AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಭಾರತದಲ್ಲಿ ಹೆಚ್ಚಿದ ಕೊರೊನಾ; ಮನೆಗೆ ಹೋಗಲು ಹೊಸ ಉಪಾಯ ಮಾಡಿದ ಗ್ಲೆನ್ ಮ್ಯಾಕ್ಸ್​ವೆಲ್

RCB: ಕೊರೊನಾ ಹರಡುವುದನ್ನು ತಪ್ಪಿಸಲು ಭಾರತದಿಂದ ಹೊರಡುವ ಎಲ್ಲ ವಿಮಾನಗಳನ್ನು ನಿರ್ಬಂಧಿಸಲಾಗಿದೆ ಈ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಒಂದು ಉಪಾಯ ಮಾಡಿದ್ದಾರೆ.

Glenn Maxwell: ಭಾರತದಲ್ಲಿ ಹೆಚ್ಚಿದ ಕೊರೊನಾ; ಮನೆಗೆ ಹೋಗಲು ಹೊಸ ಉಪಾಯ ಮಾಡಿದ ಗ್ಲೆನ್ ಮ್ಯಾಕ್ಸ್​ವೆಲ್
ಗ್ಲೆನ್ ಮ್ಯಾಕ್ಸ್ವೆಲ್
ಮದನ್​ ಕುಮಾರ್​
| Edited By: |

Updated on: May 01, 2021 | 4:26 PM

Share

ಭಾರತದಲ್ಲಿ ಕೊರೊನಾ ಸೋಂಕು​ ಶರವೇಗದಲ್ಲಿ ಹಬ್ಬುತ್ತಿದೆ. ಕಲವು ಕಡೆ ಲಾಕ್​ಡೌನ್​ ಮಾಡಿದ್ದರೂ ಸಹ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಸೂಕ್ತ ಸಮಯದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯ ಸಿಗದ ಕಾರಣ ಜನರು ಬೀದಿಯಲ್ಲಿ ಹೆಣವಾಗುತ್ತಿರುವ ದೃಶ್ಯ ಕಾಣಿಸುತ್ತಿದೆ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಐಪಿಎಲ್​ಗಾಗಿ ಬಂದಿರುವ ವಿದೇಶಿ ಆಟಗಾರರಿಗೆ ಮನೆಗೆ ಹೋಗುವ ಚಿಂತೆ ಶುರು ಆಗಿದೆ.

ಭಾರತದಲ್ಲಿ ಕೊರೊನಾ ಹೆಚ್ಚಿರುವುದರಿಂದ ಬೇರೆಲ್ಲ ದೇಶಗಳೂ ಭಾರತಕ್ಕೆ ವಿಮಾನಯಾನ ನಿರ್ಬಂಧಿಸಿವೆ. ಐಪಿಎಲ್​ನಲ್ಲಿ ಆಡುತ್ತಿರುವ ವಿದೇಶಿ ಆಟಗಾರರ ತಲೆನೋವಿಗೆ ಇದು ಕಾರಣ ಆಗಿದೆ. ಇನ್ನೊಂದು ತಿಂಗಳಲ್ಲಿ ಐಪಿಎಲ್​ ಪಂದ್ಯಗಳು ಮುಗಿಯಲಿದ್ದು, ಆ ಬಳಿಕ ಮನೆಗೆ ಹೋಗುವುದು ಹೇಗೆ ಎಂದು ಅವರೆಲ್ಲ ತಲೆ ಕೆಡಿಸಿಕೊಂಡಿದ್ದಾರೆ. ಈ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಒಂದು ಉಪಾಯ ಮಾಡಿದ್ದಾರೆ.

ಆರ್​ಸಿಬಿ ಪರವಾಗಿ ಆಡುತ್ತಿರುವ ಮಾಕ್ಸ್​ವೆಲ್​ ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಭಾರತದಿಂದ ತೆರಳುವ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿರುವುದರ ನಡುವೆಯೂ ಅವರು ಆಸ್ಟ್ರೇಲಿಯಾಗೆ ತೆರಳಲು ಒಂದು ಮಾಸ್ಟರ್​ ಪ್ಲ್ಯಾನ್​ ಮಾಡಿದ್ದಾರೆ. ಜೂನ್​ ಮೂರನೇ ವಾರದಲ್ಲಿ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್ ಪಂದ್ಯ ನಡೆಯಲಿದೆ.​ ಅದಕ್ಕಾಗಿ ಚಾರ್ಟರ್ಡ್​ ಫ್ಲೈಟ್​ ಮೂಲಕ ಭಾರತ, ಇಂಗ್ಲೆಂಡ್​, ನ್ಯೂಜಿಲೆಂಡ್​ ಆಟಗಾರರು ಇಂಗ್ಲೆಂಡ್​ಗೆ ತೆರಳಲಿದ್ದಾರೆ. ಅದೇ ವಿಮಾನದಲ್ಲಿ ತಾವೂ ಪ್ರಯಾಣ ಮಾಡಬಹುದು ಎಂಬ ಬಗ್ಗೆ ಮ್ಯಾಕ್ಸ್​ವೆಲ್​ ಆಲೋಚಿಸಿದ್ದಾರೆ.

ಈ ರೀತಿಯಾಗಿ ಮೊದಲ ಭಾರತದಿಂದ ಇಂಗ್ಲೆಂಡ್​ಗೆ ತೆರಳಿ, ನಂತರ ಅಲ್ಲಿಂದ ಎಲ್ಲಾ ಆಟಗಾರರು ಅವರವರ ದೇಶಕ್ಕೆ ತೆರಳಬಹುದು ಎಂಬುದು ಮ್ಯಾಕ್ಸ್​ವೆಲ್​ ಉಪಾಯ. ಇದನ್ನು ಬಿಸಿಸಿಐ ಕೂಡ ಪರಿಗಣಿಸುವ ಸಾಧ್ಯತೆ ಇದೆ. ‘ಬಿಸಿಸಿಐ ಕೂಡ ಆಟಗಾರರ ಸುರಕ್ಷತೆಗೆ ಆದ್ಯತೆ ನೀಡುತ್ತದೆ. ಮೊದಲು ಇಂಗ್ಲೆಂಡ್​ ಕಳಿಸಿ, ನಂತರ ಅಲ್ಲಿಂದ ಅವರವರ ದೇಶಕ್ಕೆ ಹೋಗಲು ವ್ಯವಸ್ಥೆ ಮಾಡುವ ಆಯ್ಕೆ ಸೂಕ್ತವಾಗಿದೆ’ ಎಂದು ಬಿಸಿಸಿಐ ಖಜಾಂಜಿ ಅರುಣ್​ ಧುಮಲ್​​ ಹೇಳಿದ್ದಾರೆ.

ಸದ್ಯ ಆಟಗಾರರೆಲ್ಲರೂ ಸುರಕ್ಷಿತವಾಗಿದ್ದಾರೆ. ಕೊವಿಡ್​ ಸೋಂಕು ತಗುಲದಂತೆ ಬಯೋ ಬಬಲ್​ನಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಕಠಿಣ ನಿಯಮಗಳನ್ನು ಪಾಲಿಸಲಾಗುತ್ತಿದೆ. ಆದರೆ ಐಪಿಎಲ್​ ಮುಗಿದ ಬಳಿಕ ಇಷ್ಟೆಲ್ಲ ಸುರಕ್ಷತೆಯನ್ನು ನಿರೀಕ್ಷಿಸುವುದು ಕಷ್ಟ. ಹಾಗಾಗಿ ಐಪಿಎಲ್​ ಮುಗಿಯುತ್ತಿದ್ದಂತೆಯೇ ಮನೆ ಸೇರುವುದು ಹೇಗೆ ಎಂದು ವಿದೇಶಿ ಆಟಗಾರರು ಈಗಲೇ ಆಲೋಚಿಸುತ್ತಿದ್ದಾರೆ.

ಇದನ್ನೂ ಓದಿ: IPL 2021: ಈ ಸೀಸನ್​ನ 10 ಕೋಟಿ ಚಿಯರ್ ಲೀಡರ್! ಸೆಹ್ವಾಗ್ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಂಡ ಮ್ಯಾಕ್ಸ್​ವೆಲ್

Follow Us
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ವೃದ್ಧನ ತಳ್ಳಿದ ಭದ್ರತಾ ಸಿಬ್ಬಂದಿ ಮೇಲೆ ಸಿಟ್ಟಾದ ದಳಪತಿ ವಿಜಯ್: ವಿಡಿಯೋ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಲವ್ ಜಿಹಾದ್ ಕೇಸ್​: 50ಕ್ಕೂ ಹೆಚ್ಚು ಜನರಿಂದ ಸಮೀರ್​ಗೆ ಮನಸೋ ಇಚ್ಛೆ ಥಳಿತ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಕೇರಳದಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಸಿಎಂ ಮಮತಾ ಬ್ಯಾನರ್ಜಿ ಅವರ ಹೆಲಿಕಾಪ್ಟರ್ ಬಳಿ ಅನುಮಾನಾಸ್ಪದ ಡ್ರೋನ್ ಹಾರಾಟ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಬಿಜೆಪಿಗರಿಗೆ ನಾನೇ ಟಾರ್ಗೆಟ್​​ ಎಂದ ಸಿಎಂ: ಕಾರಣವನ್ನೂ ಕೊಟ್ಟ ಸಿದ್ದರಾಮಯ್ಯ
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಹಸಿವಿನಿಂದ ಊಟ ಕೇಳಿದ ಭಿಕ್ಷುಕನ ಮೇಲೆ ಬಿಸಿನೀರು ಎರಚಿದ ಹೋಟೆಲ್ ಸಿಬ್ಬಂದಿ!
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಟಿಕೆಟ್ ಬುಕ್ಕಿಂಗ್ ನೆಪದಲ್ಲಿ ವಂಚನೆ: ಲಿಂಕ್​ ಕ್ಲಿಕ್​ ಮಾಡಿದ್ರೆ ಹಣ ಮಾಯ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
ಡೆಲ್ಲಿ ವಿರುದ್ಧ ವಿಶೇಷ ಮೈಲಿಗಲ್ಲು ದಾಟಿದ ರೋಹಿತ್ ಶರ್ಮಾ
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
IPL ಟಿಕೆಟ್​​ ಪಡೆದ ಶಾಸಕರಿಗೆ ಮಾಜಿ ಸಿಎಂ ಸದಾನಂದಗೌಡ ಕ್ಲಾಸ್​​
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ
ಕಣ್ಣಿಗೆ ಕಂಡವರಿಗೆಲ್ಲಾ ಎಗರಿ.. ಎಗರಿ ಕಚ್ಚಿದ ನಾಯಿ