ಕಡು ಬಡತನ.. ತಮ್ಮ, ತಂದೆಯ ಅಕಾಲಿಕ ಮರಣ; ಟೆಂಪೋ ಡ್ರೈವರ್ ಮಗ ಟೀಂ ಇಂಡಿಯಾದ ಕದ ತಟ್ಟಿದ ಕತೆಯಿದು

IND vs SL: ಈ ದಿನವನ್ನು ನೋಡಲು ನನ್ನ ತಂದೆ ಜೀವಂತವಾಗಿದ್ದಾರೆ ಎಂದು ನಾನು ಬಯಸುತ್ತೇನೆ. ಅವರು ನಾನು ಟೀಂ ಇಂಡಿಯಾದಲ್ಲಿ ಆಡುವುದನ್ನ ನೋಡಬೇಕೆಂದು ಬಯಸಿದ್ದರು.

ಕಡು ಬಡತನ.. ತಮ್ಮ, ತಂದೆಯ ಅಕಾಲಿಕ ಮರಣ; ಟೆಂಪೋ ಡ್ರೈವರ್ ಮಗ ಟೀಂ ಇಂಡಿಯಾದ ಕದ ತಟ್ಟಿದ ಕತೆಯಿದು
ಚೇತನ್ ಸಕಾರಿಯಾ
Follow us
|

Updated on: Jun 11, 2021 | 4:51 PM

ಆತ ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ, ಆತನ ತಂದೆ ಅವನ ಆಟವನ್ನು ನೋಡಿ ಖುಷಿಪಟ್ಟಿದ್ದರು. ಆತ ಐಪಿಎಲ್‌ನಲ್ಲಿ ಕೋಟಿಗೆ ಮಾರಾಟವಾದಾಗ ಆತನ ತಂದೆಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಆದರೆ, ಆ ಆಟಗಾರನ ಅತಿದೊಡ್ಡ ಕನಸು ನನಸಾದಾಗ, ಇದನ್ನು ನೋಡಲು ಆತನ ತಂದೆ ಬದುಕಿಲ್ಲ. ಕೆಲವು ತಿಂಗಳುಗಳ ಹಿಂದೆ, ಕೊರೊನಾದ ಎರಡನೇ ಅಲೆಯೂ ಈ ಆಟಗಾರ ತಂದೆಯನ್ನು ಬಲಿ ಪಡೆಯಿತು. ಈಗ ಈ ಆಟಗಾರನನ್ನು ಮೊದಲ ಬಾರಿಗೆ ಟೀಮ್ ಇಂಡಿಯಾಕ್ಕೆ ಆಯ್ಕೆ ಮಾಡಿದಾಗ ಆತನ ನೋವಿನ ಕಟ್ಟೆ ಹೊಡೆದಿತ್ತು. ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ 23 ವರ್ಷದ ಚೇತನ್ ಸಕರಿಯಾ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ನನ್ನ ತಂದೆ ಇಂದು ಇಲ್ಲಿದ್ದರೆ ನನ್ನನ್ನು ಟೀಮ್ ಇಂಡಿಯಾದ ಜರ್ಸಿಯಲ್ಲಿ ನೋಡಬಹುದಿತ್ತು ಎಂದು ಹೇಳಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕಾಗಿ ಟೀಮ್ ಇಂಡಿಯಾದ 20 ಹೆಸರುಗಳನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ 5 ಹೊಸ ಮುಖಗಳನ್ನು ಸೇರಿಸಲಾಗಿದೆ. ಅವುಗಳಲ್ಲಿ ಒಂದು ಚೇತನ್ ಸಕಾರಿಯಾ. ಇವರಲ್ಲದೆ ರಿತುರಾಜ್ ಗಾಯಕವಾಡ್, ದೇವದತ್ ಪಡಿಕ್ಕಲ್, ನಿತೀಶ್ ರಾಣಾ ಮತ್ತು ಕೃಷ್ಣಪ್ಪ ಗೌತಮ್ ಅವರ ಹೆಸರುಗಳು ಸೇರಿವೆ. ಜುಲೈನಲ್ಲಿ ಏಕದಿನ ಮತ್ತು ಟಿ 20 ಸರಣಿಗಾಗಿ ಶ್ರೀಲಂಕಾ ಪ್ರವಾಸ ನಡೆಯಲಿದ್ದು, ತಂಡದ ನಾಯಕನಾಗಿ ಶಿಖರ್ ಧವನ್ ಮತ್ತು ಉಪನಾಯಕನಾಗಿ ಭುವನೇಶ್ವರ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ರಾಹುಲ್ ದ್ರಾವಿಡ್ ಈ ತಂಡದ ಕೋಚ್ ಆಗಿರುತ್ತಾರೆ.

ಕಳೆದ 1 ವರ್ಷ ಏರಿಳಿತಗಳಿಂದ ತುಂಬಿವೆ ಹೊಸ ಮುಖಗಳಲ್ಲಿ, ಟೀಮ್ ಇಂಡಿಯಾವನ್ನು ತಲುಪುವ ಸಕಾರಿಯಾ ಅವರ ಪ್ರಯಾಣವು ನೋವಿನ ಸರಮಾಲೆಯಿಂದ ಕೂಡಿದೆ. ಕಳೆದ ಒಂದು ವರ್ಷ ಅವರ ಜೀವನದಲ್ಲಿ ಪ್ರಕ್ಷುಬ್ಧವಾಗಿದೆ. ಅವರು ಮೊದಲು ತನ್ನ ಕಿರಿಯ ಸಹೋದರನನ್ನು ಕಳೆದುಕೊಳ್ಳಬೇಕಾಯಿತು. ನಂತರ ಐಪಿಎಲ್ 2021 ರ ಹರಾಜಿನಲ್ಲಿ ರಾಜಸ್ಥಾನ್ ರಾಯಲ್ಸ್ 1.2 ಕೋಟಿ ಬಿಡ್ ಮಾಡಿ ಕೊಂಡುಕೊಂಡಿತ್ತು. ಅದೇ ಸಮಯದಲ್ಲಿ, ಈ ಯುವ ಸೌರಾಷ್ಟ್ರ ಬೌಲರ್ ಐಪಿಎಲ್ 2021 ರಲ್ಲಿ ಕೊರೊನಾ ಕಾರಣದಿಂದಾಗಿ ತಂದೆಯನ್ನು ಕಳೆದುಕೊಳ್ಳಬೇಕಾಯಿತು.

ಚೇತನ್ ಸಕಾರಿಯಾ ಭಾವನಾತ್ಮಕ ನುಡಿ ಈಗ ಚೇತನ್ ಸಕಾರಿಯಾ ಅವರನ್ನು ಟೀಮ್ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ. ಇಂತಹ ಸಂದರ್ಭದಲ್ಲಿ ಸಕಾರಿಯಾ ಮನಬಿಚ್ಚಿ ಮಾತನಾಡಿದ್ದಾರೆ. 23 ವರ್ಷದ ಬೌಲರ್ ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ, “ಈ ದಿನವನ್ನು ನೋಡಲು ನನ್ನ ತಂದೆ ಜೀವಂತವಾಗಿದ್ದಾರೆ ಎಂದು ನಾನು ಬಯಸುತ್ತೇನೆ. ಅವರು ನಾನು ಟೀಂ ಇಂಡಿಯಾದಲ್ಲಿ ಆಡುವುದನ್ನ ನೋಡಬೇಕೆಂದು ಬಯಸಿದ್ದರು. ಇಂದು ನಾನು ಅವರನ್ನು ಬಹಳಷ್ಟು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ ಒಂದು ವರ್ಷ ಇದು ನನ್ನ ಜೀವನದಲ್ಲಿ ಏರಿಳಿತಗಳಲ್ಲಿ ಒಂದಾಗಿದೆ. ಇದು ನನಗೆ ಒಂದು ಭಾವನಾತ್ಮಕ ಕ್ಷಣವಾಗಿದೆ. ನನ್ನ ದಿವಂಗತ ತಂದೆ ಮತ್ತು ನನ್ನ ತಾಯಿಗಾಗಿ ನಾನು ಕ್ರಿಕೆಟ್ ಆಡಬೇಕೆಂದು ಬಯಸಿದ್ದೆ ಎಂದು ಸಕಾರಿಯಾ ಹೇಳಿಕೊಂಡಿದ್ದಾರೆ.

ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ಮನೆಯೊಂದರ ಬೆಡ್​ರೂಂನಲ್ಲಿ 2 ಹಾವುಗಳ ಜಗಳ; ಬೆಚ್ಚಿ ಬೀಳಿಸುವ ವಿಡಿಯೋ ವೈರಲ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
ರಾತ್ರೋರಾತ್ರಿ ಬಳ್ಳಾರಿ ಜೈಲಿನಿಂದ ಆಂಬ್ಯುಲೆನ್ಸ್​ ಮೂಲಕ ದರ್ಶನ್ ಶಿಫ್ಟ್
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
20 ರೂಪಾಯಿಗಾಗಿ ಜಗಳ; ರಿಕ್ಷಾ ಚಾಲಕನಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಜೈಲಿನಲ್ಲಿ ದರ್ಶನ್ ಭೇಟಿ ಬಳಿಕ ಬೇಸರ ಮಾಡಿಕೊಂಡು ಹೊರಟ ವಿಜಯಲಕ್ಷ್ಮಿ
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾರ್ಕಿಂಗ್​ಗೆ ಅವಕಾಶ ನೀಡದ ಸೆಕ್ಯುರಿಟಿ ಮೇಲೆ ಮಹಿಳೆಯಿಂದ ಅಟ್ಯಾಕ್
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಪಾಕ್ ಪರ ಘೋಷಣೆ ಕೂಗಿದ್ದಕ್ಕೆ 21 ಬಾರಿ ಭಾರತ್ ಮಾತಾಕಿ ಜೈ ಹೇಳಿಸಿದ ಕೋರ್ಟ್!
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ