AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ

ಎರಡನೇ ಪಂದ್ಯದದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಬ್​ಮನ್​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ಗಿಲ್​ ಔಟ್ ಆದ ರೀತಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ
ಔಟ್​ ಆದ ಗಿಲ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 14, 2020 | 4:04 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಡಿಸೆಂಬರ್ 17ರಿಂದ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಅದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಎರಡನೇ ಅಭ್ಯಾಸ  ಪಂದ್ಯದ ವೇಳೆ ನಡೆದ ಘಟನೆಯೊಂದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮ್ಯಾಚ್​ನಲ್ಲಿ ಅಂಪೈರ್​ ಮಾಡಿದ ತಪ್ಪಿನಿಂದ ಭಾರತ ವಿಕೆಟ್​ ಕಳೆದುಕೊಳ್ಳುವಂತಾಯಿತು ಎಂದು ಎಲ್ಲರೂ ಆಕ್ರೋಶ ಹೊರ ಹಾಕಿದ್ದಾರೆ.

ಎರಡನೇ ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಭ್​ ಮನ್​​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಗಿಲ್​ 65 ರನ್​ ಸಿಡಿಸಿದ್ದರು. ಈ ವೇಳೆ ಅಂಪೈರ್​ ಮಾಡಿದ ಎಡವಟ್ಟಿನಿಂದ ಶುಭ್​ ಮನ್​​ ಗಿಲ್ ಔಟ್​ ಆದರು.

ಸ್ವೆಪ್​ಸನ್​​ ಎಸೆದ ಬಾಲ್​ ನೇರವಾಗಿ ಪ್ಯಾಡ್​ಗೆ ತಾಗಿ ಸ್ಲಿಪ್​ನಲ್ಲಿದ್ದ ಸಿಯಾನ್ ಅಬಾಟ್​ ಕೈ ಸೇರಿತ್ತು. ಮೊದಲು ಸ್ವೆಪ್​ಸನ್ ಲೆಗ್​ ಬಿಪೋರ್ ವಿಕೆಟ್​ಗೆ (LBW) ಅಪೀಲ್​ ಮಾಡಿದ್ದರು. ಆದರೆ, ಅಂಪೈರ್​ ಔಟ್​ ನೀಡಲಿಲ್ಲ. ನಂತರ ಇದು ಕ್ಯಾಚ್​ ಎಂದು ಆಸ್ಟ್ರೇಲಿಯಾ ಆಟಗಾರರು ಸಂಭ್ರಮಿಸಿದರು. ಈ ವೇಳೆ ಅಂಪೈರ್​ ಕೂಡ ಔಟ್​ ಕೊಟ್ಟರು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಲೆಗ್​ ಬಿಪೋರ್ ವಿಕೆಟ್​ ಇರಲಿಲ್ಲ. ಬಾಲ್​ ಪ್ಯಾಡ್​ಗೆ ತಾಗಿದ್ದರಿಂದ ಕ್ಯಾಚ್​ ಎನ್ನುವ ಮಾತೇ ಇಲ್ಲ. ಹೀಗಿರುವಾಗ ಅಂಪೈರ್​ ಔಟ್​ ಕೊಟ್ಟಿದ್ದೇಕೆ? ಇವರೆಲ್ಲ ಎಲ್ಲಿಂದ ಬರುತ್ತಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು, ಭಾರತದ ಮಾಜಿ ಓಪನರ್ ಆಕಾಶ್​ ಚೋಪ್ರಾ ಕೂಡ ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಶುಭ್​ ಮನ್​​ ಗಿಲ್​ ಔಟ್​ ಆಗಿದ್ದು ಹೇಗೆ? ಇದು ಎಲ್​ಬಿಡಬ್ಲ್ಯು ಆಗಿರಲಿಲ್ಲ. ಕ್ಯಾಚ್​ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದಿದ್ದಾರೆ.

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ