AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ..!

ಕೋಲ್ಕತ್ತಾದ ನಗರ ಭಾಗದಲ್ಲಿರುವ ಈಡನ್ ಗಾರ್ಡನ್ಸ್ ಕ್ರೀಡಾಂಗಣವು ಭಾರತದ ಅತ್ಯಂತ ಹಳೆಯ ಮತ್ತು ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಡೇಡಿಯಂ ಆಗಿದೆ. ಹಾಗೆಯೇ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ. ಈ ಸ್ಟೇಡಿಯಂ ಅನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ "ಲಾರ್ಡ್ಸ್ ಆಫ್ ದಿ ಸಬ್​ಕಾಂಟಿನೆಂಟ್" ಎಂದು ವರ್ಣಿಸಿದ್ದರು.

ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ಯುವಕ ಆತ್ಮಹತ್ಯೆ..!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 18, 2023 | 1:21 PM

Share

ಕೊಲ್ಕತ್ತಾದ ಈಡನ್ ಗಾರ್ಡನ್ಸ್ (Eden Gardens) ಸೇಡಿಯಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಸೋಮವಾರ ಬೆಳಿಗ್ಗೆ ಸ್ಟೇಡಿಯಂ ಸಿಬ್ಬಂದಿ ಆಗಮಿಸಿದಾಗ, ಗ್ಯಾಲರಿಯಲ್ಲಿ ಯುವಕ ಶವ ನೇತಾಡುತ್ತಿರುವುದು ಕಂಡು ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಆ ಬಳಿಕ ಮೃತದೇಹವನ್ನು ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಯಿತು.

ಪೊಲೀಸ್ ಮೂಲಗಳ ಮಾಹಿತಿ ಪ್ರಕಾರ ಮೃತ ಯುವಕನ ಹೆಸರು ಧನಂಜಯ್ ಬಾರಿಕ್. 21 ವರ್ಷದ ಯುವಕ ಒಡಿಶಾದ ಭದ್ರಕ್ ಜಿಲ್ಲೆಯ ನಿವಾಸಿ. ಅವರ ತಂದೆ ಗಣೇಶ್ ಚಂದ್ರ ಬಾರಿಕ್ ಈಡನ್‌ನ ಗ್ರೌಂಡ್ ಸ್ಟಾಫ್ ಆಗಿ ಕೆಲಸ ಮಾಡುತ್ತಿದ್ದಾರೆ.

ಒಡಿಶಾದಿಂದ ಕೆಲಸ ಅರಸಿ ಕೋಲ್ಕತ್ತಾಗೆ ಬಂದಿದ್ದ ಧನಂಜಯ್​ ಈಡನ್ ಗಾರ್ಡನ್ಸ್​ ಸಿಬ್ಬಂದಿಗಳ ಕ್ವಾರ್ಟರ್ಸ್‌ನಲ್ಲಿ ತಂಗಿದ್ದರು. ಆದರೆ ಆತನಿಗೆ ಎಲ್ಲೂ ಉದ್ಯೋಗ ಸಿಕ್ಕಿರಲಿಲ್ಲ. ಇದರಿಂದ ಧನಂಜಯ್ ನಿರಾಶೆಗೊಂಡಿದ್ದ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಆದಾಗ್ಯೂ, ಇದು ನಿಜವಾಗಿಯೂ ಆತ್ಮಹತ್ಯೆ ಪ್ರಕರಣವೇ ಅಥವಾ ದುರ್ಘಟನೆಯ ಹಿಂದೆ ಯಾವುದಾದರೂ ಬೇರೆ ಕಾರಣವಿದೆಯೇ ಎಂಬುದರ ಕುರಿತು ತನಿಖೆಯನ್ನು ಪ್ರಾರಂಭಿಸಿದ್ದೇವೆ ಎಂದು ಕೊಲ್ಕತ್ತಾ ನಗರ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಡನ್ ಗಾರ್ಡನ್ಸ್ ಸ್ಟೇಡಿಯಂ ವಿಶೇಷತೆ:

ಕೋಲ್ಕತ್ತಾದ ನಗರ ಭಾಗದಲ್ಲಿರುವ ಈಡನ್ ಗಾರ್ಡನ್ಸ್ ಕ್ರೀಡಾಂಗಣವು ಭಾರತದ ಅತ್ಯಂತ ಹಳೆಯ ಮತ್ತು ಎರಡನೇ ಅತಿದೊಡ್ಡ ಕ್ರಿಕೆಟ್ ಸ್ಡೇಡಿಯಂ ಆಗಿದೆ. ಹಾಗೆಯೇ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ.

ಇದನ್ನೂ ಓದಿ: IPL 2024: ರೋಹಿತ್ ಶರ್ಮಾ ಮೇಲೆ ಕಣ್ಣಿಟ್ಟ ಗುಜರಾತ್ ಟೈಟಾನ್ಸ್

ಈ ಸ್ಟೇಡಿಯಂ ಅನ್ನು ಆಸ್ಟ್ರೇಲಿಯಾದ ಮಾಜಿ ನಾಯಕ ಸ್ಟೀವ್ ವಾ ‘ಲಾರ್ಡ್ಸ್ ಆಫ್ ದಿ ಸಬ್​ಕಾಂಟಿನೆಂಟ್” ಎಂದು ವರ್ಣಿಸಿದ್ದರು. ಲಂಡನ್‌ನ ಐಕಾನಿಕ್ ಲಾರ್ಡ್ಸ್ ಕ್ರಿಕೆಟ್ ಮೈದಾನಕ್ಕೆ ಸಮಾನಾಂತರವಾಗಿ ನಿಲ್ಲಬಲ್ಲ ಕ್ರೀಡಾಂಗಣ ಎಂದು ಬಣ್ಣಿಸಿದ್ದರು. 1864 ರಲ್ಲಿ ಸ್ಥಾಪಿತವಾದ ಈ ಕ್ರೀಡಾಂಗಣವು 68,000 ಪ್ರೇಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ ಕೊಲ್ಕತ್ತಾ ನೈಟ್ ರೈಡರ್ಸ್​ ತಂಡ ತವರು ಮೈದಾನವಾಗಿ ಈಡನ್ ಗಾರ್ಡನ್ಸ್ ಗುರುತಿಸಿಕೊಂಡಿದೆ.

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ