AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ

ಎರಡನೇ ಪಂದ್ಯದದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಬ್​ಮನ್​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಆಗ ಗಿಲ್​ ಔಟ್ ಆದ ರೀತಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಭಾರತ-ಆಸ್ಟ್ರೇಲಿಯಾ ಪಂದ್ಯದಲ್ಲಿ ಅಂಪೈರ್​ ಮೋಸದಾಟ? ಇಲ್ಲಿದೆ ವಿಡಿಯೋ ಸಾಕ್ಷ್ಯ
ಔಟ್​ ಆದ ಗಿಲ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Dec 14, 2020 | 4:04 PM

Share

ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಡಿಸೆಂಬರ್ 17ರಿಂದ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಅದಕ್ಕೂ ಮೊದಲು ಎರಡು ಅಭ್ಯಾಸ ಪಂದ್ಯಗಳನ್ನು ಆಯೋಜಿಸಲಾಗಿತ್ತು. ಎರಡನೇ ಅಭ್ಯಾಸ  ಪಂದ್ಯದ ವೇಳೆ ನಡೆದ ಘಟನೆಯೊಂದು ಎಲ್ಲರ ಆಕ್ರೋಶಕ್ಕೆ ಕಾರಣವಾಗಿದೆ. ಈ ಮ್ಯಾಚ್​ನಲ್ಲಿ ಅಂಪೈರ್​ ಮಾಡಿದ ತಪ್ಪಿನಿಂದ ಭಾರತ ವಿಕೆಟ್​ ಕಳೆದುಕೊಳ್ಳುವಂತಾಯಿತು ಎಂದು ಎಲ್ಲರೂ ಆಕ್ರೋಶ ಹೊರ ಹಾಕಿದ್ದಾರೆ.

ಎರಡನೇ ಅಭ್ಯಾಸ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಭಾರತ 108 ರನ್​ಗೆ ಒಂದು ವಿಕೆಟ್​ ಕಳೆದುಕೊಂಡಿತ್ತು. ​ ಶುಭ್​ ಮನ್​​ ಗಿಲ್​ ಹಾಗೂ ಮಯಾಂಕ್​ ಅಗರ್​ವಾಲ್​ ಅದ್ಭುತವಾಗಿ ಆಟವಾಡುತ್ತಿದ್ದರು. ಅರ್ಧ ಶತಕ ಸಿಡಿಸಿ ಮುನ್ನುಗ್ಗುತ್ತಿದ್ದ ಗಿಲ್​ 65 ರನ್​ ಸಿಡಿಸಿದ್ದರು. ಈ ವೇಳೆ ಅಂಪೈರ್​ ಮಾಡಿದ ಎಡವಟ್ಟಿನಿಂದ ಶುಭ್​ ಮನ್​​ ಗಿಲ್ ಔಟ್​ ಆದರು.

ಸ್ವೆಪ್​ಸನ್​​ ಎಸೆದ ಬಾಲ್​ ನೇರವಾಗಿ ಪ್ಯಾಡ್​ಗೆ ತಾಗಿ ಸ್ಲಿಪ್​ನಲ್ಲಿದ್ದ ಸಿಯಾನ್ ಅಬಾಟ್​ ಕೈ ಸೇರಿತ್ತು. ಮೊದಲು ಸ್ವೆಪ್​ಸನ್ ಲೆಗ್​ ಬಿಪೋರ್ ವಿಕೆಟ್​ಗೆ (LBW) ಅಪೀಲ್​ ಮಾಡಿದ್ದರು. ಆದರೆ, ಅಂಪೈರ್​ ಔಟ್​ ನೀಡಲಿಲ್ಲ. ನಂತರ ಇದು ಕ್ಯಾಚ್​ ಎಂದು ಆಸ್ಟ್ರೇಲಿಯಾ ಆಟಗಾರರು ಸಂಭ್ರಮಿಸಿದರು. ಈ ವೇಳೆ ಅಂಪೈರ್​ ಕೂಡ ಔಟ್​ ಕೊಟ್ಟರು.

ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದ್ದು, ಚರ್ಚೆಗೆ ಕಾರಣವಾಗಿದೆ. ಲೆಗ್​ ಬಿಪೋರ್ ವಿಕೆಟ್​ ಇರಲಿಲ್ಲ. ಬಾಲ್​ ಪ್ಯಾಡ್​ಗೆ ತಾಗಿದ್ದರಿಂದ ಕ್ಯಾಚ್​ ಎನ್ನುವ ಮಾತೇ ಇಲ್ಲ. ಹೀಗಿರುವಾಗ ಅಂಪೈರ್​ ಔಟ್​ ಕೊಟ್ಟಿದ್ದೇಕೆ? ಇವರೆಲ್ಲ ಎಲ್ಲಿಂದ ಬರುತ್ತಾರೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡಿದ್ದಾರೆ.

ಇನ್ನು, ಭಾರತದ ಮಾಜಿ ಓಪನರ್ ಆಕಾಶ್​ ಚೋಪ್ರಾ ಕೂಡ ಈ ಬಗ್ಗೆ ಆಕ್ರೋಶ ಹೊರ ಹಾಕಿದ್ದಾರೆ. ಶುಭ್​ ಮನ್​​ ಗಿಲ್​ ಔಟ್​ ಆಗಿದ್ದು ಹೇಗೆ? ಇದು ಎಲ್​ಬಿಡಬ್ಲ್ಯು ಆಗಿರಲಿಲ್ಲ. ಕ್ಯಾಚ್​ ಎನ್ನುವುದಕ್ಕೆ ಯಾವುದೇ ಪುರಾವೆ ಇಲ್ಲ ಎಂದಿದ್ದಾರೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಕಿರ್ಗಿಸ್ತಾನ್ ಭೇಟಿಯ ಹೈಲೈಟ್ಸ್ ಹಂಚಿಕೊಂಡ ಪ್ರಧಾನಿ ಮೋದಿ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ