AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ ಅಭಿಯಾನ; ದಿನಾಂಕಗಳು ಇಂತಿವೆ

ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳನ್ನು ಆದ್ಯತಾ ಗುಂಪಿಗೆ ಸೇರಿಸಿದ್ದು, ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳಿಗೆ ಲಸಿಕೆ ನೀಡಲಿದೆ.

ರಾಜ್ಯಾದ್ಯಂತ 10 ಸಾವಿರ ಕ್ರೀಡಾಪಟುಗಳಿಗೆ ಉಚಿತ ಕೋವಿಡ್ -19 ಲಸಿಕೆ ಅಭಿಯಾನ; ದಿನಾಂಕಗಳು ಇಂತಿವೆ
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Jun 09, 2021 | 4:20 PM

Share

ಕ್ರೀಡಾಪಟುಗಳಿಗೆ ಉಚಿತವಾಗಿ ಕೋವಿಡ್ – 19ನ ಮೊದಲ ಹಂತದ ಲಸಿಕೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಕ್ರೀಡಾ ಪ್ರಾಧಿಕಾರ ಹಾಗೂ ಕರ್ನಾಟಕ ಒಲಿಂಪಿಕ್ ಸಂಸ್ಥೆಯ ಸಹಯೋಗದೊಂದಿಗೆ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಾಳೆ (10/9/2021) ಈ ಲಸಿಕಾ ಅಭಿಯಾನಕ್ಕೆ ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನಾ ಇಲಾಖೆ ಸಚಿವ ಡಾ. ನಾರಾಯಣಗೌಡ ಚಾಲನೆ ನೀಡಲಿದ್ದಾರೆ.

ರಾಜ್ಯ ಸರ್ಕಾರವು 18 ವರ್ಷ ಮೇಲ್ಪಟ್ಟ ಕ್ರೀಡಾಪಟುಗಳನ್ನು ಆದ್ಯತಾ ಗುಂಪಿಗೆ ಸೇರಿಸಿದ್ದು, ನೋಂದಣಿ ಮಾಡಿಕೊಂಡ ಕ್ರೀಡಾಪಟುಗಳಿಗೆ ಲಸಿಕೆ ನೀಡಲಿದೆ. ಈಗಾಗಲೆ 2200 ಕ್ರೀಡಾಪಟುಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, 10 ಮತ್ತು 11 ನೇ ತಾರೀಖಿನಂದು ಇವರಿಗೆ ಲಸಿಕೆ ನೀಡಲಾಗುವುದು. ಇದುವರೆಗು ಹೆಸರನ್ನು ನೋಂದಾಯಿಸಿಕೊಳ್ಳದ ಕ್ರೀಡಾಪಟುಗಳು, ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಇರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಆಯಾ ರಾಜ್ಯ ಕ್ರೀಡಾ ಸಂಸ್ಥೆಗಳ ಮೂಲಕ ನೋಂದಾಯಿಸಿಕೊಳ್ಳಬೇಕು.

ಕೋವಿಡ್-19 ಹಿನ್ನೆಲೆಯಲ್ಲಿ ಕೋವಿಡ್ ತಡೆ ಮಾರ್ಗಸೂಚಿಗಳ ಪಾಲನೆಯೊಂದಿಗೆ ಅತ್ಯಂತ ಸರಳವಾಗಿ ಯಾವುದೇ ಸಭಾ ಕಾರ್ಯಕ್ರಮವಿಲ್ಲದೇ, ಈ ಲಸಿಕೆ ಅಭಿಯಾನಕ್ಕ 10-06-2021 ರಂದು ಬೆಳಿಗ್ಗೆ 10.30 ಗಂಟೆಗೆ ಕಂಠೀರವ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡೆ, ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಾ. ನಾರಾಯಣಗೌಡ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ.

ಕ್ರೀಡಾಪಟುಗಳಿಗೆ ಲಸಿಕೆ ನೀಡಲು ದಿನಾಂಕ ನಿಗದಿ 10-06-2021 ಗುರುವಾರದಂದು ಬಾಸ್ಕೆಟ್‌ಬಾಲ್, ಫೆನ್ಸಿಂಗ್, ಈಜು, ಹಾಕಿ, ಟೆನ್ನಿಕಾಯ್ಸ್, ಬ್ಯಾಡ್ಮಿಂಟನ್, ರೋಯಿಂಗ್ ಮತ್ತು ನೆಟ್‌ಬಾಲ್ ಕ್ರೀಡೆಗಳ ಕ್ರೀಡಾಪಟುಗಳಿಗೆ ಹಾಗೂ 11-06-2021 ಶುಕ್ರವಾರದಂದು ವುಶು, ಶೂಟಿಂಗ್, ಹ್ಯಾಂಡ್‌ಬಾಲ್, ಫುಟ್ಬಾಲ್ ಅಥ್ಲೆಟಿಕ್ಸ್, ಟೇಬಲ್ ಟೆನ್ನಿಸ್, ವಾಲಿಬಾಲ್ ಮತ್ತು ರೋಲರ್ ಸ್ಕೇಟಿಂಗ್ ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ರಾಜ್ಯಾಧ್ಯಂತ 10 ಸಾವಿರಕ್ಕು ಹೆಚ್ಚು ಕ್ರೀಡಾಪಟುಗಳಿಗೆ ಲಸಿಕೆ ನೀಡಲಾಗುವುದು. ಈಗಾಗಲೆ ನೋಂದಣಿ ಮಾಡಿಸಿಕೊಂಡವರನ್ನು ಹೊರತುಪಡಿಸಿ ಉಳಿದ ಕ್ರೀಡಾಪಟುಗಳಿಗೆ ಲಸಿಕಾ ಅಭಿಯಾನವನ್ನು ಮುಂದುವರೆಸಿ ಮುಂದಿನ ದಿನಗಳಲ್ಲಿ ನೀಡಲಾಗುವುದು.

ಕ್ರೀಡಾಪಟುಗಳು ರಾಜ್ಯದ, ರಾಷ್ಟ್ರದ ಹೆಮ್ಮೆ. ಅವರ ಆರೋಗ್ಯ ರಕ್ಷಣೆ ಸರ್ಕಾರದ ಜವಾಬ್ದಾರಿ. ಹೀಗಾಗಿ ಕ್ರೀಡಾಪಟುಗಳಿಗಾಗಿಯೇ ಪ್ರತ್ಯೇಕವಾಗಿ ಲಸಿಕಾ ಅಭಿಯಾನ ಆರಂಭಿಸಲಾಗುತ್ತಿದೆ. ಪ್ರತಿಯೊಬ್ಬ ಅರ್ಹ ಕ್ರೀಡಾಪಟುಗಳು ಹೆಸರು ನೋಂದಾಯಿಸಿಕೊಂಡು ನಿಗದಿತ ದಿನಾಂಕದಂದು ಲಸಿಕೆ ಪಡೆದುಕೊಳ್ಳಬೇಕು. ಕೇವಲ ಎರಡು ದಿನ ಮಾತ್ರವಲ್ಲ, ಎಲ್ಲ ಕ್ರೀಡಾಪಟುಗಳಿಗೆ ಲಸಿಕೆ ನೀಡುವವರೆಗೆ ಈ ಅಭಿಯಾನ ನಡೆಯಲಿದೆ ಎಂದು ಸಚಿವ ಡಾ. ನಾರಾಯಣಗೌಡ ತಿಳಿಸಿದ್ದಾರೆ.

Follow Us
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿಬೆಟ್ಟದಲ್ಲಿ ಯಡಿಯೂರಪ್ಪ ಕುಟುಂಬದಿಂದ ವಿಶೇಷ ಪೂಜೆ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
ಚಾಮುಂಡಿ ಸನ್ನಿಧಿಯಲ್ಲಿ ದರ್ಶನ್ ಭಾವಚಿತ್ರ ಹಿಡಿದು ಘೋಷಣೆ ಕೂಗಿದ ಅಭಿಮಾನಿ
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
KRS ಜಲಾಶಯದ ಗೇಟ್ ಮುಂದೆ ಉರುಳು ಸೇವೆ ಮಾಡಿದ ಮಹಿಳಾ ಹೋರಾಟಗಾರರು
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ