AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ […]

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!
ಸಾಧು ಶ್ರೀನಾಥ್​
|

Updated on:Jan 27, 2020 | 7:00 PM

Share

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಒಬ್ಬ ಅಭಿಮಾನಿ ಹೌದು ಹುಲಿಯಾ ಅನ್ನೋ ಡೈಲಾಗ್ ಹೊಡೆದು, ಅದನ್ನೇ ಬರೆದಿರುವ ಬೋರ್ಡ್ ಪ್ರದರ್ಶಿಸಿದ್ದ. ಅತ್ತ ಹೌದು ಹುಲಿಯಾ ಅನ್ನೋ ಡೈಲಾಗ್ ಬರ್ತಿದ್ರೆ, ಇತ್ತ ಮತ್ತೊಬ್ಬ ಕ್ರೀಡಾಭಿಮಾನಿ ಮಿಣಿ ಮಿಣಿ ಪೌಡರ್ ಎಂದು ಕೂಗುತ್ತಾ ಬೋರ್ಡ್ ತೋರಿಸುತ್ತಿರೋ ವೀಡಿಯೋ ವೈರಲ್ ಆಗಿತ್ತು.

ಬೆಳಗಾವಿಯ ಕಾಗವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಹೌದು ಹುಲಿಯಾ ಎಂದು ಕೂಗಿದ್ದ. ಇತ್ತೀಚೆಗೆ ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣದ ವೇಳೆ ಸುದ್ದಿಗೋಷ್ಠಿ ನಡೆಸುತ್ತಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್ ಉಲ್ಲೇಖಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಯೊಬ್ಬ 12 ವರ್ಷದಿಂದ ಐಪಿಎಲ್ ಕಪ್ ಗೆದ್ದಿಲ್ಲ. ಈ ವರ್ಷದಲ್ಲಾದ್ರೂ ಕಪ್ ಗೆಲ್ತೀರಾ ಅಂತಾ ಪೋಸ್ಟರ್ ಹಿಡಿದಿದ್ದ. ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗೇ ಸೌಂಡ್ ಮಾಡ್ತಿದೆ. ಒಟ್ನಲ್ಲಿ, ರಾಜ್ಯದಲ್ಲಿ ಸದ್ಯ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ನ್ಯೂಜಿಲೆಂಡ್‌ನಲ್ಲಿ ಪಂದ್ಯ ನೋಡಲು ಹೋಗಿದ್ದ ಕನ್ನಡಿಗರು ಅಲ್ಲೂ ಈ ಎರಡೂ ಡೈಲಾಗ್‌ಗಳನ್ನು ನೆನಪಿಸಿ ಗಮನ ಸೆಳೆದಿದ್ದಾರೆ.

Published On - 9:40 am, Mon, 27 January 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್