AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ.

ICC CEO Resignation: ಐಸಿಸಿ ಸಿಇಓ, ಮನು ಸಾಹ್ನಿ ರಾಜೀನಾಮೆ
ಮನು ಸಾಹ್ನಿ
ಡಾ. ಭಾಸ್ಕರ ಹೆಗಡೆ
| Updated By: ಪೃಥ್ವಿಶಂಕರ|

Updated on: Jul 09, 2021 | 2:13 PM

Share

ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯ ಮುಖ್ಯ ಕಾರ್ಯನಿರ್ವಹಣ ಅಧಿಕಾರಿ ಮನು ಸಾಹ್ನಿ  ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದುರ್ವರ್ತನೆಯಿಂದಾಗಿ ತನಿಖೆಗೆ ಒಳಗಾಗಿರುವ ಇವರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು. ಮನು ಸಾಹ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಇವರ ಬದಲು ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಕಳೆದ ವರ್ಷ ಹೊಸ ಅಧ್ಯಕ್ಷರ ಪಟ್ಟಕ್ಕಾಗಿ ಚುನಾವಣಾ ಪ್ರಕ್ರಿಯೆ ಆರಂಭವಾದಾಗಿನಿಂದ ಸಾಹ್ನಿ ಸಂಕಷ್ಟಕ್ಕೆ ಸಿಲುಕಿದ್ದರು. ಬಳಿಕ ಸಹೋದ್ಯೋಗಿಗಳ ಜೊತೆ ದುರ್ನಡತೆಯಿಂದ ವರ್ತಿಸಿದ ಕಾರಣ ಇದರ ಬಗ್ಗೆ ಪರಿಶೀಲನೆ ನಡೆಸಿ ಇವರನ್ನು ಕಳೆದ ಮಾರ್ಚ್​ನಲ್ಲಿ ಕಡ್ಡಾಯ ರಜೆಯಲ್ಲಿ ಕಳುಹಿಸಲಾಗಿತ್ತು.

2019ರಲ್ಲಿ ಐಸಿಸಿ ವಿಶ್ವಕಪ್ ನಂತರ 2022ರವರೆಗೆ ಅಧಿಕಾರಾವಧಿಯಲ್ಲಿ ಡೇವ್ ರಿಚರ್ಡ್‌ಸನ್‌ ಸ್ಥಾನಕ್ಕೆ ಬಂದಿದ್ದ ಸಾಹ್ನಿ, ವಿವಿಧ ನೀತಿ ನಿರ್ಧಾರಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಭಾವಿ ಕ್ರಿಕೆಟ್ ಮಂಡಳಿಗಳೊಂದಿಗೆ ಉತ್ತಮ ಸಂಬಂಧವನ್ನು ಕೂಡ ಹೊಂದಿರಲಿಲ್ಲ.

ಸದ್ಯ ಮನು ಸಾವ್ನಿ ಅವರ ರಾಜೀನಾಮೆಯನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ. ಜೆಫ್ ಅಲಾರ್ಡಿಸ್ ಅವರನ್ನು ಹಂಗಾಮಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಅಲಾರ್ಡಿಸ್ ಅವರಿಗೆ ಐಸಿಸಿಯ ಆಡಳಿತ ಮಂಡಳಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ.

ಇದನ್ನೂ ಓದಿ: 

ICC Rankings: ಕನ್ನಡಿಗ ಕೆ.ಎಲ್. ರಾಹುಲ್​ಗೆ ಮುಂಬಡ್ತಿ! ಬುಮ್ರಾ, ಜಡೇಜಾಗೆ ಹಿನ್ನೆಡೆ, ಕೊಹ್ಲಿ-ರೋಹಿತ್ ಯಥಾಸ್ಥಿತಿ

ICC Test Rankings: ನಂ.1 ಪಟ್ಟಕ್ಕೇರಿದ ಕಿವೀಸ್ ನಾಯಕ ಕೇನ್ ವಿಲಿಯಮ್ಸನ್‌! ರೋಹಿತ್-ರಹಾನೆಗೆ ಲಾಭ, ಕೊಹ್ಲಿ ಸ್ಥಿರ

( ICC CEO Manu Sawhney resigned from International Cricket Council and moves out immediately )

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್