿ ಹೆಚ್ಚುತ್ತಿರುವುದರಿಂದ ಪ್ರೇಕ್ಷಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಪಂದ್ಯ ಮಧ್ಯಹ್ನ 1.30ಕ್ಕೆ ಆರಂಭವಾಗಲಿದೆ.

ಇದನ್ನೂ ಓದಿ:India vs England | ಸ್ಟೋಕ್ಸ್ ಆಡುವ ಉತ್ಸುಕತೆ ತೋರಿದ್ದರಿಂದ ಅವರಿಗೆ ವಿಶ್ರಾಂತಿ ನೀಡಿಲ್ಲ: ಅಯಾನ್ ಮೊರ್ಗನ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ