AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ

ಎರಡನೇ ಪಂದ್ಯದದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಬ್​ಮನ್​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ಗಿಲ್​ ಔಟ್ ಆದ ರೀತಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ
ಔಟ್​ ಆದ ಗಿಲ್​
ರಾಜೇಶ್ ದುಗ್ಗುಮನೆ
| Edited By: |

Updated on: Dec 14, 2020 | 4:04 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಡಿಸೆಂಬರ್ 17ರಿಂದ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಅದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಎರಡನೇ ಅಭ್ಯಾಸ  ಪಂದ್ಯದ ವೇಳೆ ನಡೆದ ಘಟನೆಯೊಂದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮ್ಯಾಚ್​ನಲ್ಲಿ ಅಂಪೈರ್​ ಮಾಡಿದ ತಪ್ಪಿನಿಂದ ಭಾರತ ವಿಕೆಟ್​ ಕಳೆದುಕೊಳ್ಳುವಂತಾಯಿತು ಎಂದು ಎಲ್ಲರೂ ಆಕ್ರೋಶ ಹೊರ ಹಾಕಿದ್ದಾರೆ.

ಎರಡನೇ ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಭ್​ ಮನ್​​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಗಿಲ್​ 65 ರನ್​ ಸಿಡಿಸಿದ್ದರು. ಈ ವೇಳೆ ಅಂಪೈರ್​ ಮಾಡಿದ ಎಡವಟ್ಟಿನಿಂದ ಶುಭ್​ ಮನ್​​ ಗಿಲ್ ಔಟ್​ ಆದರು.

ಸ್ವೆಪ್​ಸನ್​​ ಎಸೆದ ಬಾಲ್​ ನೇರವಾಗಿ ಪ್ಯಾಡ್​ಗೆ ತಾಗಿ ಸ್ಲಿಪ್​ನಲ್ಲಿದ್ದ ಸಿಯಾನ್ ಅಬಾಟ್​ ಕೈ ಸೇರಿತ್ತು. ಮೊದಲು ಸ್ವೆಪ್​ಸನ್ ಲೆಗ್​ ಬಿಪೋರ್ ವಿಕೆಟ್​ಗೆ (LBW) ಅಪೀಲ್​ ಮಾಡಿದ್ದರು. ಆದರೆ, ಅಂಪೈರ್​ ಔಟ್​ ನೀಡಲಿಲ್ಲ. ನಂತರ ಇದು ಕ್ಯಾಚ್​ ಎಂದು ಆಸ್ಟ್ರೇಲಿಯಾ ಆಟಗಾರರು ಸಂಭ್ರಮಿಸಿದರು. ಈ ವೇಳೆ ಅಂಪೈರ್​ ಕೂಡ ಔಟ್​ ಕೊಟ್ಟರು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಲೆಗ್​ ಬಿಪೋರ್ ವಿಕೆಟ್​ ಇರಲಿಲ್ಲ. ಬಾಲ್​ ಪ್ಯಾಡ್​ಗೆ ತಾಗಿದ್ದರಿಂದ ಕ್ಯಾಚ್​ ಎನ್ನುವ ಮಾತೇ ಇಲ್ಲ. ಹೀಗಿರುವಾಗ ಅಂಪೈರ್​ ಔಟ್​ ಕೊಟ್ಟಿದ್ದೇಕೆ? ಇವರೆಲ್ಲ ಎಲ್ಲಿಂದ ಬರುತ್ತಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು, ಭಾರತದ ಮಾಜಿ ಓಪನರ್ ಆಕಾಶ್​ ಚೋಪ್ರಾ ಕೂಡ ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಶುಭ್​ ಮನ್​​ ಗಿಲ್​ ಔಟ್​ ಆಗಿದ್ದು ಹೇಗೆ? ಇದು ಎಲ್​ಬಿಡಬ್ಲ್ಯು ಆಗಿರಲಿಲ್ಲ. ಕ್ಯಾಚ್​ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದಿದ್ದಾರೆ.

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ