AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತದ ಈ ಇಬ್ಬರು ಕ್ರಿಕೆಟಿಗರು ಜವಬ್ದಾರಿ ಹೊರಬೇಕು; ಗೌತಮ್ ಗಂಭೀರ್

T20 World Cup: ಭಾರತ ಮತ್ತು ಪಾಕಿಸ್ತಾನ ಯಾವಾಗ ಸ್ಪರ್ಧಿಸುತ್ತವೆ, ಆಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಸಾಕಷ್ಟು ಜವಾಬ್ದಾರಿ ಇರುತ್ತದೆ.

T20 World Cup: ಪಾಕ್ ವಿರುದ್ಧದ ಪಂದ್ಯದಲ್ಲಿ ಭಾರತದ ಈ ಇಬ್ಬರು ಕ್ರಿಕೆಟಿಗರು ಜವಬ್ದಾರಿ ಹೊರಬೇಕು; ಗೌತಮ್ ಗಂಭೀರ್
ಎಬಿಡಿ ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡದೇ ಇರಬಹುದು. ಆದರೆ ಚುಟುಕು ಕ್ರಿಕೆಟ್​ನಲ್ಲಿ ಅತ್ಯಂತ ಬೇಡಿಕೆಯ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಆರ್​ಸಿಬಿ ತಂಡದಲ್ಲಿ ಡಿವಿಲಿಯರ್ಸ್ ಇರುವುದು ನಾಯಕ ವಿರಾಟ್ ಕೊಹ್ಲಿ ಪ್ಲಸ್ ಪಾಯಿಂಟ್ ಎಂದು ಗಂಭೀರ್ ತಿಳಿಸಿದ್ದಾರೆ.
TV9 Web
| Updated By: ಪೃಥ್ವಿಶಂಕರ|

Updated on: Jul 17, 2021 | 7:18 PM

Share

ಕ್ರಿಕೆಟ್‌ನಲ್ಲಿ ಅತ್ಯಂತ ರೋಚಕ ಮತ್ತು ಪೈಪೋಟಿಯ ಪಂದ್ಯದ ಬಗ್ಗೆ ನಾವು ಮಾತನಾಡಿದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಅಗ್ರಸ್ಥಾನದಲ್ಲಿ ನಿಲ್ಲುತ್ತದೆ. ಈ ಎರಡು ತಂಡಗಳು ದೀರ್ಘಕಾಲದಿಂದ ದ್ವಿಪಕ್ಷೀಯ ಸರಣಿಯನ್ನು ಆಡಿಲ್ಲ. ಆದರೆ ಐಸಿಸಿ ಈವೆಂಟ್‌ಗಳಲ್ಲಿ ಮಾತ್ರ ಮುಖಾಮುಖಿಯಾಗಿವೆ. ಆದರಿಂದ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ, ಅಭಿಮಾನಿಗಳ ಈ ಕಾಯುವಿಕೆ ಈಗ ಕೊನೆಗೊಳ್ಳಲಿದೆ ಏಕೆಂದರೆ ಈ ವರ್ಷ ಅಕ್ಟೋಬರ್-ನವೆಂಬರ್ ನಡುವೆ ನಡೆಯಲಿರುವ ಟಿ 20 ವಿಶ್ವಕಪ್ ಪಂದ್ಯದ ತಂಡಗಳ ಪಟ್ಟಿಯನ್ನು ಐಸಿಸಿ ಘೋಷಿಸಿದ್ದು, ಇದರಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡೂ ತಂಡಗಳನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿದೆ.

ಉಭಯ ತಂಡಗಳು ಕೊನೆಯ ಬಾರಿಗೆ 2019 ರ ವಿಶ್ವಕಪ್‌ನಲ್ಲಿ ಪಂದ್ಯವನ್ನು ಆಡಿದವು. ಅಂದಿನಿಂದ ಸುಮಾರು ಎರಡು ವರ್ಷಗಳ ನಂತರ ಉಭಯ ತಂಡಗಳು ಪರಸ್ಪರ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಯುವ ಆಟಗಾರರು ಆಡುವುದು ಸುಲಭವಲ್ಲ. ಇಂತಹ ಪರಿಸ್ಥಿತಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯದ ಮೊದಲು ಯುವಕರು ಆತಂಕಕ್ಕೆ ಒಳಗಾಗದಿರುವುದು ಹಿರಿಯ ಆಟಗಾರರ ಜವಾಬ್ದಾರಿಯಾಗಿದೆ ಎಂದು ಭಾರತದ ಮಾಜಿ ತಂಡದ ಆರಂಭಿಕ ಆಟಗಾರ ಗೌತಮ್ ಗಂಭೀರ್ ಹೇಳಿದ್ದಾರೆ.

ದೊಡ್ಡ ಜವಾಬ್ದಾರಿ ರೋಹಿತ್-ವಿರಾಟ್ ಅವರ ಮೇಲಿದೆ ಸ್ಟಾರ್ ಸ್ಪೋರ್ಟ್ಸ್ ಪ್ರದರ್ಶನದಲ್ಲಿ ಗಂಭೀರ್, ನಾನು ಪಾಕಿಸ್ತಾನದ ವಿರುದ್ಧ ನನ್ನ ಮೊದಲ ಪಂದ್ಯವನ್ನು ಆಡಿದಾಗ, ಪಾಕಿಸ್ತಾನದ ವಿರುದ್ಧ ಸಾಕಷ್ಟು ಪಂದ್ಯಗಳನ್ನು ಆಡಿದ ಆಟಗಾರರಿಗೆ ಹೋಲಿಸಿದರೆ ನಾನು ತುಂಬಾ ಉತ್ಸುಕನಾಗಿದ್ದೆ ಮತ್ತು ನರಳುತ್ತಿದ್ದೆ. ಆದ್ದರಿಂದ ಯುವ ಆಟಗಾರರನ್ನು ಶಾಂತವಾಗಿರಿಸುವುದು ಹಿರಿಯ ಆಟಗಾರರ ಜವಾಬ್ದಾರಿಯಾಗಿದೆ. ಏಕೆಂದರೆ ಭಾವನೆಗಳು ನಿಮಗೆ ಪಂದ್ಯಗಳನ್ನು ಗೆಲ್ಲಿಸಿಕೊಡುವುದಿಲ್ಲ. ಇದು ಬ್ಯಾಟ್ ಮತ್ತು ಬಾಲ್ ನಡುವಿನ ಸ್ಪರ್ಧೆಯಾಗಿದೆ. ಆದ್ದರಿಂದ ಭಾರತ ಮತ್ತು ಪಾಕಿಸ್ತಾನ ಯಾವಾಗ ಸ್ಪರ್ಧಿಸುತ್ತವೆ, ಆಗ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಿಗೆ ಸಾಕಷ್ಟು ಜವಾಬ್ದಾರಿ ಇರುತ್ತದೆ.

ಭಾರತ ಮತ್ತು ಪಾಕಿಸ್ತಾನವನ್ನು ಒಂದೇ ಗುಂಪಿನಲ್ಲಿ ಇರಿಸಲಾಗಿರುವ ಟಿ 20 ವಿಶ್ವಕಪ್ ತಂಡಗಳ ಪಟ್ಟಿಯನ್ನು ಐಸಿಸಿ ಶುಕ್ರವಾರ ಘೋಷಿಸಿದೆ. ಆದಾಗ್ಯೂ, ಗುಂಪು ಎ, ವೆಸ್ಟ್ ಇಂಡೀಸ್, ಆಸ್ಟ್ರೇಲಿಯಾ, ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾದಂತಹ ಬಲಿಷ್ಟ ತಂಡಗಳನ್ನು ಒಳಗೊಂಡಿದೆ. ಭಾರತ, ಪಾಕಿಸ್ತಾನ, ನ್ಯೂಜಿಲೆಂಡ್ ಮತ್ತು ಅಫ್ಘಾನಿಸ್ತಾನ ಬಿ ಗುಂಪಿನಲ್ಲಿವೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ