AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dingko Singh: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ ನಿಧನ

Dingko Singh: ಡಿಂಗ್ಕೊ 1998 ರಲ್ಲಿ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನ ಗೆದ್ದರು ಮತ್ತು ಅದೇ ವರ್ಷ ಅರ್ಜುನ ಪ್ರಶಸ್ತಿಯನ್ನು ಪಡೆದರು. 2013 ರಲ್ಲಿ, ಅವರು ಕ್ರೀಡೆಯಲ್ಲಿ ನೀಡಿದ ಕೊಡುಗೆಗಾಗಿ ಪದ್ಮಶ್ರೀ ನೀಡಿ ಅವರನ್ನು ಗೌರವಿಸಲಾಯಿತು.

Dingko Singh: ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ ನಿಧನ
ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್
ಪೃಥ್ವಿಶಂಕರ
|

Updated on:Jun 10, 2021 | 4:33 PM

Share

ಏಷ್ಯನ್ ಗೇಮ್ಸ್ ಚಿನ್ನದ ಪದಕ ವಿಜೇತ ಮಾಜಿ ಬಾಕ್ಸರ್ ಡಿಂಗ್ಕೊ ಸಿಂಗ್ (42) ಯಕೃತ್ತಿನ ಕ್ಯಾನ್ಸರ್ ವಿರುದ್ಧದ ಸುದೀರ್ಘ ಹೋರಾಟದಲ್ಲಿ ಸೋತು ಗುರುವಾರ ಇಹಲೋಕ ತ್ಯಜಿಸಿದ್ದಾರೆ. ಅವರು ಕಳೆದ ನಾಲ್ಕು ವರ್ಷಗಳಿಂದ ರೋಗದ ವಿರುದ್ಧ ಹೋರಾಡುತ್ತಿದ್ದರು. ಶ್ರೀ ಡಿಂಗ್ಕೊ ಸಿಂಗ್ ಅವರ ನಿಧನದಿಂದ ನಾನು ತುಂಬಾ ದುಃಖಿತನಾಗಿದ್ದೇನೆ. ಭಾರತವ ನಿರ್ಮಿಸಿದ ಅತ್ಯುತ್ತಮ ಬಾಕ್ಸರ್ಗಳಲ್ಲಿ ಒಬ್ಬರಾದ ಡಿಂಗ್ಕೊ 1998 ರ ಬ್ಯಾಂಕಾಕ್ ಏಷ್ಯನ್ ಕ್ರೀಡಾಕೂಟದಲ್ಲಿ ಡಿಂಕೊ ಅವರ ಚಿನ್ನದ ಪದಕ ಭಾರತದಲ್ಲಿ ಬಾಕ್ಸಿಂಗ್ ಮೇಲೆ ಆಸಕ್ತಿಯನ್ನು ಹುಟ್ಟುಹಾಕಿತು. ದುಃಖಿತ ಕುಟುಂಬಕ್ಕೆ ನನ್ನ ಸಂತಾಪವನ್ನು ಅರ್ಪಿಸುತ್ತೇನೆ. ಆರ್​ಐಪಿ ಡಿಂಕೊ, ಎಂದು ಕ್ರೀಡಾ ಸಚಿವ ಕಿರೆನ್ ರಿಜಿಜು ಟ್ವೀಟ್ ಮಾಡಿದ್ದಾರೆ.

ಚಿಕಿತ್ಸೆಗಾಗಿ ತಮ್ಮ ಮನೆಯನ್ನು ಮಾರಬೇಕಾಯಿತು ಅವರು 2020 ರ ಜನವರಿಯಲ್ಲಿ ದೆಹಲಿ ಆಸ್ಪತ್ರೆಯಲ್ಲಿ ವಿಕಿರಣ ಚಿಕಿತ್ಸೆಯ ನಂತರ ಇಂಫಾಲ್‌ನಲ್ಲಿರುವ ತಮ್ಮ ನಿವಾಸಕ್ಕೆ ಮರಳಿದ್ದರು. ಡಿಂಗ್ಕೊ ಸಿಂಗ್ ಅವರು ರಾಷ್ಟ್ರ ರಾಜಧಾನಿಯಲ್ಲಿ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಲು ತಮ್ಮ ಮನೆಯನ್ನು ಮಾರಬೇಕಾಯಿತು. ಆಗ ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಮುಂದೆ ಬಂದು ಅವರಿಗೆ ಆರ್ಥಿಕವಾಗಿ ಸಹಾಯ ಮಾಡಿದರು.

ಮೂರು ತಿಂಗಳ ನಂತರ ಅವರ ಸ್ಥಿತಿ ಹದಗೆಟ್ಟಾಗ ಡಿಂಗ್ಕೊ ಅವರನ್ನು ಅದೇ ಆಸ್ಪತ್ರೆಗೆ ಮತ್ತೆ ದಾಖಲಿಸಲಾಯಿತು. ಬಾಕ್ಸಿಂಗ್ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಅಜಯ್ ಸಿಂಗ್ ಸಹಾಯ ನೀಡಿದರು. ಅಗತ್ಯದ ಸಮಯದಲ್ಲಿ, ಡಿಂಗ್ಕೊ ಸಿಂಗ್ ಅವರಿಂದ ಸ್ಫೂರ್ತಿ ಪಡೆದ ಹಲವಾರು ಬಾಕ್ಸರ್ಗಳು ಅವರಿಗೆ ಸಹಾಯ ಮಾಡಲು ಒಗ್ಗೂಡಿದರು. ವಿಜೇಂದರ್ ಸಿಂಗ್ ಮತ್ತು ಕಾಮನ್ವೆಲ್ತ್ ಕ್ರೀಡಾಕೂಟದ ಪದಕ ವಿಜೇತ ಮನೋಜ್ ಕುಮಾರ್ ಅವರ ಚಿಕಿತ್ಸೆಗಾಗಿ ಹಣವನ್ನು ಸಂಗ್ರಹಿಸಿದ್ದರು. ಕೆಲವು ದಿನಗಳ ನಂತರ ಅವರು ಕಾಮಾಲೆ ರೋಗಕ್ಕೆ ತುತ್ತಾಗಿದ್ದರು. ಹಾಗೆಯೇ ಕಳೆದ ವರ್ಷ ಮೇ ತಿಂಗಳಲ್ಲಿ ಮಣಿಪುರ ಮೂಲದ ಮಾಜಿ ಬಾಕ್ಸರ್ ಡಿಂಗ್ಕೊ COVID-19 ಗೆ ತುತ್ತಾಗಿದ್ದರು.

ಅದೇ ವರ್ಷ ಅರ್ಜುನ ಪ್ರಶಸ್ತಿ ಡಿಂಗ್ಕೊ 1998 ರಲ್ಲಿ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನ ಗೆದ್ದರು ಮತ್ತು ಅದೇ ವರ್ಷ ಅರ್ಜುನ ಪ್ರಶಸ್ತಿಯನ್ನು ಪಡೆದರು. 2013 ರಲ್ಲಿ, ಅವರು ಕ್ರೀಡೆಯಲ್ಲಿ ನೀಡಿದ ಕೊಡುಗೆಗಾಗಿ ಪದ್ಮಶ್ರೀ ನೀಡಿ ಅವರನ್ನು ಗೌರವಿಸಲಾಯಿತು. ಅವರು ಬಾಕ್ಸಿಂಗ್​ನಿಂದ ನಿವೃತ್ತರಾದ ನಂತರ ಕೋಚ್ ಆಗಿ ಕಾರ್ಯನಿರ್ವಹಿಸಿದ್ದರು. ಡಿಂಗ್ಕೊ ಸಿಂಗ್ ಭಾರತವನ್ನು ನಿರ್ಮಿಸಿದ ಅತ್ಯುತ್ತಮ ಬಾಕ್ಸರ್ಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ. 2018 ರಲ್ಲಿ ಅವರ ಜೀವನವನ್ನು ಬೆಳ್ಳಿ ಪರದೆ ಮೇಲೆ ತರಲಾಗುವುದು ಮತ್ತು ಶಾಹಿದ್ ಕಪೂರ್ ಅವರ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ಘೋಷಿಸಲಾಯಿತು.

Published On - 4:32 pm, Thu, 10 June 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?