AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಮಹಿಳಾ ಕ್ರಿಕೆಟ್​ ತಂಡದ ಕೋಚ್ ಹುದ್ದೆಗೆ ಮರು ಆಯ್ಕೆಗೊಂಡ ರಮೇಶ್ ಪವಾರ್

ಈ ಹಿಂದೆ ಪವಾರ್ ಅವರನ್ನು 2018 ರಲ್ಲಿ ಭಾರತೀಯ ತಂಡದ ಕೋಚ್ ಆಗಿ ನೇಮಿಸಲಾಯಿತು. ಆದರೆ, ಆ ಸಮಯದಲ್ಲಿ ಅವರ ಮತ್ತು ತಂಡದ ನಾಯಕಿ ಮಿಥಾಲಿ ರಾಜ್ ನಡುವೆ ವಿವಾದ ಉಂಟಾಗಿತ್ತು.

ಭಾರತದ ಮಹಿಳಾ ಕ್ರಿಕೆಟ್​ ತಂಡದ ಕೋಚ್ ಹುದ್ದೆಗೆ ಮರು ಆಯ್ಕೆಗೊಂಡ ರಮೇಶ್ ಪವಾರ್
ರಮೇಶ್ ಪವಾರ್
ಪೃಥ್ವಿಶಂಕರ
|

Updated on: May 13, 2021 | 7:08 PM

Share

ಭಾರತದ ಮಾಜಿ ಸ್ಪಿನ್ನರ್ ರಮೇಶ್ ಪವಾರ್ ಅವರು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಮರಳಿದ್ದಾರೆ. ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ ಕ್ರಿಕೆಟ್ ಸಲಹಾ ಸಮಿತಿಯು ಪವಾರ್ ಅವರ ಹೆಸರನ್ನು ಶಿಫಾರಸು ಮಾಡಿತು, ಅದನ್ನು ಮಂಡಳಿಯು ಅಂಗೀಕರಿಸಿತು. ಎರಡೂವರೆ ವರ್ಷಗಳ ಹಿಂದೆ ವಿವಾದದ ನಂತರ ಪವಾರ್ ಅವರನ್ನು ಈ ಹುದ್ದೆಯಿಂದ ತೆಗೆದುಹಾಕಲಾಗಿತ್ತು. ಅವರ ಸ್ಥಾನದಲ್ಲಿ, ಭಾರತೀಯ ಕ್ರಿಕೆಟ್ ತಂಡದ ಮಾಜಿ ಬ್ಯಾಟ್ಸ್‌ಮನ್ ಡಬ್ಲ್ಯೂ.ವಿ.ರಾಮನ್ ಅವರಿಗೆ ಈ ಜವಾಬ್ದಾರಿಯನ್ನು ನೀಡಲಾಯಿತು. ರಾಮನ್ ಅವರ ಅಧಿಕಾರಾವಧಿ ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೊನೆಗೊಂಡಿತು ಮತ್ತು ಅವರು ಮತ್ತೊಮ್ಮೆ ಈ ಹುದ್ದೆಗೆ ಅರ್ಜಿ ಸಲ್ಲಿಸಿದರು. ಆದರೆ, ಮದನ್ ಲಾಲ್ ಮತ್ತು ಸುಲಕ್ಷನ ನಾಯಕ್ ಅವರ ಸಿಎಸಿ ಕಮಿಟಿ ಪವಾರ್​ ಅವರನ್ನು ತಮ್ಮ ಸ್ಥಾನಕ್ಕೆ ಮರಳುವಂತೆ ಸೂಚನೆ ನೀಡಿದೆ.

ರಾಮನ್ ಅವರ ಅಧಿಕಾರಾವಧಿ ಮುಗಿದಿದ್ದರು ಸಹ ಮಾರ್ಚ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ದೇಶೀಯ ಏಕದಿನ ಮತ್ತು ಟಿ 20 ಸರಣಿಯಲ್ಲಿ ಅವರನ್ನು ಉಳಿಸಿಕೊಳ್ಳಲಾಯಿತು. ಇದರ ನಂತರ ಬಿಸಿಸಿಐ ಕಳೆದ ತಿಂಗಳು ಏಪ್ರಿಲ್ 16 ರಂದು ಭಾರತೀಯ ತಂಡದ ಕೋಚ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿತ್ತು. ಇದಕ್ಕಾಗಿ 35 ಅರ್ಜಿಗಳು ಮಂಡಳಿಗೆ ಬಂದಿದ್ದು, ಅದರಲ್ಲಿ ಕೇವಲ 4 ಮಹಿಳಾ ಮತ್ತು 4 ಪುರುಷ ಮಾಜಿ ಕ್ರಿಕೆಟಿಗರನ್ನು ಮಾತ್ರ ಇರಿಸಲಾಗಿದೆ. ಮಹಿಳಾ ಕ್ರಿಕೆಟಿಗರಲ್ಲಿ ಮಾಜಿ ಅನುಭವಿ ಕ್ರಿಕೆಟಿಗರಾದ ಹೆಮಲತಾ ಕಲಾ ಮತ್ತು ಜಯ ಶರ್ಮಾ ಅವರಂತಹ ಹೆಸರುಗಳು ಇದ್ದವು.

ಎರಡೂವರೆ ವರ್ಷಗಳ ನಂತರ ಹುದ್ದೆಗೆ ವಾಪಸ್ ಸಿಎಸಿ ತನ್ನ ಶಿಫಾರಸನ್ನು ಬಿಸಿಸಿಐಗೆ ಕಳುಹಿಸಿತ್ತು. ಮಂಡಳಿಯು ಈ ಶಿಫಾರಸನ್ನು ಅಂಗೀಕರಿಸಿದ್ದು ಪವಾರ್ ಸುಮಾರು ಎರಡೂವರೆ ವರ್ಷಗಳ ನಂತರ ಮತ್ತೆ ತಂಡದ ಕೋಚ್ ಹುದ್ದೆಗೆ ಮರಳುತ್ತಿದ್ದಾರೆ. ಟ್ವೀಟ್ ಮಾಡುವ ಮೂಲಕ ಪವಾರ್ ಅವರ ನೇಮಕವನ್ನು ಬಿಸಿಸಿಐ ಪ್ರಕಟಿಸಿದೆ. ಈ ಹಿಂದೆ ಪವಾರ್ ಅವರನ್ನು 2018 ರಲ್ಲಿ ಭಾರತೀಯ ತಂಡದ ಕೋಚ್ ಆಗಿ ನೇಮಿಸಲಾಯಿತು. ಆದರೆ, ಆ ಸಮಯದಲ್ಲಿ ಅವರ ಮತ್ತು ತಂಡದ ನಾಯಕಿ ಮಿಥಾಲಿ ರಾಜ್ ನಡುವೆ ವಿವಾದ ಉಂಟಾಗಿತ್ತು.

ಮಿಥಾಲಿ-ಪವಾರ್ ವಿವಾದ ಪವಾರ್ ತನ್ನನ್ನು ಅವಮಾನಿಸಿದ್ದಾರೆ ಎಂದು ಮಿಥಾಲಿ ಆರೋಪಿಸಿದರು. ಪವಾರ್ ಅವರೊಂದಿಗೆ, ಭಾರತ ತಂಡವು 2018 ಟಿ 20 ವಿಶ್ವಕಪ್‌ನ ಸೆಮಿಫೈನಲ್ ತಲುಪಿತು. ಸೆಮಿಫೈನಲ್ ಪಂದ್ಯದಲ್ಲಿ ಮಿಥಾಲಿಯನ್ನು ಆಡುವ ಹನ್ನೊಂದರಿಂದ ಕೈಬಿಡಲಾಯಿತು, ನಂತರ ವಿವಾದ ಉಂಟಾಯಿತು ಮತ್ತು ಮಿಥಾಲಿ ಅವರು ಬಿಸಿಸಿಐಗೆ ಪತ್ರ ಬರೆದಿದ್ದರು. ಪವಾರ್ ಕೂಡ ಪ್ರತಿಕ್ರಿಯಿಸಿದ್ದು, ತಂಡದ ಯೋಜನೆಯ ಪ್ರಕಾರ ಮತ್ತು ಟಿ 20 ಆಟದ ಬೇಡಿಕೆಯ ಪ್ರಕಾರ ಮಿಥಾಲಿ ಆಡುತ್ತಿಲ್ಲ, ಇದರಿಂದಾಗಿ ಅವರನ್ನು ತೆಗೆದುಹಾಕಲಾಗಿದೆ. ವಿವಾದದ ನಂತರ ಪವರ್ ಅವರನ್ನು ತಂಡದಿಂದ ಕೈಬಿಡಲಾಯಿತು ಮತ್ತು ರಾಮನ್ ಅವರನ್ನು ಕೋಚ್ ಆಗಿ ನೇಮಿಸಲಾಯಿತು.

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ