ಚೆನ್ನೈ ಉದ್ಯಮಿ ವಿರುದ್ಧ ವಂಚನೆ ಆರೋಪ: ಹರ್ಭಜನ್ ಸಿಂಗ್ರಿಂದ ದೂರು ದಾಖಲು
ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. 2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ. ಹೀಗಾಗಿ, ಹರ್ಭಜನ್ […]

ದೆಹಲಿ: ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನಿಂದ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಟೀಂ ಇಂಡಿಯಾದ ಖ್ಯಾತ ಆಫ್ ಸ್ಪಿನ್ನರ್ ಹರ್ಭಜನ್ ಸಿಂಗ್ ಆರೋಪಿಸಿದ್ದಾರೆ. ಈ ಕುರಿತು ಹರ್ಭಜನ್ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.

2015 ರಲ್ಲಿ ಚೆನ್ನೈ ಮೂಲದ ಉದ್ಯಮಿಯೊಬ್ಬರು ನನ್ನ ಬಳಿ 4 ಕೋಟಿ ರೂಪಾಯಿ ಮೊತ್ತವನ್ನು ಸಾಲವಾಗಿ ಪಡೆದಿದ್ದರು. ಆದರೆ, ನಾನು ಎಷ್ಟು ಬಾರಿ ಕೇಳಿದರೂ ಅವರು ಸಾಲದ ಮೊತ್ತ ಹಿಂದಿರುಗಿಸುತ್ತಿಲ್ಲ ಅಂತಾ ಹರ್ಭಜನ್ ಆರೋಪಿಸಿದ್ದಾರೆ.
ಹೀಗಾಗಿ, ಹರ್ಭಜನ್ ತಮಗೆ ವಂಚೆನ ಆಗಿದೆ ಎಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ದೂರು ದಾಖಲಾದ ಬೆನ್ನಲ್ಲೇ, ಬಂಧನದ ಭೀತಿ ಎದುರಿಸುತ್ತಿರುವ ಉದ್ಯಮಿ ಮದ್ರಾಸ್ ಹೈಕೋರ್ಟ್ನ ಮೊರೆ ಹೋಗಿ ನಿರೀಕ್ಷಣಾ ಜಾಮೀನಿಗೆ ಮನವಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ದೊರೆತಿದೆ.
Published On - 6:41 pm, Thu, 10 September 20