AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ […]

ನ್ಯೂಜಿಲೆಂಡ್​ನಲ್ಲೂ ಸದ್ದು ಮಾಡಿದ ಮಿಣಿ ಮಿಣಿ, ಹೌದು ಹುಲಿಯಾ ಡೈಲಾಗ್‌!
ಸಾಧು ಶ್ರೀನಾಥ್​
|

Updated on:Jan 27, 2020 | 7:00 PM

Share

ವೆಲ್ಲಿಂಗ್ಟನ್: ರಾಜ್ಯದಲ್ಲಿ ಸಖತ್ ಟ್ರೆಂಡ್‌ ಸೃಷ್ಟಿಸಿರುವ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್‌ ನ್ಯೂಜಿಲೆಂಡ್ ನಾಡಿಗೂ ಎಂಟ್ರಿ ಕೊಟ್ಟಿದೆ. ಭಾರತ ಮತ್ತು ನ್ಯೂಜಿಲೆಂಡ್‌ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಕ್ರಿಕೆಟ್‌ ಅಭಿಮಾನಿಗಳಿಬ್ಬರು ಈ ಟ್ರೆಂಡಿಂಗ್ ಡೈಲಾಗ್‌ ಹೊಡೆಯುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

ಗಮನ ಸೆಳೆದ ಡೈಲಾಗ್​: ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ನಿನ್ನೆ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿತೀಯ ಕಾದಾಟ ನಡೀತು. ಈ ಪಂದ್ಯದ ವೀಕ್ಷಣೆಗೆ ಮೈದಾನಕ್ಕೆ ಆಗಮಿಸಿದ್ದ ಒಬ್ಬ ಅಭಿಮಾನಿ ಹೌದು ಹುಲಿಯಾ ಅನ್ನೋ ಡೈಲಾಗ್ ಹೊಡೆದು, ಅದನ್ನೇ ಬರೆದಿರುವ ಬೋರ್ಡ್ ಪ್ರದರ್ಶಿಸಿದ್ದ. ಅತ್ತ ಹೌದು ಹುಲಿಯಾ ಅನ್ನೋ ಡೈಲಾಗ್ ಬರ್ತಿದ್ರೆ, ಇತ್ತ ಮತ್ತೊಬ್ಬ ಕ್ರೀಡಾಭಿಮಾನಿ ಮಿಣಿ ಮಿಣಿ ಪೌಡರ್ ಎಂದು ಕೂಗುತ್ತಾ ಬೋರ್ಡ್ ತೋರಿಸುತ್ತಿರೋ ವೀಡಿಯೋ ವೈರಲ್ ಆಗಿತ್ತು.

ಬೆಳಗಾವಿಯ ಕಾಗವಾಡದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಭಾಷಣ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಹೌದು ಹುಲಿಯಾ ಎಂದು ಕೂಗಿದ್ದ. ಇತ್ತೀಚೆಗೆ ಮಂಗಳೂರಿನಲ್ಲಿ ಬಾಂಬ್ ಪತ್ತೆ ಪ್ರಕರಣದ ವೇಳೆ ಸುದ್ದಿಗೋಷ್ಠಿ ನಡೆಸುತ್ತಿದ್ದ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಮಿಣಿ ಮಿಣಿ ಪೌಡರ್ ಉಲ್ಲೇಖಿಸಿದ್ದರು.

ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್: ಇನ್ನು ಇದೇ ಪಂದ್ಯದಲ್ಲಿ ಆರ್​ಸಿಬಿ ಅಭಿಮಾನಿಯೊಬ್ಬ 12 ವರ್ಷದಿಂದ ಐಪಿಎಲ್ ಕಪ್ ಗೆದ್ದಿಲ್ಲ. ಈ ವರ್ಷದಲ್ಲಾದ್ರೂ ಕಪ್ ಗೆಲ್ತೀರಾ ಅಂತಾ ಪೋಸ್ಟರ್ ಹಿಡಿದಿದ್ದ. ಈ ಪೋಸ್ಟರ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಗೇ ಸೌಂಡ್ ಮಾಡ್ತಿದೆ. ಒಟ್ನಲ್ಲಿ, ರಾಜ್ಯದಲ್ಲಿ ಸದ್ಯ ಹೌದು ಹುಲಿಯಾ ಮತ್ತು ಮಿಣಿ ಮಿಣಿ ಪೌಡರ್ ಡೈಲಾಗ್ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಸೃಷ್ಟಿ ಮಾಡಿದೆ. ನ್ಯೂಜಿಲೆಂಡ್‌ನಲ್ಲಿ ಪಂದ್ಯ ನೋಡಲು ಹೋಗಿದ್ದ ಕನ್ನಡಿಗರು ಅಲ್ಲೂ ಈ ಎರಡೂ ಡೈಲಾಗ್‌ಗಳನ್ನು ನೆನಪಿಸಿ ಗಮನ ಸೆಳೆದಿದ್ದಾರೆ.

Published On - 9:40 am, Mon, 27 January 20

Follow Us
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಡಾ ರಾಜ್​ಕುಮಾರ್ ಗೀತ ನಮನ ಕಾರ್ಯಕ್ರಮದಲ್ಲಿ ಸಾಧು ಕೋಕಿಲ ಮಾತು
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಫೋಟೋ ಟಿಪ್ಸ್ ನೀಡಿದ ರವಿ ಕಿಶನ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
ಸಮಂತಾ ಸೆಟ್​​​ನಲ್ಲಿ ಹೇಗಿರ್ತಾರೆ? ವಿವರಿಸಿದ ದಿಗಂತ್
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
KSRTC ಬಸ್​ ಅಡ್ಡಗಟ್ಟಿ ಕುಡುಕರ ಕಿರಿಕ್​​: ಸೆಲ್ಫಿ ತೆಗೆದು ಹುಚ್ಚಾಟ
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಮಗುವನ್ನು ಸಾಕ್ಷಾತ್ ದೇವರಂತೆ ಬಂದು ರಕ್ಷಿಸಿದ ಪೊಲೀಸರು!
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಲಕ್ಷ್ಮೀಪುರ ಬಿಡಿಎ ಲೇಔಟಲ್ಲಿ ಚೀಲದಲ್ಲಿ ಅಪರಿಚಿತ ಶವ ಪತ್ತೆ, ಬೆಚ್ಚಿದ ಜನ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಅಣ್ಣಾವ್ರ ಸಮಾಧಿಗೆ ಪೂಜೆ ಮಾಡಿದ ರಾಘಣ್ಣ ಮತ್ತು ಶಾಸಕ ಗೋಪಾಲಯ್ಯ
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ಸಿಇಟಿ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ರಾ ಸಿಬ್ಬಂದಿ?
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ನಾವೇನು ಪಾಕಿಸ್ತಾನದಲ್ಲಿ ಇದ್ದೇವಾ? ಜನಿವಾರ ತೆಗೆಸಿದ್ದಕ್ಕೆ ವ್ಯಾಪಕ ಆಕ್ರೋಶ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳದಲ್ಲಿ ದೋಣಿ ವಿಹಾರ ನಡೆಸಿದ ಪ್ರಧಾನಿ ಮೋದಿ