AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಂ ಇಂಡಿಯಾವನ್ನು ಕಟ್ಟಿದ್ದು ಗಂಗೂಲಿಯಲ್ಲ! ಅದರ ಕ್ರೆಡಿಟ್ ಏನಿದ್ದರೂ ಈ ಸವ್ಯಸಾಚಿಗೆ ಸಲ್ಲಬೇಕು: ಸುರೇಶ್ ರೈನಾ

ದಾದಾ ಈ ತಂಡವನ್ನು ಕಟ್ಟಿದ್ದಾರೆ ಎಂದು ನಾನು ಎಂದಿಗೂ ಹೇಳಲಿಲ್ಲ. ಅವರು ಮತ್ತು ಧೋನಿ ತಂಡದ ನಾಯಕತ್ವ ವಹಿಸಿ ಪ್ರಭಾವ ಬೀರಿದರು, ಅದು ನಿಜ. ಆದರೆ ತಂಡವನ್ನು ಎಲ್ಲಾ ಮೂರು ಸ್ವರೂಪಗಳಲ್ಲಿ ನಿರ್ಮಿಸಿದ ಶ್ರೇಯಸ್ಸು ರಾಹುಲ್ ದ್ರಾವಿಡ್‌ಗೆ ಸಲ್ಲಬೇಕು.

ಟೀಂ ಇಂಡಿಯಾವನ್ನು ಕಟ್ಟಿದ್ದು ಗಂಗೂಲಿಯಲ್ಲ! ಅದರ ಕ್ರೆಡಿಟ್ ಏನಿದ್ದರೂ ಈ ಸವ್ಯಸಾಚಿಗೆ ಸಲ್ಲಬೇಕು: ಸುರೇಶ್ ರೈನಾ
ಸುರೇಶ್ ರೈನಾ
ಪೃಥ್ವಿಶಂಕರ
|

Updated on: Jun 13, 2021 | 4:21 PM

Share

ಇಂದು ಭಾರತೀಯ ಕ್ರಿಕೆಟ್ ತಂಡವು ಇರುವ ಸ್ಥಿತಿಗೆ ಮಾಜಿ ನಾಯಕ ಸೌರವ್ ಗಂಗೂಲಿ ಕಾರಣ ಎಂದು ಅನೇಕರು ಹೇಳುತ್ತಾರೆ. ಅವರು ಈ ತಂಡಕ್ಕೆ ಅಡಿಪಾಯ ಹಾಕಿದರು ಮತ್ತು ವಿದೇಶದಲ್ಲಿ ಸರಣಿಗಳನ್ನು ಗೆಲ್ಲುವ ಅಭ್ಯಾಸವನ್ನು ಮಾಡಿಕೊಂಡರು ಎಂದು ಹೇಳಲಾಗುತ್ತದೆ. ಆದರೆ ಭಾರತದ ವಿಶ್ವಕಪ್ -2011ರ ಗೆಲುವಿನ ಭಾಗವಾಗಿದ್ದ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ ಈ ಮಾತನ್ನು ತಳ್ಳಿ ಹಾಕಿದ್ದಾರೆ. ಭಾರತೀಯ ತಂಡದ ಈ ಸ್ಥಿತಿಗೆ ಗಂಗೂಲಿ ಎಂಬ ಮಾತಿಗೆ ರೈನಾ ವಿರೋಧ ವ್ಯಕ್ತಪಡಿಸಿದ್ದಾರೆ. ಅವರ ಪ್ರಕಾರ ತಂಡವನ್ನು ಗಂಗೂಲಿ ಅಲ್ಲ ರಾಹುಲ್ ದ್ರಾವಿಡ್ ಕಟ್ಟಿದ್ದಾರೆ ಎಂದು ಮುಂಬರುವ ತಮ್ಮ ಪುಸ್ತಕದಲ್ಲಿ ರೈನಾ ಈ ವಿಚಾರಗಳ ಬಗ್ಗೆ ಬರೆದುಕೊಂಡಿದ್ದಾರೆ.

ಕಿರಿಯ ಆಟಗಾರರ ಹಕ್ಕುಗಳಿಗಾಗಿ ರಾಹುಲ್ ಹೋರಾಡುತ್ತಿದ್ದರು ಎಂದು ರೈನಾ ಹೇಳಿದ್ದಾರೆ. ರೈನಾ ಅವರ ಮುಂಬರುವ ಪುಸ್ತಕದ ಆಯ್ದ ಭಾಗಗಳನ್ನು ಪ್ರಿಂಟ್ ಪ್ರಕಟಿಸಿದೆ. ರಾಹುಲ್ ಭಾಯ್ ಯಾವಾಗಲೂ ಕುಟುಂಬದಂತೆಯೇ ಇದ್ದರು. ಅವರು ಕಿರಿಯ ಆಟಗಾರರಿಗಾಗಿ ಹೋರಾಡುತ್ತಿದ್ದರು. ಈ ಹೆಚ್ಚುವರಿ ಪ್ರಯತ್ನಗಳು ಯಾವಾಗಲೂ ಫಲ ನೀಡುತ್ತಿದ್ದವು. ಯುವ ಆಟಗಾರರು ಅವರಿಗೆ ಸಾಕಷ್ಟು ಅರ್ಥವಾಗಿದ್ದರು. ಅವರ ಅಡಿಯಲ್ಲಿ ಎಷ್ಟು ಆಟಗಾರರು ಪ್ರಬುದ್ಧರಾಗಿದ್ದಾರೆಂದು ನೀವು ನೋಡಿದ್ದೀರಿ, ಅದಕ್ಕೆ ಉದಾಹರಣೆ ಎಂಬಂತೆ ಮಹೇಂದ್ರ ಸಿಂಗ್ ಧೋನಿ, ಇರ್ಫಾನ್ ಪಠಾಣ್, ಯುವರಾಜ್ ಸಿಂಗ್, ಪಿಯೂಷ್ ಚಾವ್ಲಾ, ದಿನೇಶ್ ಕಾರ್ತಿಕ್, ಮುನಾಫ್ ಪಟೇಲ್, ಎಸ್. ಶ್ರೀಶಾಂತ್ ಮತ್ತು ನಾನು ಎಂದು ರೈನಾ ಬರೆದಿದ್ದಾರೆ.

ತಂಡವನ್ನು ರಚಿಸಿದ್ದು ರಾಹುಲ್ ಭಾಯ್ ಸಾಮಾನ್ಯವಾಗಿ, ಜನರು 10-15 ವರ್ಷಗಳಲ್ಲಿ ಪ್ರವರ್ಧಮಾನಕ್ಕೆ ಬಂದಿರುವ ಭಾರತೀಯ ತಂಡದ ಬಗ್ಗೆ ಮಾತನಾಡುವಾಗಲೆಲ್ಲಾ, ಧೋನಿ ಮತ್ತು ಈ ಮೊದಲು ತಂಡದ ನಾಯಕರಾಗಿದ್ದ ಗಂಗೂಲಿಯನ್ನ ನೆನಪಿಸಿಕೊಳ್ಳುತ್ತಾರೆ. ಇಬ್ಬರೂ ತಂಡವನ್ನು ಕಟ್ಟಿದರು ಮತ್ತು ಭಾರತೀಯ ತಂಡವನ್ನು ಮುಂದಕ್ಕೆ ಕರೆದೊಯ್ದರು ಎಂದು ಹೇಳುತ್ತಾರೆ. ಆದರೆ ನಾನು ಇದನ್ನು ಸಂಪೂರ್ಣವಾಗಿ ಒಪ್ಪುವುದಿಲ್ಲ. ದಾದಾ ಈ ತಂಡವನ್ನು ಕಟ್ಟಿದ್ದಾರೆ ಎಂದು ನಾನು ಎಂದಿಗೂ ಹೇಳಲಿಲ್ಲ. ಅವರು ಮತ್ತು ಧೋನಿ ತಂಡದ ನಾಯಕತ್ವ ವಹಿಸಿ ಪ್ರಭಾವ ಬೀರಿದರು, ಅದು ನಿಜ. ಆದರೆ ತಂಡವನ್ನು ಎಲ್ಲಾ ಮೂರು ಸ್ವರೂಪಗಳಲ್ಲಿ ನಿರ್ಮಿಸಿದ ಶ್ರೇಯಸ್ಸು ರಾಹುಲ್ ದ್ರಾವಿಡ್‌ಗೆ ಸಲ್ಲಬೇಕು ಎಂದಿದ್ದಾರೆ.

ರಾಹುಲ್ ಸೆಲೆಕ್ಟರ್‌ಗಳೊಂದಿಗೆ ಜಗಳವಾಡುತ್ತಿದ್ದರು ಯುವ ಆಟಗಾರರಿಗಾಗಿ ರಾಹುಲ್ ಸೆಲೆಕ್ಟರ್‌ಗಳೊಂದಿಗೆ ಜಗಳವಾಡುತ್ತಿದ್ದರು ಎಂದು ರೈನಾ ಹೇಳಿದ್ದಾರೆ. ರಾಹುಲ್ ಭಾಯ್ ಅವರು ಯುವ ಆಟಗಾರರನ್ನು ತಂಡದಲ್ಲಿ ಸೇರಿಸಲು ಸೆಲೆಕ್ಟರ್‌ಗಳೊಂದಿಗೆ ಹೋರಾಡುತ್ತಿದ್ದರು ಮತ್ತು ಅವರು ಯಾವಾಗಲೂ ನಮಗೆ ನೀಡಿದ ಒಂದು ಸಲಹೆಯೆಂದರೆ ರಣಜಿ ಟ್ರೋಫಿ ಸಾಧ್ಯವಾದಾಗಲೆಲ್ಲಾ ಆಡುವುದು, ಉತ್ತಮ ಪ್ರದರ್ಶನ ಮತ್ತು ಸಾಕಷ್ಟು ರನ್ ಗಳಿಸಿ ನಂತರ ಭಾರತಕ್ಕೆ ಹಿಂತಿರುಗಿ ಎಂದು ನಮಗೆ ಸಲಹೆ ನೀಡುತ್ತಿದ್ದರು ಎಂದು ರೈನಾ ಹೇಳಿಕೊಂಡಿದ್ದಾರೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​