AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ

ಎರಡನೇ ಪಂದ್ಯದದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಬ್​ಮನ್​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ಗಿಲ್​ ಔಟ್ ಆದ ರೀತಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ
ಔಟ್​ ಆದ ಗಿಲ್​
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 4:04 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಡಿಸೆಂಬರ್ 17ರಿಂದ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಅದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಎರಡನೇ ಅಭ್ಯಾಸ  ಪಂದ್ಯದ ವೇಳೆ ನಡೆದ ಘಟನೆಯೊಂದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮ್ಯಾಚ್​ನಲ್ಲಿ ಅಂಪೈರ್​ ಮಾಡಿದ ತಪ್ಪಿನಿಂದ ಭಾರತ ವಿಕೆಟ್​ ಕಳೆದುಕೊಳ್ಳುವಂತಾಯಿತು ಎಂದು ಎಲ್ಲರೂ ಆಕ್ರೋಶ ಹೊರ ಹಾಕಿದ್ದಾರೆ.

ಎರಡನೇ ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಭ್​ ಮನ್​​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಗಿಲ್​ 65 ರನ್​ ಸಿಡಿಸಿದ್ದರು. ಈ ವೇಳೆ ಅಂಪೈರ್​ ಮಾಡಿದ ಎಡವಟ್ಟಿನಿಂದ ಶುಭ್​ ಮನ್​​ ಗಿಲ್ ಔಟ್​ ಆದರು.

ಸ್ವೆಪ್​ಸನ್​​ ಎಸೆದ ಬಾಲ್​ ನೇರವಾಗಿ ಪ್ಯಾಡ್​ಗೆ ತಾಗಿ ಸ್ಲಿಪ್​ನಲ್ಲಿದ್ದ ಸಿಯಾನ್ ಅಬಾಟ್​ ಕೈ ಸೇರಿತ್ತು. ಮೊದಲು ಸ್ವೆಪ್​ಸನ್ ಲೆಗ್​ ಬಿಪೋರ್ ವಿಕೆಟ್​ಗೆ (LBW) ಅಪೀಲ್​ ಮಾಡಿದ್ದರು. ಆದರೆ, ಅಂಪೈರ್​ ಔಟ್​ ನೀಡಲಿಲ್ಲ. ನಂತರ ಇದು ಕ್ಯಾಚ್​ ಎಂದು ಆಸ್ಟ್ರೇಲಿಯಾ ಆಟಗಾರರು ಸಂಭ್ರಮಿಸಿದರು. ಈ ವೇಳೆ ಅಂಪೈರ್​ ಕೂಡ ಔಟ್​ ಕೊಟ್ಟರು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಲೆಗ್​ ಬಿಪೋರ್ ವಿಕೆಟ್​ ಇರಲಿಲ್ಲ. ಬಾಲ್​ ಪ್ಯಾಡ್​ಗೆ ತಾಗಿದ್ದರಿಂದ ಕ್ಯಾಚ್​ ಎನ್ನುವ ಮಾತೇ ಇಲ್ಲ. ಹೀಗಿರುವಾಗ ಅಂಪೈರ್​ ಔಟ್​ ಕೊಟ್ಟಿದ್ದೇಕೆ? ಇವರೆಲ್ಲ ಎಲ್ಲಿಂದ ಬರುತ್ತಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು, ಭಾರತದ ಮಾಜಿ ಓಪನರ್ ಆಕಾಶ್​ ಚೋಪ್ರಾ ಕೂಡ ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಶುಭ್​ ಮನ್​​ ಗಿಲ್​ ಔಟ್​ ಆಗಿದ್ದು ಹೇಗೆ? ಇದು ಎಲ್​ಬಿಡಬ್ಲ್ಯು ಆಗಿರಲಿಲ್ಲ. ಕ್ಯಾಚ್​ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು