AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್​ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್!

Tokyo Paralympics: ನಿಶಾದ್ ಕುಮಾರ್ ಪುರುಷರ ಟಿ 47 ಎತ್ತರ ಜಿಗಿತದಲ್ಲಿ 2.06 ಮೀಟರ್ ಜಿಗಿದು ಭಾರತಕ್ಕೆ ಪದಕ ಗೆದ್ದಿದ್ದಾರೆ. ಅವರು ಎರಡನೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದರು.

Tokyo Paralympics: ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತಕ್ಕೆ ಮತ್ತೊಂದು ಪದಕ; ಹೈಜಂಪ್​ನಲ್ಲಿ ಬೆಳ್ಳಿ ಗೆದ್ದ ನಿಶಾದ್ ಕುಮಾರ್!
ನಿಶಾದ್ ಕುಮಾರ್
TV9 Web
| Updated By: ಪೃಥ್ವಿಶಂಕರ|

Updated on:Aug 29, 2021 | 5:48 PM

Share

ಟೋಕಿಯೊ ಪ್ಯಾರಾಲಿಂಪಿಕ್ಸ್ -2020 ರಲ್ಲಿ ಭಾರತಕ್ಕೆ ಮತ್ತೊಂದು ಪದಕ ಬಂದಿದೆ. ಹೈಜಂಪ್ ಆಟಗಾರ ನಿಶಾದ್ ಕುಮಾರ್ ಭಾರತಕ್ಕೆ ಬೆಳ್ಳಿ ಪದಕ ಗೆದ್ದಿದ್ದಾರೆ. ನಿಶಾದ್ ಕುಮಾರ್ ಪುರುಷರ ಟಿ 47 ಎತ್ತರ ಜಿಗಿತದಲ್ಲಿ 2.06 ಮೀಟರ್ ಜಿಗಿದು ಭಾರತಕ್ಕೆ ಪದಕ ಗೆದ್ದಿದ್ದಾರೆ. ನಿಶಾದ್ ತಮ್ಮ ಎರಡನೇ ಪ್ರಯತ್ನದಲ್ಲಿ ಈ ಸಾಧನೆ ಮಾಡಿದರು. ಈ ಜಿಗಿತದೊಂದಿಗೆ, ಅವರು ಏಷ್ಯನ್ ದಾಖಲೆಯನ್ನು ಸರಿಗಟ್ಟಿದರು. ಈ ಕ್ರೀಡಾಕೂಟದಲ್ಲಿ ಭಾರತಕ್ಕೆ ಇದು ಎರಡನೇ ಪದಕವಾಗಿದೆ. ನಿಶಾದ್​ಗೂ ಮೊದಲು, ಭಾರತೀಯ ಮಹಿಳಾ ಟೇಬಲ್ ಟೆನಿಸ್ ಆಟಗಾರ್ತಿ ಭಾವಿನಾಬೆನ್ ಪಟೇಲ್ ಕೂಡ ಬೆಳ್ಳಿ ಪದಕ ಗೆದ್ದಿದ್ದರು. ಅಮೆರಿಕದ ಟೌನ್ಸೆಂಡ್ ರೋಡೆರಿಕ್ 2.15 ಮೀಟರ್ ಎತ್ತರದ ವಿಶ್ವ ದಾಖಲೆಯ ಜಿಗಿತದೊಂದಿಗೆ ಚಿನ್ನದ ಪದಕ ಗೆದ್ದರು. ಮೂರನೇ ಸ್ಥಾನವನ್ನು 2.06 ಮೀಟರ್ ಜಿಗಿದ ಅಮೆರಿಕದ ವೆಸೆ ಡಲ್ಲಾಸ್ ಪಡೆದುಕೊಂಡರು.

ರಾಂಪಾಲ್​ಗೆ ಐದನೇ ಸ್ಥಾನ ನಿಶಾದ್ ಹೊರತುಪಡಿಸಿ, ಇನ್ನೊಬ್ಬ ಭಾರತೀಯ ಆಟಗಾರ ರಾಂಪಾಲ್ ಕೂಡ ಕ್ರೀಡಾಕೂಟದ ಈ ವಿಭಾಗದಲ್ಲಿ ಭಾಗವಹಿಸಿದ್ದರು. ಅವರು 1.94 ಮೀಟರ್ ಎತ್ತರ ಜಿಗಿಯುವುದರ ಮೂಲಕ ಐದನೇ ಸ್ಥಾನ ಪಡೆದರು.ಇದು ಅವರ ವೈಯಕ್ತಿಕ ಅತ್ಯುತ್ತಮ ದಾಖಲೆಯಾಗಿದೆ.

ಪಿಎಂ ಅಭಿನಂದನೆ ನಿಶಾದ್ ಯಶಸ್ಸಿನ ನಂತರ, ಪಿಎಂ ನರೇಂದ್ರ ಮೋದಿ ಕೂಡ ಅವರನ್ನು ಅಭಿನಂದಿಸಿದ್ದಾರೆ. ಪಿಎಂ ಟ್ವೀಟ್ ಮಾಡಿ, “ಟೋಕಿಯೊದಿಂದ ಮತ್ತೊಂದು ಒಳ್ಳೆಯ ಸುದ್ದಿ ಬಂದಿದೆ. ಪುರುಷರ ಹೈಜಂಪ್ ಟಿ 47 ವಿಭಾಗದಲ್ಲಿ ನಿಶಾದ್ ಬೆಳ್ಳಿ ಪದಕ ಗೆದ್ದಿದ್ದಾರೆ. ಅವರು ಹೋಲಿಸಲಾಗದ ಸಾಮರ್ಥ್ಯ ಹೊಂದಿರುವ ಅತ್ಯಂತ ಪ್ರತಿಭಾವಂತ ಆಟಗಾರ. ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.

Published On - 5:37 pm, Sun, 29 August 21

‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..