AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Glenn Maxwell: ಭಾರತದಲ್ಲಿ ಹೆಚ್ಚಿದ ಕೊರೊನಾ; ಮನೆಗೆ ಹೋಗಲು ಹೊಸ ಉಪಾಯ ಮಾಡಿದ ಗ್ಲೆನ್ ಮ್ಯಾಕ್ಸ್​ವೆಲ್

RCB: ಕೊರೊನಾ ಹರಡುವುದನ್ನು ತಪ್ಪಿಸಲು ಭಾರತದಿಂದ ಹೊರಡುವ ಎಲ್ಲ ವಿಮಾನಗಳನ್ನು ನಿರ್ಬಂಧಿಸಲಾಗಿದೆ ಈ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಒಂದು ಉಪಾಯ ಮಾಡಿದ್ದಾರೆ.

Glenn Maxwell: ಭಾರತದಲ್ಲಿ ಹೆಚ್ಚಿದ ಕೊರೊನಾ; ಮನೆಗೆ ಹೋಗಲು ಹೊಸ ಉಪಾಯ ಮಾಡಿದ ಗ್ಲೆನ್ ಮ್ಯಾಕ್ಸ್​ವೆಲ್
ಗ್ಲೆನ್ ಮ್ಯಾಕ್ಸ್ವೆಲ್
ಮದನ್​ ಕುಮಾರ್​
| Edited By: |

Updated on: May 01, 2021 | 4:26 PM

Share

ಭಾರತದಲ್ಲಿ ಕೊರೊನಾ ಸೋಂಕು​ ಶರವೇಗದಲ್ಲಿ ಹಬ್ಬುತ್ತಿದೆ. ಕಲವು ಕಡೆ ಲಾಕ್​ಡೌನ್​ ಮಾಡಿದ್ದರೂ ಸಹ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಜಾಸ್ತಿ ಆಗುತ್ತಲೇ ಇದೆ. ಸೂಕ್ತ ಸಮಯದಲ್ಲಿ ಯಾವುದೇ ವೈದ್ಯಕೀಯ ಸೌಲಭ್ಯ ಸಿಗದ ಕಾರಣ ಜನರು ಬೀದಿಯಲ್ಲಿ ಹೆಣವಾಗುತ್ತಿರುವ ದೃಶ್ಯ ಕಾಣಿಸುತ್ತಿದೆ. ಆಕ್ಸಿಜನ್​ ಸಿಲಿಂಡರ್​ಗಳಿಗಾಗಿ ರೋಗಿಗಳು ಪರದಾಡುವಂತಾಗಿದೆ. ಈ ಸಂದರ್ಭದಲ್ಲಿ ಐಪಿಎಲ್​ಗಾಗಿ ಬಂದಿರುವ ವಿದೇಶಿ ಆಟಗಾರರಿಗೆ ಮನೆಗೆ ಹೋಗುವ ಚಿಂತೆ ಶುರು ಆಗಿದೆ.

ಭಾರತದಲ್ಲಿ ಕೊರೊನಾ ಹೆಚ್ಚಿರುವುದರಿಂದ ಬೇರೆಲ್ಲ ದೇಶಗಳೂ ಭಾರತಕ್ಕೆ ವಿಮಾನಯಾನ ನಿರ್ಬಂಧಿಸಿವೆ. ಐಪಿಎಲ್​ನಲ್ಲಿ ಆಡುತ್ತಿರುವ ವಿದೇಶಿ ಆಟಗಾರರ ತಲೆನೋವಿಗೆ ಇದು ಕಾರಣ ಆಗಿದೆ. ಇನ್ನೊಂದು ತಿಂಗಳಲ್ಲಿ ಐಪಿಎಲ್​ ಪಂದ್ಯಗಳು ಮುಗಿಯಲಿದ್ದು, ಆ ಬಳಿಕ ಮನೆಗೆ ಹೋಗುವುದು ಹೇಗೆ ಎಂದು ಅವರೆಲ್ಲ ತಲೆ ಕೆಡಿಸಿಕೊಂಡಿದ್ದಾರೆ. ಈ ನಡುವೆ ಆಸ್ಟ್ರೇಲಿಯಾ ಕ್ರಿಕೆಟ್​ ಆಟಗಾರ ಗ್ಲೆನ್​ ಮ್ಯಾಕ್ಸ್​ವೆಲ್​ ಒಂದು ಉಪಾಯ ಮಾಡಿದ್ದಾರೆ.

ಆರ್​ಸಿಬಿ ಪರವಾಗಿ ಆಡುತ್ತಿರುವ ಮಾಕ್ಸ್​ವೆಲ್​ ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಬಾಯಿ ಬಿಟ್ಟಿದ್ದಾರೆ. ಭಾರತದಿಂದ ತೆರಳುವ ಎಲ್ಲ ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿರುವುದರ ನಡುವೆಯೂ ಅವರು ಆಸ್ಟ್ರೇಲಿಯಾಗೆ ತೆರಳಲು ಒಂದು ಮಾಸ್ಟರ್​ ಪ್ಲ್ಯಾನ್​ ಮಾಡಿದ್ದಾರೆ. ಜೂನ್​ ಮೂರನೇ ವಾರದಲ್ಲಿ ವರ್ಲ್ಡ್​ ಟೆಸ್ಟ್​ ಚಾಂಪಿಯನ್​ಶಿಪ್ ಪಂದ್ಯ ನಡೆಯಲಿದೆ.​ ಅದಕ್ಕಾಗಿ ಚಾರ್ಟರ್ಡ್​ ಫ್ಲೈಟ್​ ಮೂಲಕ ಭಾರತ, ಇಂಗ್ಲೆಂಡ್​, ನ್ಯೂಜಿಲೆಂಡ್​ ಆಟಗಾರರು ಇಂಗ್ಲೆಂಡ್​ಗೆ ತೆರಳಲಿದ್ದಾರೆ. ಅದೇ ವಿಮಾನದಲ್ಲಿ ತಾವೂ ಪ್ರಯಾಣ ಮಾಡಬಹುದು ಎಂಬ ಬಗ್ಗೆ ಮ್ಯಾಕ್ಸ್​ವೆಲ್​ ಆಲೋಚಿಸಿದ್ದಾರೆ.

ಈ ರೀತಿಯಾಗಿ ಮೊದಲ ಭಾರತದಿಂದ ಇಂಗ್ಲೆಂಡ್​ಗೆ ತೆರಳಿ, ನಂತರ ಅಲ್ಲಿಂದ ಎಲ್ಲಾ ಆಟಗಾರರು ಅವರವರ ದೇಶಕ್ಕೆ ತೆರಳಬಹುದು ಎಂಬುದು ಮ್ಯಾಕ್ಸ್​ವೆಲ್​ ಉಪಾಯ. ಇದನ್ನು ಬಿಸಿಸಿಐ ಕೂಡ ಪರಿಗಣಿಸುವ ಸಾಧ್ಯತೆ ಇದೆ. ‘ಬಿಸಿಸಿಐ ಕೂಡ ಆಟಗಾರರ ಸುರಕ್ಷತೆಗೆ ಆದ್ಯತೆ ನೀಡುತ್ತದೆ. ಮೊದಲು ಇಂಗ್ಲೆಂಡ್​ ಕಳಿಸಿ, ನಂತರ ಅಲ್ಲಿಂದ ಅವರವರ ದೇಶಕ್ಕೆ ಹೋಗಲು ವ್ಯವಸ್ಥೆ ಮಾಡುವ ಆಯ್ಕೆ ಸೂಕ್ತವಾಗಿದೆ’ ಎಂದು ಬಿಸಿಸಿಐ ಖಜಾಂಜಿ ಅರುಣ್​ ಧುಮಲ್​​ ಹೇಳಿದ್ದಾರೆ.

ಸದ್ಯ ಆಟಗಾರರೆಲ್ಲರೂ ಸುರಕ್ಷಿತವಾಗಿದ್ದಾರೆ. ಕೊವಿಡ್​ ಸೋಂಕು ತಗುಲದಂತೆ ಬಯೋ ಬಬಲ್​ನಲ್ಲಿ ಪಂದ್ಯಗಳನ್ನು ಆಯೋಜಿಸಲಾಗುತ್ತಿದೆ. ಕಠಿಣ ನಿಯಮಗಳನ್ನು ಪಾಲಿಸಲಾಗುತ್ತಿದೆ. ಆದರೆ ಐಪಿಎಲ್​ ಮುಗಿದ ಬಳಿಕ ಇಷ್ಟೆಲ್ಲ ಸುರಕ್ಷತೆಯನ್ನು ನಿರೀಕ್ಷಿಸುವುದು ಕಷ್ಟ. ಹಾಗಾಗಿ ಐಪಿಎಲ್​ ಮುಗಿಯುತ್ತಿದ್ದಂತೆಯೇ ಮನೆ ಸೇರುವುದು ಹೇಗೆ ಎಂದು ವಿದೇಶಿ ಆಟಗಾರರು ಈಗಲೇ ಆಲೋಚಿಸುತ್ತಿದ್ದಾರೆ.

ಇದನ್ನೂ ಓದಿ: IPL 2021: ಈ ಸೀಸನ್​ನ 10 ಕೋಟಿ ಚಿಯರ್ ಲೀಡರ್! ಸೆಹ್ವಾಗ್ ಮಾಡಿದ ಅವಮಾನಕ್ಕೆ ಸೇಡು ತೀರಿಸಿಕೊಂಡ ಮ್ಯಾಕ್ಸ್​ವೆಲ್

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ