AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ.

ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ
ಮನು ಸಾಹ್ನಿ
ಡಾ. ಭಾಸ್ಕರ ಹೆಗಡೆ
| Edited By: |

Updated on: Jul 09, 2021 | 2:13 PM

Share

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಇವರ ಬದಲು ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಳೆದ ವರ್ಷ ಹೊಸ ಅಧ್ಯಕ್ಷರ ಪಟ್ಟಕ್ಕಾಗಿ ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ಸಾಹ್ನಿ ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಸಹೋದ್ಯೋಗಿಗಳ ಜೊತೆ ದುರ್ನಡತೆಯಿಂದ ವರ್ತಿಸಿದ ಕಾರಣ ಇದರ ಬಗ್ಗೆ ಪರಿಶೀಲನೆ ನಡೆಸಿ ಇವರನ್ನು ಕಳೆದ ಮಾರ್ಚ್​ನಲ್ಲಿ ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು.

2019ರಲ್ಲಿ ಐಸಿಸಿ ವಿಶ್ವಕಪ್ ನಂತರ 2022ರವರೆಗೆ ಅಧಿಕಾರಾವಧಿಯಲ್ಲಿ ಡೇವ್ ರಿಚರ್ಡ್‌ಸನ್‌ ಸ್ಥಾನಕ್ಕೆ ಬಂದಿದ್ದ ಸಾಹ್ನಿ, ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಿ ಕ್ರಿಕೆಟ್ ಮಂಡಳಿಗಳೊಂದಿಗೆ ಉತ್ತಮ ಸಂಬಂಧವನ್ನು ಕೂಡ ಹೊಂದಿರಲಿಲ್ಲ.

ಸದ್ಯ ಮನು ಸಾವ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅಲಾರ್ಡಿಸ್ ಅವರಿಗೆ ಐಸಿಸಿಯ ಆಡಳಿತ ಮಂಡಳಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಇದನ್ನೂ ಓದಿ: 

ICC Rankings: ಕನ್ನಡಿಗ ಕೆ.ಎಲ್. ರಾಹುಲ್​ಗೆ ಮುಂಬಡ್ತಿ! ಬುಮ್ರಾ, ಜಡೇಜಾಗೆ ಹಿನ್ನೆಡೆ, ಕೊಹ್ಲಿ-ರೋಹಿತ್ ಯಥಾಸ್ಥಿತಿ

ICC Test Rankings: ನಂ.1 ಪಟ್ಟಕ್ಕೇರಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್‌! ರೋಹಿತ್-ರಹಾನೆಗೆ ಲಾಭ, ಕೊಹ್ಲಿ ಸ್ಥಿರ

( ICC CEO Manu Sawhney resigned from International Cricket Council and moves out immediately )

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!