ನನಗೆ ವಿಷ ಉಣಿಸಿದ್ದರು: ನೊವಾಕ್ ಜೊಕೊವಿಚ್ ಗಂಭೀರ ಆರೋಪ

Novak Djokovic: ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯು ಜನವರಿ 12 ರಿಂದ ಶುರುವಾಗಲಿದೆ. ಈ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ನೊವಾಕ್ ಜೊಕೊವಿಚ್ ಅಮೆರಿಕದ ನಿಶೇಶ್ ಬಸವರೆಡ್ಡಿ ಅವರನ್ನು ಎದುರಿಸಲಿದ್ದಾರೆ. ರೊಡ್ ಲಾವೆರ್ ಅರೇನಾದಲ್ಲಿ ಜರುಗಲಿರುವ ಈ ಪಂದ್ಯವು ಜನವರಿ 13 ರಂದು ನಡೆಯಲಿದೆ.

ನನಗೆ ವಿಷ ಉಣಿಸಿದ್ದರು: ನೊವಾಕ್ ಜೊಕೊವಿಚ್ ಗಂಭೀರ ಆರೋಪ
Novak Djokovic
Follow us
ಝಾಹಿರ್ ಯೂಸುಫ್
|

Updated on:Jan 11, 2025 | 12:43 PM

ಆಸ್ಟ್ರೇಲಿಯನ್ ಓಪನ್ ಆರಂಭಕ್ಕೂ ಮುನ್ನ ಖ್ಯಾತ ಟೆನಿಸ್ ತಾರೆ ನೊವಾಕ್ ಜೊಕೊವಿಚ್ ಒಂದಲ್ಲ ಒಂದು ಕಾರಣದಿಂದ ಸುದ್ದಿಯಲ್ಲಿರುತ್ತಾರೆ. ಆದರೆ ಈ ಬಾರಿ ಸುದ್ದಿಯಾಗಿರುವುದು ವಿಷಪ್ರಾಶನ ಮಾಡಿದ್ದರು ಎಂಬ ಆಘಾತಕಾರಿ ಹೇಳಿಕೆಯೊಂದಿಗೆ ಎಂಬುದೇ ಅಚ್ಚರಿ. ಸಂದರ್ಶನವೊಂದರಲ್ಲಿ ಮಾತನಾಡಿದ ನೊವಾಕ್ ಜೊಕೊವಿಚ್ ಮೂರು ವರ್ಷಗಳ ಹಿಂದಿನ ಕಹಿ ಘಟನೆಯನ್ನು ಬಿಚ್ಚಿಟ್ಟಿದ್ದಾರೆ.

2021-22ರ ರ ಆಸ್ಟ್ರೇಲಿಯನ್ ಓಪನ್​ ಟೂರ್ನಿಯಿಂದ ನೊವಾಕ್ ಜೊಕೊವಿಚ್ ಹಿಂದೆ ಸರಿದಿದ್ದರು. ಕೋವಿಡ್-19 ಲಸಿಕೆ ಪಡೆಯದಿದ್ದ ಕಾರಣ ಜೊಕೊವಿಚ್​ಗೆ ಟೂರ್ನಿಯಲ್ಲಿ ಕಣಕ್ಕಿಳಿಯಲು ಅವಕಾಶ ನೀಡಿರಲಿಲ್ಲ. ಅಲ್ಲದೆ ಕೊರೋನಾ ಲಸಿಕೆ ಪಡೆಯಲು ಹಿಂದೇಟು ಹಾಕಿದ್ದರಿಂದ ಆಸ್ಟ್ರೇಲಿಯಾದಿಂದ ತೆರಳುವಂತೆ ಸೂಚಿಸಲಾಗಿತ್ತು. ಹೀಗಾಗಿ ಆಸ್ಟ್ರೇಲಿಯನ್ ಓಪನ್​ನಲ್ಲಿ ಕಣಕ್ಕಿಳಿಯದೇ ನೊವಾಕ್ ಜೊಕೊವಿಚ್ ತವರಿಗೆ ಹಿಂತಿರುಗಿದ್ದರು.

ವೈದ್ಯಕೀಯ ವರದಿ ನೋಡಿ ಆಘಾತ:

ಆಸ್ಟ್ರೇಲಿಯನ್ ಓಪನ್​ನಿಂದ ಹಿಂದೆ ಸರಿದು ಸರ್ಬಿಯಾಗೆ ವಾಪಾಸಾದಗ ನನ್ನ ಆರೋಗ್ಯದಲ್ಲಿ ಏರುಪೇರಾಗ ತೊಡಗಿತು. ಹೀಗಾಗಿ ನಾನು ವೈದ್ಯಕೀಯ ಪರೀಕ್ಷೆಗೆ ಒಳಗಾದೆ. ಈ ವೇಳೆ ನಾನು ಸೇವಿಸಿದ ಆಹಾರದಲ್ಲಿ ವಿಷಕಾರಿ ಅಂಶಗಳಿರುವುದು ಗೊತ್ತಾಯಿತು ಎಂದು ನೊವಾಕ್ ಜೊಕೊವಿಚ್ GQ ಮ್ಯಾಗಝಿನ್​ಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಅಂದು ನಾನು ಮೆಲ್ಬೋರ್ನ್​ನ ಪ್ರತಿಷ್ಠಿತ ಹೋಟೆಲ್​ನಲ್ಲಿ ತಂಗಿದ್ದೆ. ಈ ವೇಳೆ ನೀಡಿದ ಆಹಾರದಲ್ಲಿ ವಿಷಕಾರಿ ಅಂಶಗಳನ್ನು ಬೆರೆಸಿರುವ ಸಾಧ್ಯತೆಯಿದೆ. ಏಕೆಂದರೆ ವೈದ್ಯಕೀಯ ಪರೀಕ್ಷೆಯಲ್ಲಿ ನನ್ನ ಆಹಾರದಲ್ಲಿ ಸೀಸ ಮತ್ತು ಪಾದರಸದ ಅಂಶಗಳು ಕಂಡು ಬಂದಿದ್ದವು. ಇದನ್ನು ನೋಡಿ ಅಚ್ಚರಿಗೊಂಡಿದ್ದೆ ಎಂದು ನೊವಾಕ್ ಜೊಕೊವಿಚ್ ತಿಳಿಸಿದ್ದಾರೆ.

ಈ ಬಗ್ಗೆ ನಾನು ಪ್ರಶ್ನಿಸಿದಾಗ, ಗೌಪ್ಯತೆಯ ಕಾರಣಗಳಿಗಾಗಿ ವೈಯುಕ್ತಿಕ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಗೃಹ ವ್ಯವಹಾರಗಳ ಇಲಾಖೆಯ ವಕ್ತಾರರೊಬ್ಬರು ತಿಳಿಸಿದ್ದರು. ಹೀಗಾಗಿ ಈ ವಿಷಯವನ್ನು ನಾನು ಹೇಳಲು ಹೋಗಿರಲಿಲ್ಲ.  ಅಲ್ಲದೆ ಈ ವಿಷಯವನ್ನು ಅಲ್ಲಿಗೆ ಬಿಟ್ಟಿದ್ದೆ ಎಂದು ನೊವಾಕ್ ಜೊಕೊವಿಚ್ ತಿಳಿಸಿದರು.

ಇದನ್ನೂ ಓದಿ: 1,955 ಎಸೆತಗಳಲ್ಲಿ ಇತಿಹಾಸ ರಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

ಆಸ್ಟ್ರೇಲಿಯನ್ ಓಪನ್ ಪುರುಷರ ಟೆನಿಸ್ ಟೂರ್ನಿಯು ಜನವರಿ 12 ರಿಂದ ಶುರುವಾಗಲಿದೆ. ಈ ಟೂರ್ನಿಯ ಆರಂಭಕ್ಕೂ ಮುನ್ನ ಸರ್ಬಿಯನ್ ತಾರೆ ನೊವಾಕ್ ಜೊಕೊವಿಚ್ ನೀಡಿರುವ ಈ ಹೇಳಿಕೆಯು ಸಂಚಲನ ಸೃಷ್ಟಿಸಿದ್ದು, ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

Published On - 12:42 pm, Sat, 11 January 25

ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಮಕರ ಸಂಕ್ರಾಂತಿ ಮತ್ತು ಮಕರ ಜ್ಯೋತಿ ಮಹತ್ವ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಸೂರ್ಯನ ಪಥ ಬದಲಾಗುವ ಸಂಕ್ರಾಂತಿ ದಿನದ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ಹಸು ಕೆಚ್ಚಲು ಕೊಯ್ದ ಪ್ರಕರಣ: ಜಮೀರ್ ಅಹ್ಮದ್ ಹೇಳಿಕೆಗೆ ಚೈತ್ರಾ ತಿರುಗೇಟು
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ನರೈನಾ ಗ್ರಾಮಕ್ಕೆ ಪ್ರಧಾನಿ ಮೋದಿ ಭೇಟಿ; ಲೋಹ್ರಿ ಆಚರಿಸಿ, ಜನರೊಂದಿಗೆ ಸಂವಾದ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಸಚಿವ ಕಿಶನ್ ರೆಡ್ಡಿ ಮನೆಯ ಸಂಕ್ರಾಂತಿ ಹಬ್ಬದಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ತ್ಯಾಗ ಬಲಿದಾನಗಳಿಗಾಗಿ ನಮ್ಮಿಂದ ಪ್ರಾಮಾಣಿಕ ಪ್ರಯತ್ನ ನಡೆಯಬೇಕು: ಸಿಎಂ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಬಿಗ್ ಬಾಸ್ ಮನೆಯೊಳಗೆ ಸಿದ್ಧವಾಯ್ತು ‘ಬಾಯ್ಸ್ Vs ಗರ್ಲ್ಸ್​’ ಪ್ರೋಮೋ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹಣಮಂತು ಮತ್ತು ರಜತ್; ಜಗದೀಶ್-ರಂಜಿತ್​ಗೆ ಉತ್ತಮ ರಿಪ್ಲೇಸ್ಮೆಂಟ್: ಚೈತ್ರಾ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಹದಿನೈದನೇ ಹಣಕಾಸು ಆಯೋಗದ ಮೇಲೆ ಚರ್ಚೆಗೆ ಕುಮಾರಣ್ಣ ಬರಲಿ: ಶಿವಲಿಂಗೇಗೌಡ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ
ಬಿಗ್ ಬಾಸ್ ಮನೆಯಿಂದ ಹೊರಬಂದು ಮದುವೆ ಬಗ್ಗೆ ಮಾತಾಡಿದ ಚೈತ್ರಾ ಕುಂದಾಪುರ