AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಬಾರಿ ಚೆಸ್ ವಿಶ್ವಕಪ್ ಗೆದ್ದಿದ್ದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್

Viswanathan Anand: ವಿಶ್ವನಾಥನ್ ಆನಂದ್ ಅವರ ಈ ಕ್ರಾಂತಿಯ ಹೊಸ ಅಧ್ಯಾಯದೊಂದಿಗೆ ಆರ್​. ಪ್ರಜ್ಞಾನಂದ ಚದುರಂಗದಾಟದಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿದ್ದಾರೆ. ಅಲ್ಲದೆ ತಮ್ಮ 18ನೇ ವಯಸ್ಸಿನಲ್ಲೇ ಚೆಸ್​ ವಿಶ್ವಕಪ್​ನಲ್ಲಿ ಫೈನಲ್​ಗೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

2 ಬಾರಿ ಚೆಸ್ ವಿಶ್ವಕಪ್ ಗೆದ್ದಿದ್ದ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್
Viswanathan Anand
TV9 Web
| Edited By: |

Updated on: Aug 24, 2023 | 5:29 PM

Share

ವಿಶ್ವ ಚಾಂಪಿಯನ್​ ವಿಶ್ವನಾಥನ್ ಆನಂದ್…ಭಾರತದಲ್ಲಿ ಏಕಾಂಗಿಯಾಗಿ ಚೆಸ್ ಕ್ರಾಂತಿಯನ್ನು ಹುಟ್ಟುಹಾಕಿದ ಚದುರಂಗ ಚತುರ ಎಂದರೆ ತಪ್ಪಾಗಲಾರದು. ಏಕೆಂದರೆ ಚೆಸ್​ ಅನ್ನು ಜಗತ್ತಿಗೆ ಪರಿಚಯಿಸಿದ ಭಾರತೀಯರಾದರೂ, ಚದುರಂಗದಾಟದಲ್ಲಿ ಜಾಣ್ಮೆಯ ನಡೆಯೊಂದಿಗೆ ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪಾತಾಕೆಯನ್ನು ಹಾರಿಸಿದ್ದು ವಿಶ್ವನಾಥನ್ ಆನಂದ್.

ವಿಶ್ವ ವಿಖ್ಯಾತ ಚದುರಂಗ ಚತುರರು ಎನಿಸಿಕೊಂಡಿದ್ದ ಉಕ್ರೇನ್​ನ ರುಸ್ಲಾನ್ ಪೊನೊಮರಿವ್, ರಷ್ಯಾದ ವ್ಲಾಡಿಮಿರ್ ಬೊರಿಸೊವಿಚ್ ಕ್ರಾಮ್ನಿಕ್ ಅವರಿಗೆ ಸೋಲುಣಿಸುವ ಮೂಲಕ ವಿಶ್ವನಾಥನ್ ಆನಂದ್ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿದ್ದರು. ಈ ಅಧ್ಯಾಯದ ಮುಂದುವರೆದ ಭಾಗ ಇದೀಗ 18ರ ಹರೆಯದ ರಮೇಶ್​ಬಾಬು ಪ್ರಜ್ಞಾನಂದ ಅವರ ಫೈನಲ್​ ಸಾಧನೆ.

ಆದರೆ ಆರ್​. ಪ್ರಜ್ಞಾನಂದ ಚೆಸ್ ವಿಶ್ವಕಪ್​ನಲ್ಲಿ ಫೈನಲ್​ಗೇರುವ 20 ವರ್ಷಗಳ ಮುಂಚೆಯೇ ಗ್ರ್ಯಾಂಡ್ ಮಾಸ್ಟರ್​ ವಿಶ್ವನಾಥನ್ ಆನಂದ್ 2 ಬಾರಿ ಚೆಸ್ ವಿಶ್ವಕಪ್​ನಲ್ಲಿ ಚಾಂಪಿಯನ್ ಆಗಿದ್ದರು ಎಂಬುದು ಅನೇಕರಿಗೆ ತಿಳಿದಿಲ್ಲ.

2000 ರಲ್ಲಿ ಬೀಜಿಂಗ್​ನಲ್ಲಿ ನಡೆದ ಮೊದಲ ಚೆಸ್ ವಿಶ್ವಕಪ್​ನಲ್ಲಿ ಸೋವಿಯತ್ ಒಕ್ಕೂಟದ ಎವ್ಗೆನಿ ಬರೀವ್ ಅವರನ್ನು ಮಣಿಸುವ ಮೂಲಕ ವಿಶ್ವನಾಥನ್ ಆನಂದ್ ಚೊಚ್ಚಲ ವಿಶ್ವಕಪ್​ ಗೆದ್ದಿದ್ದರು.

ಇನ್ನು 2002 ರಲ್ಲಿ ಹೈದರಾಬಾದ್​ನಲ್ಲಿ ನಡೆದ ಚೆಸ್ ವಿಶ್ವಕಪ್​ನಲ್ಲಿ ವಿಶ್ವನಾಥನ್ ಆನಂದ್ ಚಾಂಪಿಯನ್ ಪಟ್ಟದೊಂದಿಗೆ ಕಾಣಿಸಿಕೊಂಡಿದ್ದರು. ಅಲ್ಲದೆ ಫೈನಲ್​ನಲ್ಲಿ ಸೋವಿಯತ್ ಒಕ್ಕೂಟ ಗ್ರ್ಯಾಂಡ್ ಮಾಸ್ಟರ್​ ರುಸ್ತಮ್ ಕಾಸಿಮ್ಜಾನೋವ್ ಅವರಿಗೆ ಅನಿರೀಕ್ಷಿತ ಸೋಲುಣಿಸಿ 2ನೇ ಬಾರಿಗೆ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು.

ಈ ಎರಡು ವಿಶ್ವ ಚಾಂಪಿಯನ್ ಪಟ್ಟಕ್ಕಿಂತಲೂ ಮುನ್ನ ವಿಶ್ವನಾಥನ್ ಆನಂದ್ 1998 ರಲ್ಲಿ ಏಷ್ಯನ್ ಚಾಂಪಿಯನ್ ಆಗಿದ್ದರು. ಹಾಗೆಯೇ ಚೆಸ್ ವಿಶ್ವಕಪ್ ಅಲ್ಲದೆ ವಿಶ್ವನಾಥನ್ ಆನಂದ್ ಅವರು 2007, 2008, 2010, 2012 ರಲ್ಲಿ ಕ್ಲಾಸಿಕ್ ವರ್ಲ್ಡ್​ ಚಾಂಪಿಯನ್​ಶಿಪ್​ನಲ್ಲಿ 4 ಬಾರಿ ವಿಶ್ವ ಚಾಂಪಿಯನ್​ ಆಗಿ ಹೊರಹೊಮ್ಮಿದ್ದರು.

ಇದೀಗ ಈ ಕ್ರಾಂತಿಯ ಹೊಸ ಅಧ್ಯಾಯದೊಂದಿಗೆ ಆರ್​. ಪ್ರಜ್ಞಾನಂದ ಚದುರಂಗದಾಟದಲ್ಲಿ ಹೊಸ ಸಂಚಲನ ಸೃಷ್ಟಿಸುತ್ತಿದ್ದಾರೆ. ತಮ್ಮ 18ನೇ ವಯಸ್ಸಿನಲ್ಲೇ ಚೆಸ್​ ವಿಶ್ವಕಪ್​ನಲ್ಲಿ ಫೈನಲ್​ಗೇರುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ವಿಶ್ವ ಚೆಸ್​ನಲ್ಲಿ ಭಾರತೀಯರ ಪಾರುಪತ್ಯ:

ಅಝರ್​ಬೈಜಾನ್​ನಲ್ಲಿ ನಡೆದ ಈ ಬಾರಿಯ ಚೆಸ್ ವಿಶ್ವಕಪ್​ನ ಕ್ವಾರ್ಟರ್​ಫೈನಲ್​ನಲ್ಲಿ ನಾಲ್ವರು ಭಾರತೀಯರು ಕಾಣಿಸಿಕೊಂಡಿದ್ದರು ಎಂಬುದು ವಿಶೇಷ. ಡಿ ಗುಕೇಶ್ , ಅರ್ಜುನ್ ಎರಿಗೈಸಿ, ವಿದಿತ್ ಗುಜರಾತಿ ಮತ್ತು ಆರ್​. ಪ್ರಜ್ಞಾನಂದ ಅತ್ಯುತ್ತಮ ಪ್ರದರ್ಶನದ ಮೂಲಕ ನಿರ್ಣಾಯಕ ಹಂತಕ್ಕೇರಿದ್ದರು. ಇವರಲ್ಲಿ ಜಾಣ ನಡೆಯೊಂದಿಗೆ ಎಲ್ಲಾ ಸವಾಲುಗಳನ್ನು ಮೆಟ್ಟಿ ನಿಂತ ಆರ್​. ಪ್ರಜ್ಞಾನಂದ ವಿಶ್ವಕಪ್​ ಫೈನಲ್​ ಆಡಿದ್ದರು.

ಆದರೆ ಅಂತಿಮ ಹಣಾಹಣಿಯಲ್ಲಿ ಮ್ಯಾಗ್ನಸ್ ಕಾರ್ಲ್​ಸೆನ್ ವಿರುದ್ದ ವಿರೋಚಿತವಾಗಿ ಸೋಲೊಪ್ಪಿಕೊಳ್ಳಬೇಕಾಯಿತು. ಇದಾಗ್ಯೂ ವಿಶ್ವನಾಥನ್ ಆನಂದ್ ಬಳಿಕ ಚೆಸ್ ವಿಶ್ವಕಪ್​ನಲ್ಲಿ ಫೈನಲ್ ಪ್ರವೇಶಿಸಿದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೆ ಆರ್​. ಪ್ರಜ್ಞಾನಂದ ಪಾತ್ರರಾಗಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್