AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC award Rishabh Pant ವಿಕೆಟ್​ ಕೀಪರ್ – ಬ್ಯಾಟ್ಸ್​ಮನ್ ರಿಷಬ್​ ಪಂತ್​ ಅದ್ಭುತ ಆಟಕ್ಕೆ ICC ಯಿಂದ ಸಿಕ್ತು ವಿಶೇಷ ಗೌರವ!

ICC prize Rishabh Pant ಇಂಗ್ಲೆಂಡ್​ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಟೆಸ್ಟ್​ನಲ್ಲೂ ರಿಷಬ್​ ಪಂತ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ 91 ರನ್​ ಗಳಿಸಿದ್ದರು. Player of the Month award

ICC award Rishabh Pant ವಿಕೆಟ್​ ಕೀಪರ್ - ಬ್ಯಾಟ್ಸ್​ಮನ್ ರಿಷಬ್​ ಪಂತ್​ ಅದ್ಭುತ ಆಟಕ್ಕೆ ICC ಯಿಂದ ಸಿಕ್ತು ವಿಶೇಷ ಗೌರವ!
ರಿಶಬ್​ ಪಂತ್​
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on: Feb 08, 2021 | 4:43 PM

Share

ಕಳೆದ ಕೆಲ ಮ್ಯಾಚ್​ಗಳಿಂದ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತದ ವಿಕೆಟ್​ ಕೀಪರ್​ ಹಾಗೂ ಬ್ಯಾಟ್ಸ್​ಮನ್​ ರಿಷಬ್​ ಪಂತ್​ಗೆ ಐಸಿಸಿಯ ತಿಂಗಳ ಆರಂಭಿಕ ಆಟಗಾರ ಪ್ರಶಸ್ತಿ ದೊರೆತಿದೆ. ಈ ಮೂಲಕ ಟೀಂ ಇಂಡಿಯಾಗೆ ವಿಶೇಷ ಕೊಡುಗೆ ನೀಡುತ್ತಿರುವ ರಿಷಬ್​ಗೆ ಐಸಿಸಿ ವಿಶೇಷವಾಗಿ ಗೌರವ ಸಲ್ಲಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ನಡೆದ ಟೆಸ್ಟ್​ ಮ್ಯಾಚ್​ನಲ್ಲಿ ರಿಷಬ್​ ಪಂತ್​ ಅತ್ಯದ್ಭುತ  ಪ್ರದರ್ಶನ ನೀಡಿದ್ದರು. ಸಿಡ್ನಿ ಟೆಸ್ಟ್​​ನಲ್ಲಿ 97 ಹಾಗೂ ಬ್ರಿಸ್​ಬೇನ್​​ನಲ್ಲಿ ಔಟ್​ ಆಗದೆ 89 ರನ್​ ಬಾರಿಸಿದ್ದರು. ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಲು ಇದು ತುಂಬಾನೇ ಸಹಕಾರಿಯಾಗಿತ್ತು. ಇದನ್ನು ಗಮನಿಸಿ ಆಸ್ಟ್ರೇಲಿಯಾ ಈ ಪ್ರಶಸ್ತಿ ನೀಡಿದೆ.

ಐಸಿಸಿ ನೀಡಿದ ವಿಶೇಷ ಗೌರವ ತೆಗೆದುಕೊಂಡ ನಂತರ ಮಾತನಾಡಿರುವ ರಿಷಬ್​ ಪಂತ್​, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವುದು ಪ್ರತಿ ಆಟಗಾರನಿಗೂ ಹೆಮ್ಮೆಯ ವಿಚಾರ. ಈ ರೀತಿ ಘಟನೆಗಳಿಂದ ಯುವ ಆಟಗಾರರಲ್ಲಿ ಹೊಸ ಚೈತನ್ಯ ಮೂಡುತ್ತದೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಮ್ಮ ತಂಡದ ಪ್ರತಿ ಆಟಗಾರನಿಗೆ ನಾನು ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ. ನನಗೆ ವೋಟ್​ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ​.

ಇನ್ನು, ಇಂಗ್ಲೆಂಡ್​ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಟೆಸ್ಟ್​ನಲ್ಲೂ ರಿಷಬ್​ ಪಂತ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ 91 ರನ್​ ಗಳಿಸಿದ್ದರು.

ಐಸಿಸಿ ಪ್ರಶಸ್ತಿ ಗೆದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಐಸಿಸಿ ವೋಟಿಂಗ್​ ಅಕಾಡೆಮಿಯ ಸದಸ್ಯ ರಮೀಜ್​ ರಾಜಾ, ರಿಷಬ್​ ಪಂತ್​ ಒತ್ತಡದಲ್ಲಿ ಆಡಿದ ಸಂದರ್ಭದಲ್ಲೇ ಹೆಚ್ಚು ಅದ್ಭುತವಾಗಿ ಆಡಿದ್ದಾರೆ ಎಂದಿದ್ದಾರೆ. ಪ್ರತಿ ತಿಂಗಳಲ್ಲಿ ಆಟಗಾರರ ಪ್ರದರ್ಶನವನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗುತ್ತೆ. ಅಭಿಮಾನಿಗಳು ಹಾಗೂ ಐಸಿಸಿ ವೋಟಿಂಗ್​ ಅಕಾಡೆಮಿ ಅವರು ಮಾಡುವ ಮತಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಐಸಿಸಿ ದಶಕದ ಆಟಗಾರ ಪ್ರಶಸ್ತಿಯ ಎಲ್ಲ ಕೆಟೆಗಿರಿಗಳಿಗೆ ಕೊಹ್ಲಿ ಹೆಸರು ನಾಮಿನೇಟ್ ಅಗಿದೆ!

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು