AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ದಿಕ್​ ಮೇಲೆ ಸಿಟ್ಟಾದ ಕೊಹ್ಲಿ; ವಿರಾಟ್​ರನ್ನು ಕೂಲ್ ಮಾಡಿದ ಧವನ್​ಗೆ ಪಾಂಡ್ಯ ಮೈದಾನದಲ್ಲೇ ದೀರ್ಘದಂಡ ನಮಸ್ಕಾರ

ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಟೀಂ ಇಂಡಿಯಾ ಉತ್ತಮ ಆರಂಭ ಕಂಡಿತ್ತು. 103ರನ್​ ಗಳಿಸಿ ರೋಹಿತ್​-ಧವನ್​ ಆಡುತ್ತಿದ್ದರು. ಈ ವೇಳೆ ರೋಹಿತ್ (37) ಬೋಲ್ಡ್​ ಆದರು.

ಹಾರ್ದಿಕ್​ ಮೇಲೆ ಸಿಟ್ಟಾದ ಕೊಹ್ಲಿ; ವಿರಾಟ್​ರನ್ನು ಕೂಲ್ ಮಾಡಿದ ಧವನ್​ಗೆ ಪಾಂಡ್ಯ ಮೈದಾನದಲ್ಲೇ ದೀರ್ಘದಂಡ ನಮಸ್ಕಾರ
ಹಾರ್ದಿಕ್​ ಪಾಂದ್ಯ
ರಾಜೇಶ್ ದುಗ್ಗುಮನೆ
|

Updated on:Mar 28, 2021 | 7:30 PM

Share

ಭಾರತ ಮತ್ತು ಇಂಗ್ಲೆಂಡ್​ ನಡುವಣ ಅಂತಿಮ ಏಕದಿನ ಪಂದ್ಯದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಹಾರ್ದಿಕ್​ ಪಾಂಡ್ಯ ಅವರು ಶಿಖರ್​ ಧವನ್​ಗೆ ದೀರ್ಘದಂಡ ನಮಸ್ಕಾರ ಮಾಡಿದ್ದಾರೆ. ಸದ್ಯ, ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ಇದನ್ನು ನೋಡಿದವರೆಲ್ಲ ನಕ್ಕಿದ್ದಾರೆ. ಟಾಸ್​ ಸೋತು ಮೊದಲು ಬ್ಯಾಟಿಂಗ್​ಗೆ ಇಳಿದ ಟೀಂ ಇಂಡಿಯಾ ಉತ್ತಮ ಆರಂಭ ಕಂಡಿತ್ತು. 103ರನ್​ ಗಳಿಸಿ ರೋಹಿತ್​-ಧವನ್​ ಆಡುತ್ತಿದ್ದರು. ಈ ವೇಳೆ ರೋಹಿತ್ (37) ಬೋಲ್ಡ್​ ಆದರೆ, ನಂತರ ಧವನ್ (67)​, ನಾಯಕ ವಿರಾಟ್​ ಕೊಹ್ಲಿ (7) ರಾಹುಲ್​ (7) ಕೂಡ ವಿಕೆಟ್​ ಒಪ್ಪಿಸಿದರು. ಟೀಂ ಇಂಡಿಯಾ ಸಂಕಷ್ಟದಲ್ಲಿರುವಾಗಲೇ ರಿಷಬ್​ ಪಂತ್​ ಹಾಗೂ ಹಾರ್ದಿಕ್​ ಪಾಂಡ್ಯ ಜಾಗರೂಕ ಜತೆಯಾಟ ಆಡಿದರು. ಅಂತಿಮವಾಗಿ ಟೀಂ ಇಂಡಿಯಾ ತನ್ನೆಲ್ಲಾ ವಿಕೆಟ್​ ಕಳೆದುಕೊಂಡು 329ರನ್​ ಗಳಿಸಿತು.

330ರನ್​ಗಳ ಬೃಹತ್ ಗುರಿ ಬೆನ್ನು ಹತ್ತಿದ ಆಂಗ್ಲ ಪಡೆಗೆ ಆರಂಭದಲ್ಲೇ ಆಘಾತ ಎದುರಾಗಿತ್ತು. ಮೊದಲ ಓವರ್​ನಲ್ಲೇ ದಾಳಿಗೆ ಇಳಿದಿದ್ದ ಜೇಸನ್​ ರಾಯ್​ 14 ರನ್​ಗೆ ಔಟ್​ ಆದರು. ನಂತರ ಜಾನಿ ಬೇರ್​ಸ್ಟೋ (1) ಕೂಡ ಪೆವಿಲಿಯನ್​ ಸೇರುವ ಮೂಲಕ ಟೀಂ ಇಂಡಿಯಾವನ್ನು ನಿರಾಳ ಮಾಡಿದರು. ಈ ವೇಳೆ ಹೊಡಿಬಡಿ ಆಟಕ್ಕೆ ಮುಂದಾಗಿದ್ದರು ಬೆನ್​ ಸ್ಟೋಕ್ಸ್​. ಆದರೆ, ಬೀಸುವ ಅಬ್ಬರದಲ್ಲಿ ಅವರು ಎಚ್ಚರ ತಪ್ಪಿದ್ದರು.

ಅವರು ಹೊಡೆದ ಶಾಟ್​ ನೇರವಾಗಿ ಹಾರ್ದಿಕ್​ ಪಾಂಡ್ಯ ಕೈ ಸೇರಿತ್ತು. ಆದರೆ, ಅವರು ಸುಲಭ ಕ್ಯಾಚನ್ನು ಕೈಚೆಲ್ಲಿದರು. ಅವರು ಕ್ಯಾಚ್​ ಬಿಡುತ್ತಿದ್ದಂತೆ ಸ್ಟೋಕ್ಸ್​ ನಿರಾಳರಾದರು. ರೋಹಿತ್​ ತಲೆಮೇಲೆ ಕೈ ಹೊತ್ತು ಕುಳಿತರೆ, ವಿರಾಟ್​ ಕೊಹ್ಲಿ ಸಿಟ್ಟಾದರು. ಮಾಡಿದ ತಪ್ಪಿಗೆ ಹಾರ್ದಿಕ್​ ದೊಡ್ಡದಾಗಿ ಕೈ ಮುಗಿದು ಕ್ಷಮೆ ಕೇಳಿದರು.

ಕೆಲ ಓವರ್​ಗಳ ನಂತರ ಬೆನ್​ ಸ್ಟೋಕ್ಸ್​ ಹೊಡೆದ ಶಾಟ್​ ನೇರವಾಗಿ ಧವನ್​ ಕೈ ಸೇರಿತ್ತು. ಇದನ್ನು ಧವನ್​ ಅದ್ಭುತವಾಗಿ ಹಿಡಿದು ತೊಡೆ ತಟ್ಟಿದರು. ಕೊಹ್ಲಿ ಕೂಡ ನಕ್ಕರು. ಈ ವೇಳೆ ಎಲ್ಲರಿಗಿಂತ ಹೆಚ್ಚು ಖುಷಿ ಆಗಿದ್ದು ಹಾರ್ದಿಕ್​. ಅವರು ತಾವಿದ್ದಲ್ಲಿಂದಲೇ ದೀರ್ಘ ದಂಡ ನಮಸ್ಕಾರ ಹಾಕಿ ಬಿಟ್ಟರು. ಸದ್ಯ, ಈ ವಿಡಿಯೋ ಸಾಕಷ್ಟು ವೈರಲ್​ ಆಗಿದೆ.

ಇದನ್ನೂ ಓದಿ:  India vs England: ನಾನೆಂದಿಗೂ ಶತಕಗಳಿಗೋಸ್ಕರ ಆಡಿದವನಲ್ಲ! ನಿವೃತ್ತಿಯ ಬಳಿಕ ಅಂಕಿ- ಅಂಶ ಗಣನೆಗೆ ಬರುವುದಿಲ್ಲ: ಕಿಂಗ್ ಕೊಹ್ಲಿ

Published On - 7:27 pm, Sun, 28 March 21

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!