AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಿಂಬಾಬ್ವೆ ಸರಣಿಯಿಂದ ಹೊರಗುಳಿಯಲಿರುವ ಗೌತಮ್ ಗಂಭೀರ್!

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿ ಬಳಿಕ ಟೀಮ್ ಇಂಡಿಯಾ ಝಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಈ ಸರಣಿಯ ಬಳಿಕ ಭಾರತ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಸರಣಿ ಆಡಲಿದೆ. ಇದರ ನಡುವೆ ಏಷ್ಯನ್ ಗೇಮ್ಸ್ ಟಿ20 ಟೂರ್ನಿ ಕೂಡ ನಡೆಯಲಿದೆ. ಇದಕ್ಕಾಗಿ ಬಿಸಿಸಿಐ ಈಗಲೇ ಭರ್ಜರಿ ಪ್ಲ್ಯಾನ್​ಗಳನ್ನು ರೂಪಿಸುತ್ತಿದೆ.

ಝಿಂಬಾಬ್ವೆ ಸರಣಿಯಿಂದ ಹೊರಗುಳಿಯಲಿರುವ ಗೌತಮ್ ಗಂಭೀರ್!
Gautam Gambhir (2)
ಝಾಹಿರ್ ಯೂಸುಫ್
|

Updated on: Jul 07, 2026 | 1:55 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಸರಣಿ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾ ಝಿಂಬಾಬ್ವೆ ಪ್ರವಾಸ ಕೈಗೊಳ್ಳಲಿದೆ. ಜುಲೈ 23 ರಿಂದ ಶುರುವಾಗಲಿರುವ ಈ ಸರಣಿಯಿಂದ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಹೊರಗುಳಿಯಲಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮುಂಬರುವ ಬಿಡುವಿಲ್ಲದ ಅಂತಾರಾಷ್ಟ್ರೀಯ ವೇಳಾಪಟ್ಟಿ.

ಇಂಗ್ಲೆಂಡ್ ವಿರುದ್ಧದ ಸರಣಿ ಬಳಿಕ ಭಾರತ ತಂಡವು ಬ್ಯಾಕ್ ಟು ಬ್ಯಾಕ್ ಸರಣಿ ಹಾಗೂ ಟೂರ್ನಿಗಳನ್ನು ಆಡಲಿದೆ. ಹೀಗಾಗಿ ಕೋಚಿಂಗ್ ಸಿಬ್ಬಂದಿ ವಿಭಾಗವನ್ನು ವಿಭಜಿಸಿ ವಿಶ್ರಾಂತಿ ನೀಡಲು ಬಿಸಿಸಿಐ ಪ್ಲ್ಯಾನ್ ರೂಪಿಸಿದೆ. ಅದರಂತೆ ಝಿಂಬಾಬ್ವೆ ವಿರುದ್ಧದ ಸರಣಿಯಲ್ಲಿ ಭಾರತ ತಂಡದ ಮುಖ್ಯ ಕೋಚ್ ಆಗಿ ವಿವಿಎಸ್​ ಲಕ್ಷ್ಮಣ್ ಕಾಣಿಸಿಕೊಳ್ಳಲಿದ್ದಾರೆ.

ಕೋಚಿಂಗ್ ಸ್ಟಾಫ್ ವಿಭಜನೆಗೆ ಕಾರಣವೇನು?

  • ಒಂದೇ ಸಮಯದಲ್ಲಿ ಎರಡು ಸರಣಿ: ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್ ಗೇಮ್ಸ್ ಟಿ20 ಟೂರ್ನಿ ಮತ್ತು ಭಾರತದಲ್ಲಿ ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಸರಣಿ ಎರಡೂ ಒಂದೇ ಅವಧಿಯಲ್ಲಿ ಆಯೋಜನೆಗೊಳ್ಳಲಿವೆ.
  • ಗಂಭೀರ್ ತವರಿನಲ್ಲಿ ಬ್ಯುಸಿ: ಮುಖ್ಯ ಕೋಚ್ ಗೌತಮ್ ಗಂಭೀರ್ ಅವರು ವೆಸ್ಟ್ ಇಂಡೀಸ್ ವಿರುದ್ಧದ ಪ್ರಮುಖ ಸರಣಿಗಾಗಿ ಭಾರತದ ಹಿರಿಯ ಆಟಗಾರರ ತಂಡದೊಂದಿಗೆ ಇರಲಿದ್ದಾರೆ.
  • ಲಕ್ಷ್ಮಣ್ ಹೆಗಲಿಗೆ ಯುವ ಪಡೆ: ಈ ಹಿನ್ನೆಲೆಯಲ್ಲಿ, ಸೆಂಟರ್ ಆಫ್ ಎಕ್ಸಲೆನ್ಸ್ (CoE) ಮುಖ್ಯಸ್ಥರಾಗಿರುವ ವಿ.ವಿ.ಎಸ್. ಲಕ್ಷ್ಮಣ್ ಅವರಿಗೆ ಝಿಂಬಾಬ್ವೆ ಪ್ರವಾಸ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಯುವ ತಂಡವನ್ನು ಮುನ್ನಡೆಸುವ ಹೊಣೆ ನೀಡಲಾಗಿದೆ.

ಲಕ್ಷ್ಮಣ್ ಟೀಮ್:

ಟೀಮ್ ಇಂಡಿಯಾದೊಂದಿಗೆ ವಿವಿಎಸ್​ ಲಕ್ಷ್ಮಣ್ ಅವರ ಸಿಬ್ಬಂದಿ ತಂಡ ಕಾರ್ಯ ನಿರ್ವಹಿಸಲಿದೆ. ಇಲ್ಲಿ ಲಕ್ಷ್ಮಣ್ ಹೆಡ್ ಕೋಚ್ ಆಗಿ ಕಾಣಿಸಿಕೊಂಡರೆ, ಟೀಮ್ ಇಂಡಿಯಾದ ಮತ್ತಿಬ್ಬರು ಮಾಜಿ ಆಟಗಾರರು ಬ್ಯಾಟಿಂಗ್ ಹಾಗೂ ಬೌಲಿಂಗ್ ಕೋಚ್ ಆಗಿ ಕಾರ್ಯ ನಿರ್ವಹಿಸಲಿದ್ದಾರೆ.

  • ಬ್ಯಾಟಿಂಗ್ ಕೋಚ್: ಮಾಜಿ ಕ್ರಿಕೆಟಿಗ ಹೃಷಿಕೇಶ್ ಕಾನಿಟ್ಕರ್.
  •  ಬೌಲಿಂಗ್ ಕೋಚ್: ಮಾಜಿ ಸ್ಪಿನ್ನರ್ ಸುನಿಲ್ ಜೋಶಿ.

ಇದನ್ನೂ ಓದಿ: ಕ್ರಿಸ್ಟಿಯಾನೊ ಕಡೆಯಿಂದ ಈಡೇರಲಿದೆಯಾ ರೊನಾಲ್ಡೊ ವಿಶ್ವಕಪ್ ಕನಸು!

ಕಣದಲ್ಲಿ ಬಲಿಷ್ಠ ಪಡೆ:

ಸೀನಿಯರ್ ಆಟಗಾರರು ವೆಸ್ಟ್ ಇಂಡೀಸ್ ಸರಣಿಯಲ್ಲಿ ಬ್ಯುಸಿಯಾಗಿರುವುದರಿಂದ, ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಚಿನ್ನದ ಪದಕವನ್ನು ಉಳಿಸಿಕೊಳ್ಳಲು ಬಲಿಷ್ಠ ಯುವ ಪಡೆಯನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿರುವ ಆಟಗಾರರ ಪಟ್ಟಿ ಈ ಕೆಳಗಿನಂತಿದೆ…

ಏಷ್ಯನ್ ಗೇಮ್ಸ್​ಗೆ ಭಾರತ ತಂಡ: ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ (ಉಪಾನಯಕ), ರವಿ ಬಿಷ್ಣೋಯ್, ಅಭಿಷೇಕ್ ಶರ್ಮಾ, ನಿತೀಶ್ ಕುಮಾರ್ ರೆಡ್ಡಿ, ಜಸ್​ಪ್ರೀತ್ ಬುಮ್ರಾ ಬುಮ್ರಾ, ಸಂಜು ಸ್ಯಾಮ್ಸನ್, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಇಶಾನ್ ಕಿಶನ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ಶಿವಂ ದುಬೆ, ವರುಣ್ ಚಕ್ರವರ್ತಿ, ವೈಭವ್ ಸೂರ್ಯವಂಶಿ.

Follow Us