AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ […]

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!
ಸಾಧು ಶ್ರೀನಾಥ್​
|

Updated on:Jan 27, 2020 | 7:00 PM

Share

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಒಬ್ಬ ಅಭಿಮಾನಿ ಹೌದು ಹುಲಿಯಾ ಅನ್ನೋ ಡೈಲಾಗ್ ಹೊಡೆದು, ಅದನ್ನೇ ಬರೆದಿರುವ ಬೋರ್ಡ್ ಪ್ರದರ್ಶಿಸಿದ್ದ. ಅತ್ತ ಹೌದು ಹುಲಿಯಾ ಅನ್ನೋ ಡೈಲಾಗ್ ಬರ್ತಿದ್ರೆ, ಇತ್ತ ಮತ್ತೊಬ್ಬ ಕ್ರೀಡಾಭಿಮಾನಿ ಮಿಣಿ ಮಿಣಿ ಪೌಡರ್ ಎಂದು ಕೂಗುತ್ತಾ ಬೋರ್ಡ್ ತೋರಿಸುತ್ತಿರೋ ವೀಡಿಯೋ ವೈರಲ್ ಆಗಿತ್ತು.

ಬೆಳಗಾವಿಯ ಕಾಗವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಹೌದು ಹುಲಿಯಾ ಎಂದು ಕೂಗಿದ್ದ. ಇತ್ತೀಚೆಗೆ ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣದ ವೇಳೆ ಸುದ್ದಿಗೋಷ್ಠಿ ನಡೆಸುತ್ತಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್ ಉಲ್ಲೇಖಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಯೊಬ್ಬ 12 ವರ್ಷದಿಂದ ಐಪಿಎಲ್ ಕಪ್ ಗೆದ್ದಿಲ್ಲ. ಈ ವರ್ಷದಲ್ಲಾದ್ರೂ ಕಪ್ ಗೆಲ್ತೀರಾ ಅಂತಾ ಪೋಸ್ಟರ್ ಹಿಡಿದಿದ್ದ. ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗೇ ಸೌಂಡ್ ಮಾಡ್ತಿದೆ. ಒಟ್ನಲ್ಲಿ, ರಾಜ್ಯದಲ್ಲಿ ಸದ್ಯ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ನ್ಯೂಜಿಲೆಂಡ್‌ನಲ್ಲಿ ಪಂದ್ಯ ನೋಡಲು ಹೋಗಿದ್ದ ಕನ್ನಡಿಗರು ಅಲ್ಲೂ ಈ ಎರಡೂ ಡೈಲಾಗ್‌ಗಳನ್ನು ನೆನಪಿಸಿ ಗಮನ ಸೆಳೆದಿದ್ದಾರೆ.

Published On - 9:40 am, Mon, 27 January 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ