AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಜ್ ಚೋಪ್ರಾನ ಆ ಒಂದು ನಡೆಯನ್ನು ಮೆಚ್ಚಿಕೊಂಡ ಆನಂದ್​​​ ಮಹೇಂದ್ರ

ನೀರಜ್ ಮತ್ತೊಮ್ಮೆ ಚಿನ್ನ ಗೆಲ್ಲುತ್ತಾರೆ. ಅವರು ಎಡವಲಿಲ್ಲ, ಫೌಲ್ ಮಾಡಲಿಲ್ಲ ಅಥವಾ ಗೊಂದಲಕ್ಕೊಳಗಾಗಲಿಲ್ಲ. ಅವರು ಉತ್ತಮ ಆಟವನ್ನು ಆಡಿದ್ದಾರೆ. ಭಾರತಕ್ಕೆ ಬ್ಯಾಕ್ ಟು ಬ್ಯಾಕ್ ಪದಕ ತಂದುಕೊಟ್ಟ ಯುವಕ ಪ್ರತಿಭೆ, ನೀರಜ್ ನೀವು ನಿಜವಾಗಿಯೂ ಶ್ರೇಷ್ಠ ಕ್ರೀಡಾಪಟು ಮತ್ತು ಒಳ್ಳೆಯ ಮನುಷ್ಯ. ನೀವು ನಮಗೆಲ್ಲರಿಗೂ ಹೆಮ್ಮೆ ತಂದಿದ್ದೀರಿ, ಆದರೆ ನಿಮ್ಮ ಈ ಒಂದು ನಡೆಗೆ ನಾನು ಮೆಚ್ಚಿಕೊಳ್ಳುವೇ. ಆನಂದ್​​​ ಮಹೇಂದ್ರ ಅವರು ನೀರಜ್ ಅವರ ಯಾವ ನಡೆಯನ್ನು ಮೆಚ್ಚಿಕೊಂಡಿದ್ದಾರೆ. ಈ ಬಗ್ಗೆ ಇಲ್ಲಿದೆ ಮಾಹಿತಿ

ನೀರಜ್ ಚೋಪ್ರಾನ ಆ ಒಂದು ನಡೆಯನ್ನು ಮೆಚ್ಚಿಕೊಂಡ ಆನಂದ್​​​ ಮಹೇಂದ್ರ
ಅಕ್ಷಯ್​ ಪಲ್ಲಮಜಲು​​
|

Updated on:Aug 09, 2024 | 11:02 AM

Share

ಶುಕ್ರವಾರ ಮುಂಜಾನೆ ನಡೆದ ಪ್ಯಾರಿಸ್ ಒಲಿಂಪಿಕ್ಸ್ 2024ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚೋಪ್ರಾ ಅವರು 89.45 ಮೀಟರ್‌ಗಳ ಅತ್ಯುತ್ತಮ ಎಸೆತದೊಂದಿಗೆ ಬೆಳ್ಳಿ ಗೆದ್ದಿದ್ದಾರೆ. ಆದರೆ ಈ ಬಾರಿ ಬಂಗಾರ ತಪ್ಪಿದೆ ಎಂಬುದು ಅವರ ನೋವಾಗಿದ್ದರು. ಚಿನ್ನ ಗೆಲ್ಲುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ಈ ಬಾರಿ ಚಿನ್ನವನ್ನು ಪಡೆದ ಆಟಗಾರ ಪಾಕಿಸ್ತಾನದ ಅರ್ಷದ್ ನದೀಮ್. ಇವರು 92.97 ಮೀಟರ್ ಉತ್ತಮ ಎಸೆತದೊಂದಿದೆ ಮೊದಲ ಬಾರಿ ಚಿನ್ನಕ್ಕೆ ಕೋರಲು ನೀಡಿದ್ದಾರೆ. ಇದರ ನಡುವೆ ಮಹೇಂದ್ರ ಕಂಪನಿಯ ಆನಂದ್​​​ ಮಹೇಂದ್ರ ಅವರು ಭಾವನಾತ್ಮಕವಾಗಿ ಎಕ್ಸ್​​ನಲ್ಲಿ ಟ್ವೀಟ್​​​ ಮಾಡಿದ್ದಾರೆ. ಅಷ್ಟಕ್ಕೂ ಆನಂದ್​​​ ಮಹೇಂದ್ರ ಅವರು ಮಾಡಿ ಕಮೆಂಟ್​​ ಏನು ಎಂಬ ಬಗ್ಗೆ ಇಲ್ಲಿದೆ ಮಾಹಿತಿ

ಆನಂದ್​​ ಮಹೇಂದ್ರ ಅವರು ಎಕ್ಸ್​ನಲ್ಲಿ​​​ ತುಂಬಾ ಚಟುವಟಿಕೆಯಿಂದ ಇರುವ ವ್ಯಕ್ತಿ. ತಮ್ಮ ಜ್ಞಾನಕ್ಕೆ ಬಂದು ವಿಚಾರಗಳ ಬಗ್ಗೆ ಆನಂದ್​ ಅವರು ಎಕ್ಸ್​​​ನಲ್ಲಿ ಹಂಚಿಕೊಳ್ಳುತ್ತಾರೆ. ಇದೀಗ ಪ್ಯಾರಿಸ್​​​​ ಒಲಿಂಪಿಕ್​​​ ಬಗ್ಗೆಯೂ ಮಾತನಾಡಿದ್ದಾರೆ, ಅದರಲ್ಲೂ ಆನಂದ್​​ ಮಹೇಂದ್ರ ಅವರು ನೀರಜ್ ಚೋಪ್ರಾ ಅವರಿಗೆ ಚಿನ್ನ ಮಿಸ್​​ ಆಗಿ ಪಾಕಿಸ್ತಾನ ಪಾಲಾಗಿರುವ ಬಗ್ಗೆ ಭಾರೀ ದುಃಖಗೊಂಡಿದರಂತೆ. ಆದರೆ ನೀರಜ್ ಚೋಪ್ರಾ ಅವರ ಆ ಒಂದು ನಡೆ ಅವರಿಗೂ ತುಂಬಾ ಖುಷಿ ನೀಡಿದೆ ಎಂದು ಹೇಳಿಕೊಂಡಿದ್ದಾರೆ.

ಆನಂದ್​​ ಮಹೇಂದ್ರ ಅವರು ಹೇಳಿಕೊಂಡ ಮಾತುಗಳು ಇಲ್ಲಿದೆ, “ನಾನು ತಪ್ಪೊಪ್ಪಿಕೊಂಡಿದ್ದೇನೆ. ನಿನ್ನೆ ರಾತ್ರಿ ನಡೆದ ಪಂದ್ಯದಿಂದ ತುಂಬಾ ನೋವಾಗಿತ್ತು. ನೀರಜ್ ಚೋಪ್ರಾ ತನ್ನ ಎರಡನೇ ಒಲಿಂಪಿಕ್​​ನಲ್ಲಿ ಚಿನ್ನದ ಪದಕವನ್ನು ಗೆಲ್ಲಲಿಲ್ಲ. ಆದರೆ, ಇಂದು ಬೆಳಿಗ್ಗೆ, ನಾನು ಮೊದಲು ಅರ್ಷದ್ ನದೀಮ್ ಅವರ ದಾಖಲೆಗೆ ಅಭಿನಂದಿಸಲು ಬಯಸುತ್ತೇನೆ. ಅದರಲ್ಲೂ ನೀರಜ್ ಅವರೊಂದಿಗಿನ ಅವರ ಕ್ರೀಡಾ ಮನೋಭಾವ ಮತ್ತು ಒಡನಾಟಕ್ಕೆ ನಾನು ಸೋತೆ. ನೀರಜ್ ಮತ್ತೊಮ್ಮೆ ಚಿನ್ನ ಗೆಲ್ಲುತ್ತಾರೆ. ಅವರು ಎಡವಲಿಲ್ಲ, ಫೌಲ್ ಮಾಡಲಿಲ್ಲ ಅಥವಾ ಗೊಂದಲಕ್ಕೊಳಗಾಗಲಿಲ್ಲ. ಅವರು ಉತ್ತಮ ಆಟವನ್ನು ಆಡಿದ್ದಾರೆ. ಭಾರತಕ್ಕೆ ಬ್ಯಾಕ್ ಟು ಬ್ಯಾಕ್ ಪದಕ ತಂದುಕೊಟ್ಟ ಯುವಕ ಪ್ರತಿಭೆ, ನೀರಜ್ ನೀವು ನಿಜವಾಗಿಯೂ ಶ್ರೇಷ್ಠ ಕ್ರೀಡಾಪಟು ಮತ್ತು ಒಳ್ಳೆಯ ಮನುಷ್ಯ. ನೀವು ನಮಗೆಲ್ಲರಿಗೂ ಹೆಮ್ಮೆ ತಂದಿದ್ದೀರಿ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಕೈ ಜಾರಿದ ಚಿನ್ನ; ಬೆಳ್ಳಿ ಪದಕಕ್ಕೆ ಮುತ್ತಿಟ್ಟ ನೀರಜ್ ಚೋಪ್ರಾ

ಅರ್ಷದ್ ನದೀಮ್ ಅವರು 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ನಾರ್ವೆಯ ಆಂಡ್ರಿಯಾಸ್ ಥೋರ್ಕಿಲ್ಡ್‌ಸೆನ್ 90.57 ಎಸೆತದ ಮೂಲಕ ತಮ್ಮ ಹಿಂದಿನ ದಾಖಲೆಗಳನ್ನು ಮುರಿದಿದ್ದರು. ಇದರಲ್ಲಿ ಕಂಚು ಪದಕ ಪಡೆದರು. ಇನ್ನು ಟೋಕಿಯೊ ಸಮ್ಮರ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್, ಮಂಗಳವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನ ಬಿ ಗುಂಪಿನಲ್ಲಿ 89.34 ಮೀಟರ್‌ಗಳ ಬೃಹತ್ ಎಸೆತವನ್ನು ದಾಖಲಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:57 am, Fri, 9 August 24

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು