Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ನಿರ್ವಹಣೆ ಇಲ್ಲದೇ ಹಳ್ಳಹಿಡಿದ ಕೋಟಿ ವೆಚ್ಚದ ಸಿಂಥೆಟಿಕ್ ಟ್ರ್ಯಾಕ್; ಕ್ರೀಡಾ ಇಲಾಖೆ ನಿರ್ಲಕ್ಷ್ಯಕ್ಕೆ ಅಥ್ಲೀಟ್​ಗಳ ಆಕ್ರೋಶ

Gadag: ಜಿಲ್ಲೆಯ ಯುವ ಕ್ರೀಡಾ ಫ್ರತಿಭೆಗಳಿಗೆ ಸಹಕಾರಿಯಾಗಲೆಂದು ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ರಾಜ್ಯದ ಎರಡನೇ ಅತೀ ದೊಡ್ಡ ಸಿಂಥೆಟಿಕ್ ಟ್ರ್ಯಾಕ್, ಕ್ರೀಡಾ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಹಾಗೂ ಅವೈಜ್ಞಾನಿಕ ನಿರ್ವಾಹಣೆಯಿಂದಾಗಿ ದುಸ್ಥಿತಿಗೆ ತಲುಪಿದ್ದು, ಕ್ರೀಡಾಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ.

ಗದಗ: ನಿರ್ವಹಣೆ ಇಲ್ಲದೇ ಹಳ್ಳಹಿಡಿದ ಕೋಟಿ ವೆಚ್ಚದ ಸಿಂಥೆಟಿಕ್ ಟ್ರ್ಯಾಕ್; ಕ್ರೀಡಾ ಇಲಾಖೆ ನಿರ್ಲಕ್ಷ್ಯಕ್ಕೆ ಅಥ್ಲೀಟ್​ಗಳ ಆಕ್ರೋಶ
ಗದಗ ಸಿಂಥೆಟಿಕ್ ಟ್ರ್ಯಾಕ್ ಕ್ರೀಡಾಂಗಣ
Follow us
ಸಂಜೀವ ಕುಮಾರ್​ ಪಾಂಡ್ರೆ, ಗದಗ
| Updated By: ಪೃಥ್ವಿಶಂಕರ

Updated on:Nov 24, 2023 | 1:38 PM

Gadag: ಜಿಲ್ಲೆಯ ಯುವ ಕ್ರೀಡಾ ಫ್ರತಿಭೆಗಳಿಗೆ ಸಹಕಾರಿಯಾಗಲೆಂದು ಕೋಟಿ ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ರಾಜ್ಯದ ಎರಡನೇ ಅತೀ ದೊಡ್ಡ ಸಿಂಥೆಟಿಕ್ ಟ್ರ್ಯಾಕ್ (Synthetic Track Stadium), ಕ್ರೀಡಾ ಇಲಾಖೆಯ ನಿರ್ಲಕ್ಷ್ಯದಿಂದಾಗಿ ಹಾಗೂ ಅವೈಜ್ಞಾನಿಕ ನಿರ್ವಾಹಣೆಯಿಂದಾಗಿ ದುಸ್ಥಿತಿಗೆ ತಲುಪಿದ್ದು, ಕ್ರೀಡಾಪಟುಗಳ ಆಕ್ರೋಶಕ್ಕೆ ಕಾರಣವಾಗಿದೆ. ವಾಸ್ತವವಾಗಿ ಯುವ ಅಥ್ಲಿಟ್​ಗಳ (Athletes) ಅಭ್ಯಾಸಕ್ಕೆಂದು ನಿರ್ಮಾಣವಾದ ಕ್ರೀಡಾಂಗಣವನ್ನು ಬೇರೆ ಬೇರೆ ಕಾರ್ಯಕ್ರಮ ಹಾಗೂ ಜನಸಾಮಾನ್ಯರು ಮುಂಜಾನೆ ವಾಕ್ ಮಾಡಲು ಅವಕಾಶ ನೀಡಲಾಗುತ್ತಿದೆ. ಇದರಿಂದ ಸಿಂಥೆಟಿಕ್ ಟ್ರ್ಯಾಕ್ ಸಂಪೂರ್ಣ ಹಾಳಾಗಿದ್ದು ನಮ್ಮ ಅಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಅಥ್ಲಿಟ್​ಗಳು ತಮ್ಮ ಅಳಲು ತೊಡಿಕೊಂಡಿದ್ದಾರೆ. ಕ್ರೀಡಾ ಇಲಾಖೆ ನಿರ್ಲಕ್ಷ್ಯದಿಂದಲೇ ಸಿಂಥೆಟಿಕ್ ಟ್ರ್ಯಾಕ್ ಹಾಳಾಗಿದೆ ಅಂತ ಕ್ರೀಡಾಪಟುಗಳು ಕೆಂಡಕಾರಿದ್ದಾರೆ.

ಕ್ರೀಡೆ ಬಗ್ಗೆ ಹೆಚ್ಚು ಆಸಕ್ತಿ ಇರುವ ಗದಗ ಶಾಸಕರೂ ಆದ ಸಚಿವ ಎಚ್ ಕೆ ಪಾಟೀಲ್ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದಾಗ 2.54ಕೋಟಿ ವೆಚ್ಚದಲ್ಲಿ ಅತ್ಯಾಧುನಿಕ ಸಿಂಥೆಟಿಕ್ ಟ್ರ್ಯಾಕ್ ನಿರ್ಮಾಣ ಮಾಡಿದ್ದರು. ಈ ಸಿಂಥೆಟಿಕ್ ಟ್ರ್ಯಾಕ್ ಗದಗ ಜಿಲ್ಲೆಯ ಅಥ್ಲೆಟಿಕ್ ಕ್ರೀಡಾಪಟುಗಳಿಗೆ ತುಂಬಾ ಅನಕೂಲ ಆಗಿತ್ತು. ಈ ಟ್ರ್ಯಾಕ್​ನಲ್ಲಿ ಓಡಿದ ಅಥ್ಲೆಟಿಕ್ ಕ್ರೀಡಾಪಟುಗಳು ಈಗ ರಾಜ್ಯ, ರಾಷ್ಟ್ರ, ಅಂತರಾಷ್ಟ್ರ ಮಟ್ಟದಲ್ಲಿ ಒಳ್ಳೆಯ ಹೆಸರು ಮಾಡಿದ್ದಾರೆ. ಆದರೆ ಈಗ ಈ ಸಿಂಥೆಟಿಕ್ ಟ್ರ್ಯಾಕ್ ಈಗ ಸಂಪೂರ್ಣ ಹಳ್ಳಹಿಡಿದಿದೆ. ಎಲ್ಲಿ ಬೇಕಾದಲ್ಲಿ ಟ್ರ್ಯಾಕ್ ಕಿತ್ತು ಹೋಗಿದೆ.

ಸಾರ್ವಜನಿಕರು ಬೇಕಾಬಿಟ್ಟಿ ಅಡ್ಡಾಡಲು ಅವಕಾಶ

ಈ ಸಿಂಥೆಟಿಕ್ ಟ್ರ್ಯಾಕ್​ನಲ್ಲಿ ಓಡಬೇಕು ಅಂದರೆ ಕಡ್ಡಾಯವಾಗಿ ಶೂ ಧರಿಸಿಯೇ ಓಡಬೇಕು. ಬರಿ ಗಾಲಿನಲ್ಲಿ, ಪಾದರಕ್ಷೆ ಹಾಕಿಕೊಂಡು ಈ ಟ್ರ್ಯಾಕ್​ನಲ್ಲಿ ಸುತ್ತಾಡುವಂತಿಲ್ಲ. ಆದರೆ, ಸಾರ್ವಜನಿಕರನ್ನು ಬೇಕಾಬಿಟ್ಟಿ ಅಡ್ಡಾಡಲು ಕ್ರೀಡಾ ಇಲಾಖೆ ಅವಕಾಶ ನೀಡಿದೆ. ಇಲ್ಲಿ ಬೆಳಗ್ಗೆ, ಸಂಜೆ ವೇಳೆ ಸಿಂಥೆಟಿಕ್ ಟ್ರ್ಯಾಕ್​ನಲ್ಲಿ ವಾಕಿಂಗ್ ಮಾಡಲು ನೂರಾರು ಜನರು ಆಗಮಿಸುತ್ತಾರೆ. ಹೀಗಾಗಿಯೇ ಟ್ರ್ಯಾಕ್ ಸಂಪೂರ್ಣ ಹದಗೆಟ್ಟಿದೆ. ಕೋಟ್ಯಾಂತರ ವೆಚ್ಚದಲ್ಲಿ ನಿರ್ಮಾದ ಆದ ಟ್ರ್ಯಾಕ್ ಹಾಳಾಗಲು ಕ್ರೀಡಾ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಅಂತ ಕ್ರೀಡಾಪ್ರೇಮಿ ಚಂದ್ರಕಾಂತ್ ಕ್ರೀಡಾ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ

ಸಿಂಥೆಟಿಕ್ ಟ್ರ್ಯಾಕ್ ಬೇರೆ ಯಾವುದೇ ಕಾರ್ಯಕ್ರಮಗಳಿಗೆ ಬಳಸುವಂತಿಲ್ಲ. ಆದರೆ, ಕ್ರೀಡಾ ಇಲಾಖೆ ಪ್ರಭಾವಿಗಳ ಒತ್ತಡಕ್ಕೆ ಮಣಿದು ಯುವ ಅಥ್ಲೆಟಿಕ್ ಕ್ರೀಡಾಪಟುಗಳ ಭವಿಷ್ಯಕ್ಕೆ ಕೊಳ್ಳೆ ಇಡುತ್ತಿದ್ದಾರೆ. ಬೇರೆ ಬೇರೆ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ನೀಡುವ ಮೂಲಕ ಕ್ರೀಡಾ ಇಲಾಖೆ ಅಧಿಕಾರಿಗಳು ಆಸ್ತಿ ಹಾಳು ಮಾಡುತ್ತಿದ್ದಾರೆ. ಇದು ಕ್ರೀಡಾಪಟುಗಳು, ಕ್ರೀಡಾಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಈ ಹಿಂದೆ ಉತ್ಸವ, ಕ್ರಿಕೆಟ್ ಟೋರ್ನಾಮೆಂಟ್​ಗೆ ಕ್ರೀಡಾ ಇಲಾಖೆ ನಿಯಮ ಉಲ್ಲಂಘಿಸಿ ಅನುಮತಿ ನೀಡಿದ್ದಾರೆ. ಈ ಕಾರ್ಯಕ್ರಮಗಳಿಗೆ ಸಾವಿರಾರು ಜನರು ಜಮಾಯಿಸಿದ ಕಾರಣಕ್ಕೆ ಸಿಂಥೆಟಿಕ್ ಟ್ರ್ಯಾಕ್ ಸಂಪೂರ್ಣ ಹಾಳಾಗಿ ಹೋಗಿದೆ.

ಹಾನಿಯಾದ ಟ್ರ್ಯಾಕ್​ನಲ್ಲೇ ಪ್ರ್ಯಾಕ್ಟಿಸ್

ಹೀಗಾಗಿ ಯುವ ಅಥ್ಲೆಟಿಕ್ ಕ್ರೀಡಾಪಟುಗಳ ತರಬೇತಿಗೆ ತೀವ್ರ ಸಮಸ್ಯೆಯಾಗಿದೆ. ಕ್ರೀಡಾಪಟುಗಳಿಗೆ ಸಮಸ್ಯೆ ಆಗ್ತಾಯಿದ್ರೂ ಯಾರೂ ಬಾಯಿ ಬಿಡ್ತಾಯಿಲ್ಲ. ಎಲ್ಲ ನಮ್ಮ ಭವಿಷ್ಯಕ್ಕೆ ಕಲ್ಲು ಬಿಳುತ್ತೋ ಅನ್ನೋ ಆತಂಕದಲ್ಲೇ ಹಾನಿಯಾದ ಟ್ರ್ಯಾಕ್​ನಲ್ಲೇ ಪ್ರ್ಯಾಕ್ಟಿಸ್ ಮಾಡುತ್ತಿದ್ದಾರೆ. ಕ್ರೀಡಾಂಗಣದಲ್ಲಿ ನೀರಿಲ್ಲ. ಟ್ರ್ಯಾಕ್ ನಿರ್ವಹಣೆ ಮಾಡ್ತಾಯಿಲ್ಲ. ಸಿಂಥೆಟಿಕ್ ಟ್ರ್ಯಾಕ್​ನಲ್ಲಿ ನೀರು ಹಾಕಿಯೇ ಓಡಬೇಕು. ಇಲ್ಲದಿದ್ದರೆ ಕ್ರೀಡಾಪಟುಗಳು ಕಾಲು ನೋವಿಗೆ ತುತ್ತಾಗುತ್ತಾರೆ ಎಂದು ಕ್ರೀಡಾಪಟು ಶಶಿಕಾಂತ ನೋವು ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರಿಗೆ ಅವಕಾಶ ನೀಡಬಾರದು

ಅಥ್ಲೆಟಿಕ್ಸಗಳಿಗೆ ಕ್ರೀಡಾಂಗಣದಲ್ಲಿ ಪ್ರ್ಯಾಕ್ಟಿಸ್​ಗೆ ಸರಿಯಾಗಿ ಅವಕಾಶ ಸಿಗುತ್ತಿಲ್ಲ. ಸಾಕಷ್ಟು ಜನ ವಾಕರ್ಸ್​ಗಳು ಬಂದು ವಾಕ್ ಮಾಡುತ್ತಾರೆ. ಹೀಗಾಗಿ ಕ್ರೀಡಾಪಟಗಳಿಗೆ ಉಪಯೋಗ ಆಗುತ್ತಿಲ್ಲ ಅಂತ ಆಕ್ರೋಶ ಹೊರಹಾಕಿದ್ದಾರೆ. ರಾಷ್ಟ್ರ, ಅಂತರಾಷ್ಟ್ರ ಮಟ್ಟಕ್ಕೆ ಕ್ರೀಡಾಪಟುಗಳು ನೀಡಿದ ಟ್ರ್ಯಾಕ್​ನ ಸ್ಥಿತಿ ನೋಡಿ ಕ್ರೀಡಾಪಟುಗಳು ಮಮ್ಮಲಮರುಗುತ್ತಿದ್ದಾರೆ. ಈ ಟ್ರ್ಯಾಕ್ ಯಾವ ಉದ್ದೇಶಕ್ಕೆ ನಿರ್ಮಾಣ ಆಗಿದೆಯೋ ಅದೇ ಉದ್ದೇಶಕ್ಕೆ ಬಳಸಬೇಕು. ಅಥ್ಲೆಟಿಕ್ಸ್​ಗಳಿಗೆ ಉಪಯೋಗ ಆಗಬೇಕಾದರೆ, ಸಾರ್ವಜನಿಕರಿಗೆ ಅವಕಾಶ ನೀಡಬಾರದು ಎಂದು ಕ್ರೀಡಾಪಟುಗಳು ಒತ್ತಾಯಿಸಿದ್ದಾರೆ. ಇನ್ನಾದರೂ ಕ್ರೀಡಾ ಇಲಾಖೆ ಅಧಿಕಾರಿಗಳು, ಸಚಿವರು, ಜಿಲ್ಲಾಡಳಿತ ಎಚ್ಚೆತ್ತುಕೊಂಡು ಜಿಲ್ಲೆಯ ಕ್ರೀಡಾಪಟುಗಳ ಭವಿಷ್ಯ ದಾರಿ ಮಾಡಿಕೊಡುತ್ತಾ ಅಂತ ಕಾದುನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 1:26 pm, Fri, 24 November 23

ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಜಾಮೀನು ಸಿಕ್ಕರೂ ಪರಪ್ಪನ ಅಗ್ರಹಾರದ ಕಡೆಗೆ ವಿನಯ್, ರಜತ್
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಕೊಲೆಗೆ ಸುಪಾರಿ ಮತ್ತು ಹನಿ ಟ್ರ್ಯಾಪ್-ಎರಡೂ ಭಿನ್ನ ಪ್ರಕರಣಗಳು: ರಾಜೇಂದ್ರ
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
ಯತ್ನಾಳ್ ಸಾಹೇಬರು ಇಲ್ಲಾಂದ್ರೆ ನಾವೂ ಪಕ್ಷದಲ್ಲಿಲ್ಲ: ಪದಾಧಿಕಾರಿಗಳು
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
Instant Karma: ನಾಯಿಗೆ ಒದೆಯಲು ಹೋಗಿ ಹೇಗ್ ಬಿದ್ದಾ ನೋಡಿ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ಮ್ಯಾನ್ಮಾರ್‌ನಲ್ಲಿ ಭೀಕರ ಭೂಕಂಪ: ಭಾರತದ ಈಶಾನ್ಯ ರಾಜ್ಯಗಳಿಗಿಲ್ಲ ಆತಂಕ
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ರಾಜೇಂದ್ರ ನೀಡಿದ ದೂರನ್ನು ಗೃಹ ಸಚಿವ ನೋಡಿಕೊಳ್ಳುತ್ತಾರೆ: ಶಿವಕುಮಾರ್
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ
ತೀವ್ರ ಕುತೂಹಲ ಮೂಡಿಸಿರುವ ಬಸನಗೌಡ ಯತ್ನಾಳ್ ಮುಂದಿನ ನಡೆ