AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC award Rishabh Pant ವಿಕೆಟ್​ ಕೀಪರ್ – ಬ್ಯಾಟ್ಸ್​ಮನ್ ರಿಷಬ್​ ಪಂತ್​ ಅದ್ಭುತ ಆಟಕ್ಕೆ ICC ಯಿಂದ ಸಿಕ್ತು ವಿಶೇಷ ಗೌರವ!

ICC prize Rishabh Pant ಇಂಗ್ಲೆಂಡ್​ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಟೆಸ್ಟ್​ನಲ್ಲೂ ರಿಷಬ್​ ಪಂತ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ 91 ರನ್​ ಗಳಿಸಿದ್ದರು. Player of the Month award

ICC award Rishabh Pant ವಿಕೆಟ್​ ಕೀಪರ್ - ಬ್ಯಾಟ್ಸ್​ಮನ್ ರಿಷಬ್​ ಪಂತ್​ ಅದ್ಭುತ ಆಟಕ್ಕೆ ICC ಯಿಂದ ಸಿಕ್ತು ವಿಶೇಷ ಗೌರವ!
ರಿಶಬ್​ ಪಂತ್​
Follow us
ರಾಜೇಶ್ ದುಗ್ಗುಮನೆ
| Updated By: ಸಾಧು ಶ್ರೀನಾಥ್​

Updated on: Feb 08, 2021 | 4:43 PM

ಕಳೆದ ಕೆಲ ಮ್ಯಾಚ್​ಗಳಿಂದ ಅದ್ಭುತ ಪ್ರದರ್ಶನ ನೀಡುತ್ತಿರುವ ಭಾರತದ ವಿಕೆಟ್​ ಕೀಪರ್​ ಹಾಗೂ ಬ್ಯಾಟ್ಸ್​ಮನ್​ ರಿಷಬ್​ ಪಂತ್​ಗೆ ಐಸಿಸಿಯ ತಿಂಗಳ ಆರಂಭಿಕ ಆಟಗಾರ ಪ್ರಶಸ್ತಿ ದೊರೆತಿದೆ. ಈ ಮೂಲಕ ಟೀಂ ಇಂಡಿಯಾಗೆ ವಿಶೇಷ ಕೊಡುಗೆ ನೀಡುತ್ತಿರುವ ರಿಷಬ್​ಗೆ ಐಸಿಸಿ ವಿಶೇಷವಾಗಿ ಗೌರವ ಸಲ್ಲಿಸಿದೆ. ಆಸ್ಟ್ರೇಲಿಯಾ ನೆಲದಲ್ಲಿ ನಡೆದ ಟೆಸ್ಟ್​ ಮ್ಯಾಚ್​ನಲ್ಲಿ ರಿಷಬ್​ ಪಂತ್​ ಅತ್ಯದ್ಭುತ  ಪ್ರದರ್ಶನ ನೀಡಿದ್ದರು. ಸಿಡ್ನಿ ಟೆಸ್ಟ್​​ನಲ್ಲಿ 97 ಹಾಗೂ ಬ್ರಿಸ್​ಬೇನ್​​ನಲ್ಲಿ ಔಟ್​ ಆಗದೆ 89 ರನ್​ ಬಾರಿಸಿದ್ದರು. ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ಗೆಲುವು ಸಾಧಿಸಲು ಇದು ತುಂಬಾನೇ ಸಹಕಾರಿಯಾಗಿತ್ತು. ಇದನ್ನು ಗಮನಿಸಿ ಆಸ್ಟ್ರೇಲಿಯಾ ಈ ಪ್ರಶಸ್ತಿ ನೀಡಿದೆ.

ಐಸಿಸಿ ನೀಡಿದ ವಿಶೇಷ ಗೌರವ ತೆಗೆದುಕೊಂಡ ನಂತರ ಮಾತನಾಡಿರುವ ರಿಷಬ್​ ಪಂತ್​, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುವುದು ಪ್ರತಿ ಆಟಗಾರನಿಗೂ ಹೆಮ್ಮೆಯ ವಿಚಾರ. ಈ ರೀತಿ ಘಟನೆಗಳಿಂದ ಯುವ ಆಟಗಾರರಲ್ಲಿ ಹೊಸ ಚೈತನ್ಯ ಮೂಡುತ್ತದೆ. ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಮ್ಮ ತಂಡದ ಪ್ರತಿ ಆಟಗಾರನಿಗೆ ನಾನು ಈ ಪ್ರಶಸ್ತಿಯನ್ನು ಅರ್ಪಿಸುತ್ತಿದ್ದೇನೆ. ನನಗೆ ವೋಟ್​ ಮಾಡಿದ ಪ್ರತಿಯೊಬ್ಬರಿಗೂ ಧನ್ಯವಾದಗಳು ಎಂದಿದ್ದಾರೆ​.

ಇನ್ನು, ಇಂಗ್ಲೆಂಡ್​ ವಿರುದ್ಧ ಚೆನ್ನೈನಲ್ಲಿ ನಡೆಯುತ್ತಿರುವ ಟೆಸ್ಟ್​ನಲ್ಲೂ ರಿಷಬ್​ ಪಂತ್​ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಮೊದಲ ಇನ್ನಿಂಗ್ಸ್​ನಲ್ಲಿ 91 ರನ್​ ಗಳಿಸಿದ್ದರು.

ಐಸಿಸಿ ಪ್ರಶಸ್ತಿ ಗೆದ್ದಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಪಾಕಿಸ್ತಾನದ ಮಾಜಿ ನಾಯಕ ಹಾಗೂ ಐಸಿಸಿ ವೋಟಿಂಗ್​ ಅಕಾಡೆಮಿಯ ಸದಸ್ಯ ರಮೀಜ್​ ರಾಜಾ, ರಿಷಬ್​ ಪಂತ್​ ಒತ್ತಡದಲ್ಲಿ ಆಡಿದ ಸಂದರ್ಭದಲ್ಲೇ ಹೆಚ್ಚು ಅದ್ಭುತವಾಗಿ ಆಡಿದ್ದಾರೆ ಎಂದಿದ್ದಾರೆ. ಪ್ರತಿ ತಿಂಗಳಲ್ಲಿ ಆಟಗಾರರ ಪ್ರದರ್ಶನವನ್ನು ಗಮನಿಸಿ ಈ ಪ್ರಶಸ್ತಿ ನೀಡಲಾಗುತ್ತೆ. ಅಭಿಮಾನಿಗಳು ಹಾಗೂ ಐಸಿಸಿ ವೋಟಿಂಗ್​ ಅಕಾಡೆಮಿ ಅವರು ಮಾಡುವ ಮತಗಳನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತದೆ.

ಐಸಿಸಿ ದಶಕದ ಆಟಗಾರ ಪ್ರಶಸ್ತಿಯ ಎಲ್ಲ ಕೆಟೆಗಿರಿಗಳಿಗೆ ಕೊಹ್ಲಿ ಹೆಸರು ನಾಮಿನೇಟ್ ಅಗಿದೆ!

ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ